
ಚೆನ್ನೈ (ಡಿ.12): ತಮಿಳಿನ ಸೂಪರ್ ಸ್ಟಾರ್ ರಜನಿಕಾಂತ್ ಈ ಬಾರಿಯೂ ಕೂಡ ತಮ್ಮ ಜನ್ಮ ದಿನವನ್ನು ಆಚರಣೆ ಮಾಡಿಕೊಳ್ಳಲಿಲ್ಲ. ತಮ್ಮ ಅಭಿಮಾನಿಗಳಿಗೂ ಕೂಡ ಜನ್ಮ ದಿನ ಆಚರಣೆ ಮಾಡದಂತೆ ಹೇಳಿದ್ದರು.
ಕಳೆದ ಮೂರು ವರ್ಷಗಳಿಂದಲೂ ಕೂಡ ರಜನಿಕಾಂತ್ ಅವರು ತಮ್ಮ ಜನ್ಮ ದಿನದ ಆಚರಣೆಯಿಂದ ದೂರ ಉಳಿದಿದ್ದಾರೆ. ಅದಕ್ಕೆ ಕಾರಣಗಳು ಕೂಡ ಇದೆ.
2015ರಲ್ಲಿ ಜನ್ಮ ದಿನವನ್ನು ಆಚರಣೆ ಮಾಡದಿರುವುದಕ್ಕೆ ಕಾರಣ ಏನೆಂದರೆ ಚೆನ್ನೈನಲ್ಲಿ ಭಾರೀ ಪ್ರಮಾಣದಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿ ಅತ್ಯಧಿಕ ಪ್ರಮಾಣದಲ್ಲಿ ಸಾವು ನೋವು ಸಂಭವಿಸಿದ್ದವು.
ಕಳೆದ ವರ್ಷ ಮುಖ್ಯಮಂತ್ರಿ ಜಯಲಲಿತಾ ನಿಧನರಾಗಿದ್ದರು. ಈ ವರ್ಷ ಓಖಿ ಚಂಡಮಾರುತದ ಕಾರಣದಿಂದ ಅವರು ಜನ್ಮ ದಿನವನ್ನು ಆಚರಣೆ ಮಾಡಿಕೊಂಡಿಲ್ಲ.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.