ದೇಸಿ ಕಥೆಗೆ ಕ್ರಿಯೇಟಿವ್ ಝಲಕ್ ನೀಡಿದ ’ಗಿಣಿ ಹೇಳಿದ ಕಥೆ’

By Web DeskFirst Published Jan 8, 2019, 3:14 PM IST
Highlights

ಹೊಸಬರೇ ಸೇರಿ ಮಾಡಿರುವ ‘ಗಿಣಿ ಹೇಳಿದ ಕಥೆ’ ಎನ್ನುವ ಚಿತ್ರದ ಬಗ್ಗೆ ವೀಕ್ಷಕರು ಭರವಸೆಯ ಮಾತುಗಳನ್ನಾಡಿದ್ದಾರೆ. ಅಲ್ಲದೆ ಚಿತ್ರದ ಟೀಸರ್ ಬಿಡುಗಡೆ ಮಾಡುವ ಮೂಲಕ ಚಿತ್ರವನ್ನು ಮೆಚ್ಚಿಕೊಂಡಿದ್ದಾರೆ.

ಬೆಂಗಳೂರು (ಜ. 08): ದೇವ್ ರಂಗಭೂಮಿ ನಿರ್ಮಾಣದ, ಅವರೇ ನಾಯಕರಾಗಿ ನಟಿಸಿರೋ ಚಿತ್ರ ’ಗಿಣಿ ಹೇಳಿದ ಕಥೆ’. ಇದೊಂದು ಅಪ್ಪಟ ದೇಸೀ ಕಥಾ ಹಂದರ ಹೊಂದಿರುವ ವಿಭಿನ್ನ ಚಿತ್ರ. ಹಳ್ಳಿ ಸೊಗಡನ್ನು ತೆರೆ ಮೇಲೆ ಅದ್ಭುತವಾಗಿ ತಂದಿದ್ದು ಪ್ರೇಕ್ಷಕರಿಗೆ ಇಷ್ಟವಾಗುವಂತಿದೆ. 

ಧ್ರುವ ಮೆಚ್ಚಿದ ಗಿಣಿ ಹೇಳಿದ ಕತೆ ಜ.11ಕ್ಕೆ

ಸಂಕಲನಕಾರ ರವಿಚಂದ್ರಕುಮಾರ್ ಸಿಕ್ಕಾಪಟ್ಟೆ ಕ್ರಿಯೆಟಿವಿಟಿ ತೋರಿಸಿದ್ದಾರೆ. ಈ ಚಿತ್ರದಲ್ಲಿ ತೋರಿಸಿರುವ ಕ್ರಿಯೆಟಿವಿಟಿ ನೋಡಿದರೆ ಖುದ್ದು ಹಳ್ಳಿಗೆ ಹೋಗಿ ಬಂದಂತೆ ಭಾಸವಾಗುತ್ತದೆ. ಮನಸ್ಸಿಗೆ ಮುದ ನೀಡುತ್ತದೆ. 

ಈ ಸಿನಿಮಾ ಇದೇ ತಿಂಗಳು 11ರಂದು ತೆರೆಗೆ ಬರುತ್ತಿದೆ. ರಂಗಭೂಮಿಯಲ್ಲಿ ನಟರಾಗಿ ಗುರುತಿಸಿಕೊಂಡಿದ್ದ ದೇವ್  ಈ ಚಿತ್ರಕ್ಕೆ ಕಥೆ ಚಿತ್ರಕಥೆ ಮತ್ತು ಸಂಭಾಷಣೆ ಬರೆದು ನಿರ್ಮಿಸಿರುವ ಜತೆಗೆ ನಾಯಕನಾಗಿಯೂ ನಟಿಸಿದ್ದಾರೆ. ನಾಗರಾಜ್ ಉಪ್ಪುಂದ ಈ ಚಿತ್ರದ ನಿರ್ದೇಶಕರು. ನಟ ಧ್ರುವ ಸರ್ಜಾ ಈ ಚಿತ್ರಕ್ಕೆ ಶುಭ ಹಾರೈಸಿದ್ದಾರೆ. 

click me!