ಸಿದ್ಧಗಂಗಾ ಶ್ರೀಗಳಿಗೇಕಿಲ್ಲ ’ಭಾರತ ರತ್ನ’?

Jan 27, 2019, 3:56 PM IST

ತ್ರಿವಿಧ ದಾಸೋಹಿ ಹಾಗೂ ನಡೆದಾಡುವ ದೇವರು ಎಂದೇ ಹೆಸರಾಗಿದ್ದ ಲಿಂಗೈಕ್ಯ ಸಿದ್ಧಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮೀಜಿ ಅವರಿಗೆ ಈ ಬಾರಿಯೂ ‘ಭಾರತ ರತ್ನ’ ಗೌರವ ಲಭಿಸಲಿಲ್ಲ. ರಾಜ್ಯದ ಕೋಟ್ಯಂತರ ನಾಗರಿಕರ ಒಕ್ಕೊರಲ ಒತ್ತಾಯಕ್ಕೆ ಮನ್ನಣೆ ನೀಡದೆ ಕೇಂದ್ರ ಸರ್ಕಾರ ತೀವ್ರ ನಿರಾಸೆ ಉಂಟುಮಾಡಿದ್ದು, ಅಮೂಲ್ಯ ರತ್ನಕ್ಕೆ ಭಾರತ ರತ್ನ ನೀಡದಿರುವ ಬಗ್ಗೆ ರಾಜ್ಯಾದ್ಯಂತ ಅಸಮಾಧಾನ ವ್ಯಕ್ತವಾಗಿದೆ. ಶ್ರೀಗಳ ಹಿಮಾಲಯದೆತ್ತರದ ಸಾಧನೆ ಕೇಂದ್ರ ಸರ್ಕಾರಕ್ಕೆ ಕಾಣಿಸಲಿಲ್ವಾ ಎಂಬ ಪ್ರಶ್ನೆ ಸಾರ್ವಜನಿಕ ವಲಯದಲ್ಲಿ ಎದ್ದಿದೆ.