ಸ್ಯಾಂಡಲ್‌ವುಡ್‌ಗೆ ನಾಯಕಿಯಾಗಿ ಎಂಟ್ರಿ ಕೊಟ್ಟಿದ್ದಾರೆ ರಾಧಾರಮಣ ’ರಾಧಾ’

Published : Feb 23, 2019, 03:48 PM ISTUpdated : Feb 23, 2019, 03:50 PM IST
ಸ್ಯಾಂಡಲ್‌ವುಡ್‌ಗೆ ನಾಯಕಿಯಾಗಿ ಎಂಟ್ರಿ ಕೊಟ್ಟಿದ್ದಾರೆ ರಾಧಾರಮಣ ’ರಾಧಾ’

ಸಾರಾಂಶ

ರಮಣಂಗೆ ಪಾಠ ಹೇಳಿಕೊಡುವ ರಾಧಾ ಮಿಸ್ ಈಗ ಸ್ಯಾಂಡಲ್‌ವುಡ್‌ಗೆ | ’ಕಳ್ಬೆಟ್ಟದ ದರೋಡೆಕೋರರು’ ಸಿನಿಮಾಗೆ ನಾಯಕಿಯಾಗಿ ಶ್ವೇತಾ ಆರ್ ಪ್ರಸಾದ್ | 

ಬೆಂಗಳೂರು (ಫೆ. 23): ರಾಧಾ ರಮಣ ಧಾರಾವಾಹಿಯ ರಾಧಾ ಮಿಸ್ ಯಾರಿಗೆ ಗೊತ್ತಿಲ್ಲ ಹೇಳಿ. ತಮ್ಮ ಮುಗ್ಧ ಅಭಿನಯದ ಮೂಲಕ ಎಲ್ಲರ ಮನಸ್ಸನ್ನು ಗೆದ್ದಿದ್ದಾರೆ. ಕಿರುತೆರೆ ಲೋಕದಲ್ಲಿ ಮೋಡಿ ಮಾಡಿದ್ದಾರೆ. 

ರಾಧಾ ರಮಣ’ ಖ್ಯಾತಿಯ ರಾಧಾ ಮಿಸ್ ಗ್ಲಾಮರಸ್ ಫೋಟೋಗಳು

ಶ್ವೇತಾ ಈಗ ಕಿರುತೆರೆಯಿಂದ ಸ್ಯಾಂಡಲ್ ವುಡ್ ಗೆ ಹಾರಿದ್ದಾರೆ. ನಾಯಕಿಯಾಗಿ ಹೊಸ ಇನ್ನಿಂಗ್ಸ್ ಆರಂಭಿಸಿದ್ದಾರೆ. 

ಈ ವಾರ ತೆರೆ ಕಂಡ ’ಕಳ್ಬೆಟ್ಟದ ದರೋಡೆಕೋರರು’ ಚಿತ್ರದಲ್ಲಿ ನಾಯಕಿಯಾಗಿ ನಟಿಸಿದ್ದಾರೆ. ಇದೊಂದು ಕಾದಂಬರಿ ಆಧಾರಿತ ಸಿನಿಮಾವಾಗಿದ್ದು ಈ ಚಿತ್ರದಲ್ಲಿ ಮುಗ್ಧ ಹುಡುಗಿ ಪಾತ್ರದಲ್ಲಿ ಶ್ವೇತಾ ಕಾಣಿಸಿಕೊಂಡಿದ್ದಾರೆ. ದೀಪಕ್ ಮಧುವನಹಳ್ಳಿ ಈ ಚಿತ್ರಕ್ಕೆ ನಿರ್ದೇಶನ ಮಾಡಿದ್ದಾರೆ. 

ಜೀವ ಉಳಿಸಲು ಮುಂದಾದ ರಾಧ ಮಿಸ್!

ಶ್ವೇತಾಗೆ  ’ರಾಮ ರಾಮರೇ’ ಚಿತ್ರದ ಖ್ಯಾತಿಯ ನಟರಾಜ್ ನಾಯಕನಾಗಿ ನಟಿಸಿದ್ದಾರೆ. ಉಳಿದಂತೆ ದಾನಪ್ಪ, ಹೇಮಂತ್ ಸುಶೀಲ್, ಸಿದ್ದರಾಜ್, ಕುಮುದವಲ್ಲಿ ಸೇರಿದಂತೆ ಸಾಕಷ್ಟು ಮಂದಿ ಕಲಾವಿದರು ನಟಿಸಿದ್ದಾರೆ. 

ಚಿತ್ರದಲ್ಲಿ ಮೂರು ಹಾಡುಗಳಿದ್ದು ಅನೂಪ್ ಸೀಳೀನ್ ಸಂಗೀತ ಸಂಯೋಜನೆ ಮಾಡಿದ್ದಾರೆ. 
 

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

click me!

Recommended Stories

ಟಾಕ್ಸಿಕ್ ಪೋಸ್ಟರ್ ರಿಲೀಸ್ ಮಾಡಿ ಕುತೂಹಲ ಹೆಚ್ಚಿಸಿದ ಯಶ್, ಸಿನಿಮಾ ಬಿಡುಗಡೆ ಕೌಂಟ್‌ಡೌನ್ ಶುರು
ಕನ್ನಡಿಗರ ಪ್ರೀತಿಯ ಪುಟ್ಟಿ ಯಾಕ್ ಹೀಗಾದ್ರು? Rukmini Vasanth ನ್ಯೂ ಲುಕ್ ವೈರಲ್