
ಬೆಂಗಳೂರು(ಜ.09): ಪರಸ್ಪರ ಒಪ್ಪಿಗೆ ಮೇರೆಗೆ ವಿಚ್ಛೇದನಕ್ಕೆ ಮುಂದಾಗಿದ್ದ ಕನ್ನಡದ ಖ್ಯಾತ ನಟ ಸುದೀಪ್ ದಂಪತಿ ಮತ್ತೆ ಒಂದಾಗಲು ಮುಂದಾಗಿದ್ದಾರಾ? ಹೌದು ಎನ್ನುತ್ತಿವೆ ವರದಿಗಳು.
ಇವತ್ತು ಕೌಟುಂಬಿಕ ನ್ಯಾಯಾಲಯದಲ್ಲಿ ನಟ ಸುದೀಪ್ ದಂಪತಿಯ ವಿಚ್ಛೇದನಾ ಅರ್ಜಿಯ ವಿಚಾರಣೆ ನಡೆಯಿತು. ಈ ಸಂದರ್ಭ ಹಾಜರಾಗಿದ್ದ ಸುದೀಪ್ ಪರ ವಕೀಲರು, ಸುದೀಪ್ ದಂಪತಿ ಒಂದಾಗುತ್ತಾರೆ ಎಂದು ಕೋರ್ಟ್`ಗೆ ಮಾಹಿತಿ ನೀಡಿದರು. ಈ ಸಂದರ್ಭ, ಮಧ್ಯಸ್ಥಿಕಾ ಕೇಂದ್ರಕ್ಕೆ ಹಾಜರಾಗುವಂತೆ ಸುದೀಪ್ ದಂಪತಿಗೆ ಕೌಟುಂಬಿಕ ನ್ಯಾಯಾಲಯ ಸೂಚನೆ ನೀಡಿದೆ.ಈ ಸಂದರ್ಭ 2 ತಿಂಗಳ ಕಾಲಾವಕಾಶಕ್ಕೆ ಸುದೀಪ್ ಪರ ವಕೀಲರು ಮನವಿ ಮಾಡಿದ್ದಾರೆ.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.