ಮಳೆಯಿಂದ ರಕ್ಷಣೆಗಾಗಿ ಬಂದ ಶ್ವಾನಕ್ಕೆ ಥಳಿತ; ನ್ಯಾಯಕ್ಕಾಗಿ ಒಂದಾದ ಬಾಲಿವುಡ್ ತಾರೆಯರು

Published : Jul 29, 2019, 01:02 PM ISTUpdated : Jul 29, 2019, 01:11 PM IST
ಮಳೆಯಿಂದ ರಕ್ಷಣೆಗಾಗಿ ಬಂದ ಶ್ವಾನಕ್ಕೆ ಥಳಿತ; ನ್ಯಾಯಕ್ಕಾಗಿ ಒಂದಾದ ಬಾಲಿವುಡ್ ತಾರೆಯರು

ಸಾರಾಂಶ

ಮಳೆಯಿಂದ ರಕ್ಷಣೆ ಪಡೆಯಲು ಕಟ್ಟಡದೊಳಗೆ ಹೋದ ನಾಯಿಗೆ ಹಿಗ್ಗಾಮುಗ್ಗ ಹೊಡೆದ ಸೆಕ್ಯುರಿಟಿ ಗಾರ್ಡ್ | ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ | ನ್ಯಾಯಕ್ಕಾಗಿ ಒಂದಾದ ಬಾಲಿವುಡ್ ತಾರೆಯರು  

ಮುಂಬೈನಲ್ಲಿ ವರುಣರಾಯನ ಆರ್ಭಟ ಜೋರಾಗಿದೆ. ಕಳೆದ ಒಂದು ವಾರದಿಂದ ಸಿಕ್ಕಾಪಟ್ಟೆ ಮಳೆಯಾಗುತ್ತಿದೆ. ಮಳೆಯಿಂದ ರಕ್ಷಣೆ ಪಡೆಯಲು ಕಟ್ಟಡದೊಳಗೆ ಹೋದ ನಾಯಿಯನ್ನು ಸೆಕ್ಯುರಿಟಿ ಗಾರ್ಡ್ ಹಿಗ್ಗಾಮುಗ್ಗ ಹೊಡೆದಿರುವ ವಿಡಿಯೋವೊಂದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. 

 

ಈ ಹೃದಯ ವಿದ್ರಾವಕ ಘಟನೆಯನ್ನು ಬಾಲಿವುಡ್ ತಾರೆಯರು ಖಂಡಿಸಿದ್ದಾರೆ. ನಟಿಯರಾದ ಸೋನಂ ಕಪೂರ್, ಅನುಷ್ಕಾ ಶರ್ಮಾ ಇನ್ಸ್ಟಾಗ್ರಾಮ್ ನಲ್ಲಿ ಪೋಸ್ಟ್ ಹಾಕಿ ನ್ಯಾಯಕ್ಕಾಗಿ ಆಗ್ರಹಿಸಿದ್ದಾರೆ. ನಟ ಜಾನ್ ಅಬ್ರಾಹಂ ವರ್ಲಿ ಬಿಲ್ಡಿಂಗ್ ಮುಂದೆ ಪ್ರತಿಭಟನೆ ಮಾಡಲು ಪ್ರಾಣಿಪ್ರಿಯರಿಗೆ ಕರೆ ನೀಡಿದ್ದಾರೆ. 

 

ಸೆಕ್ಯುರಿಟಿ ಗಾರ್ಡ್ ಮೇಲೆ ಎಫ್ ಐಆರ್ ದಾಖಲಾಗಿದೆ. 

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

click me!

Recommended Stories

ರಿಷಬ್ ಶೆಟ್ಟಿ ದೈವದ ಮುಂದೆ ಅತ್ಬಿಟ್ರಾ? ಅಳಬೇಡ ಅಂತ ಸಂತೈಸಿದ್ದೇಕೆ ಪಂಜುರ್ಲಿ ದೈವ?
Namratha Gowda ಪ್ರೀತಿಯಲ್ಲಿದ್ದಾರಾ? ಆ ಕಪ್ಪು ಬ್ಯಾಂಡ್‌ ಕೊಟ್ಟ ಸುಳಿವಿನ ಬಗ್ಗೆ Karthik Mahesh ಏನಂದ್ರು?