ಮಳೆಯಿಂದ ರಕ್ಷಣೆಗಾಗಿ ಬಂದ ಶ್ವಾನಕ್ಕೆ ಥಳಿತ; ನ್ಯಾಯಕ್ಕಾಗಿ ಒಂದಾದ ಬಾಲಿವುಡ್ ತಾರೆಯರು

By Web DeskFirst Published Jul 29, 2019, 1:02 PM IST
Highlights

ಮಳೆಯಿಂದ ರಕ್ಷಣೆ ಪಡೆಯಲು ಕಟ್ಟಡದೊಳಗೆ ಹೋದ ನಾಯಿಗೆ ಹಿಗ್ಗಾಮುಗ್ಗ ಹೊಡೆದ ಸೆಕ್ಯುರಿಟಿ ಗಾರ್ಡ್ | ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ | ನ್ಯಾಯಕ್ಕಾಗಿ ಒಂದಾದ ಬಾಲಿವುಡ್ ತಾರೆಯರು  

ಮುಂಬೈನಲ್ಲಿ ವರುಣರಾಯನ ಆರ್ಭಟ ಜೋರಾಗಿದೆ. ಕಳೆದ ಒಂದು ವಾರದಿಂದ ಸಿಕ್ಕಾಪಟ್ಟೆ ಮಳೆಯಾಗುತ್ತಿದೆ. ಮಳೆಯಿಂದ ರಕ್ಷಣೆ ಪಡೆಯಲು ಕಟ್ಟಡದೊಳಗೆ ಹೋದ ನಾಯಿಯನ್ನು ಸೆಕ್ಯುರಿಟಿ ಗಾರ್ಡ್ ಹಿಗ್ಗಾಮುಗ್ಗ ಹೊಡೆದಿರುವ ವಿಡಿಯೋವೊಂದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. 

 

ಈ ಹೃದಯ ವಿದ್ರಾವಕ ಘಟನೆಯನ್ನು ಬಾಲಿವುಡ್ ತಾರೆಯರು ಖಂಡಿಸಿದ್ದಾರೆ. ನಟಿಯರಾದ ಸೋನಂ ಕಪೂರ್, ಅನುಷ್ಕಾ ಶರ್ಮಾ ಇನ್ಸ್ಟಾಗ್ರಾಮ್ ನಲ್ಲಿ ಪೋಸ್ಟ್ ಹಾಕಿ ನ್ಯಾಯಕ್ಕಾಗಿ ಆಗ್ರಹಿಸಿದ್ದಾರೆ. ನಟ ಜಾನ್ ಅಬ್ರಾಹಂ ವರ್ಲಿ ಬಿಲ್ಡಿಂಗ್ ಮುಂದೆ ಪ್ರತಿಭಟನೆ ಮಾಡಲು ಪ್ರಾಣಿಪ್ರಿಯರಿಗೆ ಕರೆ ನೀಡಿದ್ದಾರೆ. 

 

pic.twitter.com/WVqSkfMsmL

— John Abraham (@TheJohnAbraham)

ಸೆಕ್ಯುರಿಟಿ ಗಾರ್ಡ್ ಮೇಲೆ ಎಫ್ ಐಆರ್ ದಾಖಲಾಗಿದೆ. 

click me!