ಸಪ್ಲಿಮೆಂಟರಿ ಚಿತ್ರದಲ್ಲಿ ಶಿವಕುಮಾರ ಸ್ವಾಮೀಜಿ!

Published : Jan 24, 2019, 08:45 AM IST
ಸಪ್ಲಿಮೆಂಟರಿ ಚಿತ್ರದಲ್ಲಿ ಶಿವಕುಮಾರ ಸ್ವಾಮೀಜಿ!

ಸಾರಾಂಶ

ತುಮಕೂರಿನ ಶ್ರೀ ಸಿದ್ದಗಂಗಾ ಮಠಕ್ಕೂ ಚಿತ್ರರಂಗಕ್ಕೂ ಒಂದು ರೀತಿಯಲ್ಲಿ ಅವಿನಾಭಾವ ನಂಟು. ಬಹುತೇಕ ಸಿನಿಮಾಗಳ ಆಡಿಯೋ ಬಿಡುಗಡೆ ಸೇರಿದಂತೆ ಹಲವು ರೀತಿಯ ಕಾರ್ಯಕ್ರಮಗಳು ಮಠದ ಅಂಗಳದಲ್ಲಿ ನಡೆದಿವೆ. ಹಾಗೆ ಸಿದ್ದಗಂಗಾ ಹೆಸರಿನಲ್ಲೇ ಕನ್ನಡದಲ್ಲೂ ಸಿನಿಮಾ ಬಂದಿದೆ. ಶಿವಕುಮಾರ ಶ್ರೀಗಳ ಕೃಪೆಯಲ್ಲಿ ಹೀಗೆ ಮೂಡುತ್ತಿದ್ದ ಸಿನಿಮಾಗಳ ಸಾಲಿಗೆ ಈಗ ‘ಸಪ್ಲಿಮೆಂಟರಿ’ ಚಿತ್ರವೂ ಸೇರಿಕೊಂಡಿದೆ.

ಇದೇ ವಾರ ತೆರೆಗೆ ಬರುತ್ತಿರುವ ಈ ಚಿತ್ರದ ನಿರ್ದೇಶಕ ದೇವರಾಜ್‌ ಎಸ್‌ ಅವರು ತುಮಕೂರು ವಿಶ್ವವಿದ್ಯಾಲಯದ ಪ್ರಾಧ್ಯಾಪಕರು. ಈಗಲೂ ಇದೇ ಯೂನಿವರ್ಸಿಟಿಯಲ್ಲಿ ಪಾಠ ಮಾಡುತ್ತಿರುವ ಮೇಸ್ಟು್ರ. ಅಲ್ಲದೆ ಚಿತ್ರದಲ್ಲಿ ಬರುವ ‘ಯೋಚಿಸಬೇಡ, ಚಿಂತಿಸಬೇಡ’ ಎಂದು ಸಾಗುವ ಹಾಡಿನ ಚಿತ್ರೀಕರಣ ಪೂರ್ತಿ ಶ್ರೀ ಸಿದ್ದಗಂಗಾ ಮಠದ ಅಂಗಳದಲ್ಲೇ ಚಿತ್ರೀಕರಣ ಮಾಡಿದ್ದಾರೆ. ಈ ಹಾಡಿನಲ್ಲಿ ಶ್ರೀ ಶಿವಕುಮಾರಸ್ವಾಮಿಗಳು ಸಹ ಕಾಣಿಸಿಕೊಂಡಿದ್ದಾರೆ. ಮಠದ ಸುತ್ತ ಹಾಗೂ ಮಠದಲ್ಲಿ ಶಾಲಾ ಮಕ್ಕಳು ಸಾಮೂಹಿಕ ಪ್ರಾರ್ಥನೆ ಮಾಡುವ ದೃಶ್ಯಗಳ ಮೂಲಕ ಇಡೀ ಹಾಡು ಮೂಡಿಬಂದಿದೆ.

‘ಹಾಡಿನಲ್ಲಿ ಮಾತ್ರವಲ್ಲ, ಇಡೀ ಸಿನಿಮಾ ಒಳ್ಳೆಯ ಸಂದೇಶದೊಂದಿಗೆ ಕೂಡಿದೆ. ಆ ಕಾರಣಕ್ಕೆ ನಮ್ಮ ಚಿತ್ರದ ಒಂದು ಹಾಡನ್ನು ಶ್ರೀ ಶಿವಕುಮಾರಸ್ವಾಮಿಗಳ ದರ್ಶನದೊಂದಿಗೆ ಚಿತ್ರೀಕರಣ ಮಾಡಿದ್ದೇವೆ. ಇದೇ ಶುಕ್ರವಾರ ಅವರು ನೀಡಿದ ಆಶೀರ್ವಾದದೊಂದಿಗೆ ಸಪ್ಲಿಮೆಂಟರಿ ಚಿತ್ರವನ್ನು ತೆರೆಗೆ ತರುತ್ತಿದ್ದೇವೆ’ ಎನ್ನುತ್ತಾರೆ ದೇವರಾಜ್‌. ಹಾಡಿನಲ್ಲಿ ಸಮಾಜ ಸೇವಕ ಮಹೇಂದ್ರ ಮುನ್ನೋಟ್‌ ಹಾಗೂ ಚಿತ್ರದ ನಾಯಕ ಕುಶ್‌ ಕಾಣಿಸಿಕೊಂಡಿದ್ದಾರೆ.

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

click me!

Recommended Stories

Untold Love Story: ಸ್ಟಾರ್ ನಟನ ಎರಡನೇ ಪತ್ನಿಯ ಲವ್‌ನಲ್ಲಿ ಬಿದ್ದು ಒದ್ದಾಡಿದ್ದ ರಜನಿಕಾಂತ್!
Sandalwood Films: ರಿಲೀಸ್'ಗೂ ಮುನ್ನ ಭಾರಿ ನಿರೀಕ್ಷೆ ಹುಟ್ಟಿಸಿ, ಬಳಿಕ ಸೋತ ಕನ್ನಡ ಸಿನಿಮಾಗಳು