ದಿ ವಿಲನ್‌ಗೆ ಕಂಟಕ; ಪ್ರತಿಭಟನೆ ಮಾಡುವುದಾಗಿ ಎಚ್ಚರಿಕೆ

Published : Oct 17, 2018, 11:23 AM IST
ದಿ ವಿಲನ್‌ಗೆ ಕಂಟಕ; ಪ್ರತಿಭಟನೆ ಮಾಡುವುದಾಗಿ ಎಚ್ಚರಿಕೆ

ಸಾರಾಂಶ

ದಿ ವಿಲನ್‌ಗೆ ಶುರುವಾಯ್ತು ಕಂಟಕ | ಅಂಧ ಸಮುದಾಯದಿಂದ ಪ್ರತಿಭಟನಾ ಬೆದರಿಕೆ | 

ಬೆಂಗಳೂರು (ಅ. 17): ನಟ ಶಿವರಾಜ್‌ಕುಮಾರ್ ಹಾಗೂ ಸುದೀಪ್ ಅಭಿನಯದ ‘ದಿ ವಿಲನ್’ ಚಿತ್ರದ ಹಾಡಿನಲ್ಲಿ ‘ಗರುಡ್ನಂಗೆ ಇದ್ದೋನ್ ನೋಡ್ಲಾ ಕುರುಡ್ನಂಗ್ ಆಗೋದ್ನೋ’ ಎಂಬ ಸಾಲಿದೆ. ಅಲ್ಲಿಂದ ಕುರುಡ ಪದ ತೆಗೆಯದಿದ್ದರೆ ಚಿತ್ರ ಬಿಡುಗಡೆಯಂದು (ಅ.18) ನರ್ತಕಿ ಚಿತ್ರಮಂದಿರದ ಮುಂದೆ ಪ್ರತಿಭಟಿಸುವುದಾಗಿ ಅಂಧ ಸಮುದಾಯ ಎಚ್ಚರಿಕೆ ನೀಡಿದೆ.

ಅಂಧ ಸಮುದಾಯದ ಪ್ರತಿನಿಧಿ ಎಂ. ವೀರೇಶ್, ಈ ಹಾಡಿನಲ್ಲಿ ಬಳಸಿರುವ ಕುರುಡ ಎಂಬ ಪದವನ್ನು ತೆಗೆದು ಹಾಕಬೇಕು. ಚಲನಚಿತ್ರಗಳಲ್ಲಿ ಅಂಧತ್ವನ್ನು ಹೀನಾಯವಾಗಿ ಬಿಂಬಿಸುವುದನ್ನು ನಿಲ್ಲಿಸಬೇಕು ಎಂದು ಮನವಿ ಮಾಡಿದರು. 

ತಮ್ಮ ಬೇಡಿಕೆಗೆ ಸೂಕ್ತ ಪ್ರತಿಕ್ರಿಯೆ ಸಿಗದಿದ್ದರೆ ಹೋರಾಟ ತೀವ್ರಗೊಳಿಸಲಾಗುವುದು. ಕಾಯ್ದೆ ಪ್ರಕಾರ ಯಾವುದೇ ವಿಕಲಚೇತನರ ನ್ಯೂನತೆಯನ್ನು ಎತ್ತಿ ತೋರಿಸಬಾರದು. ಅಂಧರ ಭಾವನೆಗಳಿಗೆ ಧಕ್ಕೆಯುಂಟಾಗಲು ಕಾರಣರಾದವರ ಬಗ್ಗೆ ಕಾನೂನು ಕ್ರಮಕ್ಕೆ ಅವಕಾಶವಿದೆ ಎಂದು ತಿಳಿಸಿದರು.

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

click me!

Recommended Stories

ಅಮಿತಾಭ್ 14 ಚಿತ್ರಗಳ ರೀಮೇಕ್ ಮಾಡಿ, 33 ವರ್ಷಗಳ ಬಳಿಕ ಅಮಿತಾಭ್ ಜೊತೆ ನಟಿಸಿದ ನಟ ರಜನಿಕಾಂತ್!
ಎಲ್ಲೆಲ್ಲೂ 'ಗಿಲ್ಲಿ ನಟ'ನದೇ ದರ್ಬಾರ್.. ಬಿಗ್ ಬಾಸ್‌ನಲ್ಲೂ ಬಿಗ್ ಸ್ಕ್ರೀನ್‌ನಲ್ಲೂ ಸಖತ್ ಸದ್ದು..!