ಮಾಧ್ಯಮದವರಿಗೆ ಐಡಿಯಾ ಕೊಟ್ಟ ಉಪ್ಪಿ; ಹೀಗ್ಮಾಡಿದ್ರೆ ಏನಾಗುತ್ತೆ?

Published : Oct 03, 2019, 11:28 AM ISTUpdated : Oct 03, 2019, 11:46 AM IST
ಮಾಧ್ಯಮದವರಿಗೆ ಐಡಿಯಾ ಕೊಟ್ಟ ಉಪ್ಪಿ; ಹೀಗ್ಮಾಡಿದ್ರೆ ಏನಾಗುತ್ತೆ?

ಸಾರಾಂಶ

ಕರ್ನಾಟಕ ಬರ ಪರಿಹಾರ ವಿಚಾರದಲ್ಲಿ ಕೇಂದ್ರದ ವಿಳಂಬ ನೀತಿಗೆ ವಿರೋಧ | ಕೇಂದ್ರವನ್ನು ಸಮರ್ಥಿಸುವ ಭರದಲ್ಲಿ ಬಿಜೆಪಿ ಸಂಸದರ ಎಡವಟ್ಟು | ಮಾಧ್ಯಮದವರಿಗೆ ಉಪೇಂದ್ರ ಸಲಹೆ 

ಈ ಬಾರಿಯ ವರುಣರಾಯನ ಅಬ್ಬರಕ್ಕೆ ಇಡೀ ಕರುನಾಡು ತತ್ತರಿಸಿದೆ. ಆಸ್ತಿ, ಮನೆಗಳನ್ನು ಕಳೆದುಕೊಂಡು ಅತಂತ್ರರಾಗಿದ್ದಾರೆ. ಬಹುತೇಕ ಮಂದಿ ಇರಲು ಒಂದು ಸೂರೂ ಇಲ್ಲದೇ ನಿರ್ಗತಿಕರಾಗಿದ್ದಾರೆ. ನೆರೆ ಸಂತ್ರಸ್ತರಿಗೆ ಕೇಂದ್ರ ಸರ್ಕಾರ ಇನ್ನೂ ಬರ ಪರಿಹಾರ ನೀಡಿಲ್ಲ. ವಿಳಂಬ ನೀತಿ ಅನುಸರಿಸುತ್ತದೆ ಎನ್ನುವ ವಿಚಾರ ಕೆಲ ದಿನಗಳಿಂದ ಸೋಷಿಯಲ್ ಮೀಡಿಯಾದಲ್ಲಿ ಚರ್ಚೆಯಾಗುತ್ತಿದೆ. 

ಪ್ರಶ್ನೆ ಕೇಳಿದ ಸೂಲಿಬೆಲೆ, ಸುವರ್ಣ ನ್ಯೂಸ್ ಗೆ ಗೌಡರಿಂದ ಬ್ಲಾಕ್ ಭಾಗ್ಯ, ಆದ್ರೇನಾಯ್ತು!

ಉತ್ತರ ಬಾರತದಲ್ಲಿ ಪ್ರವಾಹ ಬಂದಿದ್ದು ಪ್ರಧಾನಿ ಮೋದಿ ನಿಮ್ಮ ನೆರವಿಗೆ ನಾವಿದ್ದೇವೆ ಎಂದು ಬಿಹಾರವನ್ನು ಉದ್ದೇಶಿಸಿ ಮಾಡಿದ ಟ್ವೀಟ್ ಗೆ ಕನ್ನಡಿಗರು ಕೆಂಡಾಮಂಡಲವಾಗಿದ್ದರು. ಕರ್ನಾಟಕದ ಬಗ್ಗೆ ಪ್ರಧಾನಿ ಮೌನವನ್ನು ಕನ್ನಡಿಗರು ಪ್ರಶ್ನೆ ಮಾಡಿದ್ದು ಭಾರೀ ಚರ್ಚೆಗೆ ಕಾರಣವಾಗಿದೆ. ಈ ಬಗ್ಗೆ ಕೇಂದ್ರ ರಸಗೊಬ್ಬರ ಖಾತೆ ಸಚಿವ ಸದಾನಂದ ಗೌಡ ಹಾಗೂ ಚಿಂತಕ ಚಕ್ರವರ್ತಿ ಸೂಲಿಬೆಲೆ ಟ್ವಿಟರ್ ವಾರ್ ಸಿಕ್ಕಾಪಟ್ಟೆ ಚರ್ಚೆಯಾಗಿದೆ. ಜೊತೆಗೆ ಪ್ರತಾಪ್ ಸಿಂಹ ಹೇಳಿಕೆ ಕೂಡಾ ಸಿಕ್ಕಾಪಟ್ಟೆ ಚರ್ಚೆಯಾಗಿತ್ತು. ಈ ಎಲ್ಲಾ ಪ್ರಹಸನಗಳನ್ನು ನೋಡಿ ರಿಯಲ್ ಸ್ಟಾರ್ ಉಪೇಂದ್ರ ಮಾಧ್ಯಮದವರನ್ನುದ್ದೇಶಿಸಿ ಟ್ವೀಟ್ ಮಾಡಿದ್ದಾರೆ. 

 

ಎಲ್ಲಾ ಮಾದ್ಯಮಗಳ ಗಮನಕ್ಕೆ.....  ತಾವೆಲ್ಲರೂ ರಾಜಕಾರಿಣಿಗಳನ್ನು ಸಂಪೂರ್ಣವಾಗಿ ತ್ಯಜಿಸಿ,ನಿಷೇದಿಸಿ ಪ್ರಜೆಗಳ ಸುದ್ದಿಗಳನ್ನು ಮಾತ್ರ ಬಿತ್ತರಿಸಲು, ಪ್ರಕಟಿಸಲು ಶುರುಮಾಡಿದರೆ ಏನಾಗಬಹುದು ?ಎಂದು ಪ್ರಶ್ನಿಸಿದ್ದಾರೆ. ಇದಕ್ಕೆ ನೆಟ್ಟಿಗರು ತಮಾಷೆ ಮಾಡಿದ್ದು ಹೀಗೆ  

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

click me!

Recommended Stories

Bigg Boss ಗಿಲ್ಲಿ ಬಗ್ಗೆ ನಿಮ್ಗೆ ಗೊತ್ತಿಲ್ಲ, ರಘು ಚಪಾತಿ ಕೊಡದ ಕಾರಣ ನಾನ್​ ಹೇಳ್ತೀನಿ ಕೇಳಿ' ಎಂದ ಅಭಿಷೇಕ್
ಹೆಂಡ್ತಿಯನ್ನು ಹೇಗೆ ನೋಡಿಕೊಳ್ಳಬೇಕು? ಬೆಸ್ಟ್​ ಪತಿಯಾಗಲು ಮಾಳುಗೆ Bigg Boss ರಕ್ಷಿತಾ ಶೆಟ್ಟಿ ಏನೆಲ್ಲಾ ಟಿಪ್ಸ್​ ಕೊಟ್ರು ನೋಡಿ!