ಇವತ್ತೇ ರಿಲೀಸ್ : ನೈಜ ಕತೆಯ ‘ಗಲ್ಲಿ ಬೇಕರಿ’

Published : Nov 09, 2018, 09:32 AM IST
ಇವತ್ತೇ ರಿಲೀಸ್ : ನೈಜ ಕತೆಯ ‘ಗಲ್ಲಿ ಬೇಕರಿ’

ಸಾರಾಂಶ

ಒಂದು ವಿಭಿನ್ನವಾದ ಕತೆಯೊಂದಿಗೆ ಪ್ರೇಕ್ಷಕರ ಮುಂದೆ ಬರುತ್ತಿರುವ ಸಿನಿಮಾ ‘ಗಲ್ಲಿಬೇಕರಿ’.   

ಟ್ವಿನ್ ಟವರ್ ಎಂಟರ್‌ಟೈನ್‌ಮೆಂಟ್ ಪ್ರೈ. ಲಿಲಾಂಛನದಲ್ಲಿ ಎಂ.ಎಂ.ನಿರ್ಮಾಣದಲ್ಲಿ ಈ ಸಿನಿಮಾ ಮೂಡಿಬಂದಿದೆ. ಮೊದಲ ಬಾರಿಗೆ ರಾಧಾ ಕೃಷ್ಣನ್ ಅವರು ಈ ಚಿತ್ರವನ್ನು ನಿರ್ದೇಶಿಸಿದ್ದಾರೆ. ಬೆಂಗಳೂರಿನಲ್ಲಿ ನಡೆದ ರಿಯಲ್ ಕತೆಯನ್ನು ಈ ಚಿತ್ರಕ್ಕೆ ಆಯ್ಕೆ ಮಾಡಿಕೊಂಡು ಸಿನಿಮಾ ಮಾಡಲಾಗಿದೆ.

ಪೊಲೀಸು ಮತ್ತು ಅವರ ಮಗಳು, ನಾಯಕನ ಪ್ರೀತಿ ಇವುಗಳ ಸುತ್ತ ಸಾಗುವ ಸಿನಿಮಾ. ಆದರೆ, ಚಿತ್ರದಲ್ಲಿ ತನ್ನ ಮಗಳನ್ನು ಪ್ರೀತಿಸುತ್ತಿರುವ ನಾಯಕನನ್ನೇ ಪೊಲೀಸ್ ಅಧಿಕಾರಿಯೇ ಮುಂದೆ ನಿಂತು ಸಾಯಿಸುತ್ತಾನೆ. ಸತ್ತವನು ಹೇಗೆ ವಾಪಸ್ಸು ಬರುತ್ತಾನೆ ಎಂಬುದು ಚಿತ್ರದ ಅಸಲಿ ತಿರುವು.

ರಮೇಶ್ ಕೊಯಿರಾ ಚಿತ್ರಕ್ಕೆ ಕ್ಯಾಮೆರಾ ಹಿಡಿದಿದ್ದಾರೆ. ಚಿತ್ರದಲ್ಲಿ ಇಬ್ಬರು ನಾಯಕಯರು. ಸಂತೋಷ್ ಕಿರಣ, ಆರ್ಯನ್. ಇವರೊಂದಿಗೆ ಪ್ರಜ್ವಲ್ ಪೂವಯ್ಯ, ಉಗ್ರಂ ರೆಡ್ಡಿ, ಸೂರ್ಯ, ರಮೇಶ್ ಭಟ್, ಸುಚೇಂದ್ರ ಪ್ರಸಾದ್ ನಟಿಸಿದ್ದಾರೆ. 

 

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

click me!

Recommended Stories

ದರ್ಶನ್‌ ತೂಗುದೀಪ The Devil Movie ವಿಮರ್ಶೆ ಮಾಡೋ ಹಾಗಿಲ್ಲ, ಕಾಮೆಂಟ್ಸ್‌ ಮಾಡಂಗಿಲ್ಲ: ಕೋರ್ಟ್‌ನಿಂದ ತಡೆ
1000ಕ್ಕೂ ಹೆಚ್ಚು ಸ್ಕ್ರೀನ್‌ಗಳಲ್ಲಿ ಡೆವಿಲ್ ರಿಲೀಸ್: ಜೈಲಿನಿಂದಲೇ ಅಭಿಮಾನಿಗಳಿಗೆ ಪತ್ರ ಬರೆದ ದರ್ಶನ್‌