ಸೆಂಚುರಿ ಸ್ಟಾರ್ ಶಿವರಾಜ್ ಕುಮಾರ್ಗೆ ಇಂದು ಜನುಮದಿನದ ಸಂಭ್ರಮ. 61ನೇ ಹುಟ್ಟು ಹಬ್ಬ ಆಚರಿಸಿಕೊಳ್ಳುತ್ತಿರುವ ಶಿವಣ್ಣನ ಮನೆ ಮುಂದೆ ಅಭಿಮಾನಿಗಳು ಜಮಾಯಿಸಿದ್ದು, ಮಧ್ಯರಾತ್ರಿ 12 ಗಂಟೆಗೆ ಕೇಕ್ ಕತ್ತರಿಸಿ, ಪಟಾಕಿ ಸಿಡಿಸಿ ಸಂಭ್ರಮಿಸಿದ್ದಾರೆ.
ಸೆಂಚುರಿ ಸ್ಟಾರ್ ಶಿವರಾಜ್ ಕುಮಾರ್ಗೆ ಇಂದು ಜನುಮದಿನದ ಸಂಭ್ರಮ. 61ನೇ ಹುಟ್ಟು ಹಬ್ಬ ಆಚರಿಸಿಕೊಳ್ಳುತ್ತಿರುವ ಶಿವಣ್ಣನ ಮನೆ ಮುಂದೆ ಅಭಿಮಾನಿಗಳು ಜಮಾಯಿಸಿದ್ದು, ಮಧ್ಯರಾತ್ರಿ 12 ಗಂಟೆಗೆ ಕೇಕ್ ಕತ್ತರಿಸಿ, ಪಟಾಕಿ ಸಿಡಿಸಿ ಸಂಭ್ರಮಿಸಿದ್ದಾರೆ. ಹೌದು! ಮೂರು ವರ್ಷಗಳ ಬಳಿಕ ಶಿವಣ್ಣ ಅದ್ದೂರಿಯಾಗಿ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ. ಕೋವಿಡ್ ಕಾರಣದಿಂದ ಎರಡು ವರ್ಷ ಸೆಲೆಬ್ರೇಶನ್ ಇರಲಿಲ್ಲ.
ಹಾಗೂ ಕಳೆದ ವರ್ಷ ಪುನೀತ್ ಅಗಲಿಕೆ ಹಿನ್ನಲೆ ಹುಟ್ಟುಹಬ್ಬ ಆಚರಿಸಿಕೊಂಡಿರಲಿಲ್ಲ. ಈ ಬಾರಿ ಭಾರೀ ಸಂಖ್ಯೆಯಲ್ಲಿ ಮಾನ್ಯತಾ ಟೆಕ್ ಪಾರ್ಕ್ನಲ್ಲಿರುವ ಶಿವಣ್ಣ ಮನೆ ಮುಂದೆ ಅಭಿಮಾನಿಗಳು ಸೇರಿದ್ದು, ಅವರ ಮನೆ ಸುತ್ತಮುತ್ತ ಶುಭಾಶಯ ಫ್ಲೆಕ್ಸ್, ಕಟೌಟ್, ಬ್ಯಾನರ್ಗಳು ರಾರಾಜಿಸುತ್ತಿವೆ. ಅಲ್ಲದೇ ಪಟಾಕಿ ಸಿಡಿಸಿ, ಘೋಷಣೆ ಕೂಗಿ ಅಭಿಮಾನಿಗಳು ಸಂಭ್ರಮಿಸಿದ್ದಾರೆ. ಇದೇ ವೇಳೆ ಪುನೀತ್ ರಾಜ್ಕುಮಾರ್ಗೂ ಅಭಿಮಾನಿಗಳು ಜೈಕಾರ ಹಾಕಿದ್ದಾರೆ.
ಬರ್ತಡೇ ಅಂದ್ರೆ ಅಭಿಮಾನಿಗಳಿಗೋಸ್ಕರ ಆಚರಣೆ: ಕಳೆದ ಮೂರು ವರ್ಷಗಳಿಂದ ಬರ್ತಡೇ ಆಚರಿಸಿಕೊಂಡಿರಲಿಲ್ಲ. ಕಳೆದ ವರ್ಷ ಅಪ್ಪು ಅಗಲಿಕೆಯಿಂದ ಆಚರಣೆ ಮಾಡಿಕೊಂಡಿರಲಿಲ್ಲ. ಬರ್ತಡೇ ಅಂದ್ರೆ ಅಭಿಮಾನಿಗಳಿಗೋಸ್ಕರ ಆಚರಣೆ. ಮನೆಗೆ ಬರ್ತಾರೆ, ಖುಷಿಯಿಂದ ವಿಶ್ ಮಾಡ್ತಾರೆ ಎಂದು ಶಿವಣ್ಣ ತಿಳಿಸಿದ್ದಾರೆ. ಈ ಬಾರಿ ನನ್ನ ಹುಟ್ಟುಹಬ್ಬಕ್ಕೆ ಗೋಸ್ಟ್ ಮತ್ತು ಜೈಲರ್ ಚಿತ್ರಗಳು ತೆರೆಗೆ ಬರುತ್ತಿವೆ.
ಶಿವಣ್ಣ 'ಭೈರತಿ ರಣಗಲ್' ಚಿತ್ರದಲ್ಲಿ ರುಕ್ಮಿಣಿ ವಸಂತ್ ನಾಯಕಿ!
ವಿಭಿನ್ನವಾದ ಪಾತ್ರದಲ್ಲಿ ಅಭಿನಯಿಸ್ತಿದ್ದೇನೆ. ಅಭಿಮಾನಿಗಳು ನೋಡಿ ಖುಷಿಪಡಬೇಕು. ಚಿಕ್ಕಂದಿನಿಂದಲೂ ರಜನಿಕಾಂತ್ ಅವರು ನಮ್ಮನ್ನು ನೋಡಿದ್ದಾರೆ. ಅವರನ್ನು ನೋಡುತ್ತಾ ನಾನು ಬೆಳೆದಿದ್ದೇವೆ. ನಮ್ಮ ಕುಟುಂಬ ಅವರ ಕುಟುಂಬದ ನಡುವೆ ಹಿಂದಿನಿಂದಲೂ ಸ್ನೇಹ ಸಂಬಂಧವಿದೆ. ರಜನಿಕಾಂತ್ ಅವರ ಜತೆಗೆ ಜೈಲರ್ ಚಿತ್ರದಲ್ಲಿ ಅಭಿನಯಿಸಿರುವುದು ಖುಷಿ ತಂದಿದೆ. ನಾಳೆ ಸಂತೋಷ್ ಚಿತ್ರಮಂದಿರದಲ್ಲಿ ಗೋಸ್ಟ್ ಟೀಸರ್ ರಿಲೀಸ್ ಆಗುತ್ತಿದೆ.ಅಭಿಮಾನಿಗಳ ಜೊತೆಗೆ ಬರ್ತಡೇ ಆಚರಿಸಿಕೊಳ್ತಿರುವುದು ಮತ್ತಷ್ಟು ಖುಷಿ ತಂದಿದೆ ಎಂದು ಶಿವಣ್ಣ ಹೇಳಿದರು.