
ಬೆಂಗಳೂರು (ಫೆ. 23): ಬಿಚ್ಚುಗತ್ತಿ ಚಿತ್ರದ ಸಾಹಸ ದೃಶ್ಯ ಚಿತ್ರೀಕರಣ ವೇಳೆ ಅವಗಢ ಸಂಭವಿಸಿದೆ.
ಚಿತ್ರೀಕರಣ ವೇಳೆ ಹಾರ್ಸ್ ರೈಡಿಂಗ್ ಮಾಡುವ ಸೀನ್ ಇತ್ತು. ಆಗ ನಟ ರಾಜವರ್ಧನ್ ಕಂಟ್ರೋಲ್ ಸಿಗದೇ ಕೆಳಕ್ಕೆ ಬಿದ್ದಿದ್ದಾರೆ. ಯಶವಂತಪುರ ಪಿಪಲ್ ಟ್ರೀ ಆಸ್ಪತ್ರೆಗೆ ದಾಖಲಿಸಲಾಗಿದೆ. ಬೆನ್ನು ಮೂಳೆಗೆ ಪೆಟ್ಟಾಗಿರೋ ಸಾಧ್ಯತೆ ಇದೆ ಎನ್ನಲಾಗಿದ್ದು ರಾಜವರ್ಧನ್ ಗೆ ಹದಿನೈದು ದಿನ ಬೆಡ್ ರೆಸ್ಟ್ ಗೆ ವೈದ್ಯರು ತಿಳಿಸಿದ್ದಾರೆ. ಸದ್ಯ ಅವರನ್ನು ಅಬ್ಸರ್ ವೇಷನ್ ನಲ್ಲಿ ಇಡಲಾಗಿದೆ.
ಚಿತ್ರದುರ್ಗದ ಪಾಳೇಗಾರ ಬಿಚ್ಚುಗತ್ತಿ ಭರಮಣ್ಣ ನಾಯಕನ ಬದುಕಿನ ಕುರಿತ ಚಿತ್ರ. ಅದರಲ್ಲೂ ಆತನ ಅಧಿಕಾರವಧಿಯಲ್ಲಿ ದಾಖಲಾಗಿ ಉಳಿದ ‘ದಳವಾಯಿ ದಂಗೆ’ಯೇ ಈ ಚಿತ್ರದ ಪ್ರಧಾನ ಕಥಾ ಹಂದರ.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.