
ಬಳ್ಳಾರಿ(ಡಿ.06): ನಗರದ ಖ್ಯಾತ ರಂಗಕರ್ಮಿ ‘ಬಳ್ಳಾರಿಯ ರಂಗಶಂಕರ’ ಎಂಬ ಖ್ಯಾತಿಯ ಶಿವಶಂಕರ ನಾಯ್ಡು (55) ಅವರು ವೇದಿಕೆಯಲ್ಲಿ ನಟನಾನಿರತರಾಗಿದ್ದಾಗಲೇ ಕೊನೆಯುಸಿರೆಳೆದಿದ್ದಾರೆ.
ಸೋಮವಾರ ರಾತ್ರಿ ಬೆಂಗಳೂರಿನ ಖಾಸಗಿ ವಾಹಿನಿಯ ಕಾಮಿಡಿ ಕಿಲಾಡಿಗಳು ಕಾರ್ಯಕ್ರಮದ ಆಡಿಷನ್ ವೇಳೆ ನಟನೆಯಲ್ಲಿ ತೊಡಗಿದ್ದಾಗಲೇ ಹೃದಯಾಘಾತವಾಗಿ ಸ್ಥಳದಲ್ಲಿಯೇ ನಿಧನರಾಗಿದ್ದಾರೆ. ನಗರದ ಎಸ್ಆರ್ಆರ್ ಚಿತ್ರ ಮಂದಿರ ಬಳಿಯ ಶಿವಶಂಕರ್ ನಾಯ್ಡು ಅವರ ನಿವಾಸದಲ್ಲಿ ಪಾರ್ಥಿವ ಶರೀರವನ್ನು ಸಾರ್ವಜನಿಕರ ದರ್ಶನಕ್ಕೆ ಇರಿಸಲಾಗಿತ್ತು. ಮಧ್ಯಾಹ್ನ ಸಾರ್ವಜನಿಕ ರುದ್ರಭೂಮಿಯಲ್ಲಿ ಅಂತ್ಯ ಸಂಸ್ಕಾರ ನೆರವೇರಿತು. ಶಿವಶಂಕರ್ ಅವರು ಸಾವಿರಾರು ಬೀದಿ ನಾಟಕ ಪ್ರದರ್ಶನ ನೀಡಿದ್ದರು.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.