ಸ್ಯಾಂಡಲ್ ವುಡ್ ಮಾಣಿಕ್ಯ ಕಿಚ್ಚ ಸುದೀಪ್ ಹುಟ್ಟುಹಬ್ಬದ ಪ್ರಯುಕ್ತ ಅಭಿಮಾನಿಗಳು ಎಲ್ಲೆಡೆ ದಾನ ಧರ್ಮ ಮಾಡುವ ಮೂಲಕ ಆಚರಣೆ ಅದ್ಧೂರಿಯಾಗಿ ನಡೆಯುತ್ತಿದೆ.
ಅಭಿಮಾನಿಗಳನ್ನು ಸ್ನೇಹಿತರೆಂದು ಕರೆದು ಪ್ರೀತಿ ತೋರಿಸುವ ಸ್ಯಾಂಡಲ್ ವುಡ್ ಬಚ್ಚನ್ ಇಂದು 46 ನೇ ವಸಂತಕ್ಕೆ ಕಾಲಿಡುತ್ತಿದ್ದಾರೆ. ಕಿಚ್ಚನ ಅಭಿಮಾನಿಗಳಿಗೆ ಇಂದು ಡಬಲ್ ಧಮಾಕ. ಒಂದೆಡೆ ಗೌರಿ-ಗಣೇಶ ಹಬ್ಬ ಮತ್ತೊಂದೆಡೆ ಕಿಚ್ಚ ಸುದೀಪ್ ಹುಟ್ಟು ಹಬ್ಬ. ಇನ್ನು ಉತ್ತರ ಕರ್ನಾಟಕ ಪ್ರವಾಹದ ಪ್ರಯುಕ್ತ ಸರಳವಾಗಿ ಹುಟ್ಟುಹಬ್ಬವನ್ನು ಆಚರಿಸಲು ಸುದೀಪ್ ನಿರ್ಧರಿಸಿದ್ದಾರೆ.
ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅಣ್ಣನವರ ಹುಟ್ಟುಹಬ್ಬದ ಪ್ರಯುಕ್ತ ಇಂದು ಹೆಚ್. ಡಿ. ಕೋಟೆಯಲ್ಲಿ ಸುದೀಪ್ ಅಣ್ಣನವರ ಅಭಿಮಾನಿಗಳು ಅನ್ನ ಸಂತರ್ಪಣೆಯನ್ನು ಮಾಡಿದ ಕ್ಷಣ.
ಅ ದೇವರು ನಿಮಗೆ ಆಯುಷ್ ಅರೋಗ್ಯ ಕೊಟ್ಟು ಕಾಪಾಡಲಿ ಅಣ್ಣ 🙏❣️ pic.twitter.com/vjD1Z2pHNW
ಹುಟ್ಟು ಹಬ್ಬದ ಪ್ರಯುಕ್ತ ಹೆಚ್.ಡಿ. ಕೋಟೆಯಲ್ಲಿ ಸುದೀಪ್ ಅಭಿಮಾನಿಗಳು ಅನ್ನ ಸಂತರ್ಪಣೆಯನ್ನು ಮಾಡಿ ಸುದೀಪ್ ಗೆ ಆ ದೇವರು ಆಯುಷ್ಯ ಆರೋಗ್ಯ ಕೊಟ್ಟು ಕಾಪಾಡಲಿ ಎಂದು ಆಶಿಸಿದ್ದಾರೆ. ಇನ್ನು ಕೆಲವರು ಚಿಕ್ಕ ಕಿರುಕಾಣಿಕೆಯಾಗಿ ರಕ್ತದಾನ ಮಾಡಿದ್ದಾರೆ. ಒಟ್ಟಿನಲ್ಲಿ ಒಳ್ಳೊಳ್ಳೆ ಕೆಲಸಗಳ ಮೂಲಕ ಸುದೀಪ್ ಹುಟ್ಟುಹಬ್ಬವನ್ನು ಸಾರ್ಥಕಗೊಳಿಸುತ್ತಿದ್ದಾರೆ ಅಭಿಮಾನಿಗಳು.
ಅಣ್ಣ ನಿಮ್ಮ ಹುಟ್ಟು ಹಬ್ಬಕ್ಕೆ ನನ್ನ ಚಿಕ್ಕಕಿರು ಕಾಣಿಕೆ ಅಣ್ಣ😍 pic.twitter.com/vLxO8CWsIs
— Pailwan Kumar Kiccha (@KumarKiccha2)