‘ಅದ್ಧೂರಿ’ ಜೋಡಿಗೆ ಶುಭಕೋರಿದ ದರ್ಶನ್, ಸ್ಯಾಂಡಲ್‌ವುಡ್ ಸ್ಟಾರ್ಸ್

Dec 9, 2018, 4:27 PM IST

ನಟ ಧ್ರುವ ಸರ್ಜಾ, ತನ್ನ ಆಸೆಯಂತೆ ಆಂಜನೇಯ ದೇವಸ್ಥಾನದಲ್ಲಿ ಹದಿನಾರು ವರ್ಷದಿಂದ ಪ್ರೀತಿಸುತ್ತಿದ್ದ ಬಾಲ್ಯದ ಗೆಳತಿ ಪ್ರೇರಣಾಳೊಂದಿಗೆ ನಿಶ್ಚಿತಾರ್ಥ ನೆರವೇರಿಸಿಕೊಂಡಿದ್ದಾರೆ. ಕಲಾ ನಿರ್ದೇಶಕ ಅರುಣ್ ಸಾಗರ್ ನೇತೃತ್ವದಲ್ಲಿ ನಿರ್ಮಾಣವಾದ ತೆಂಗಿನ ಗರಿ, ಮಾವಿನ ಎಲೆಯ ಹಸಿರು ತಳಿರು-ತೋರಣಗಳಿಂದ ಕೂಡಿದ ವೇದಿಕೆಯಲ್ಲಿ ಪ್ರೇರಣಾ ಹಾಗೂ ಧ್ರುವ ಪರಸ್ಪರ ಉಂಗುರ ಬದಲಿಸಿಕೊಂಡಿದ್ದಾರೆ. ಈ ಸಂದರ್ಭದಲ್ಲಿ ದರ್ಶನ್ ಸೇರಿದಂತೆ ಸ್ಯಾಂಡಲ್‌ವುಡ್‌ನ ಗಣ್ಯರು ಭಾಗವಹಿಸಿ ಧ್ರುವ ಹಾಗೂ ಪ್ರೇರಣಾಗೆ ಶುಭಕೋರಿದ್ದಾರೆ.