ನಟ ಉಪೇಂದ್ರಗೆ ಬಿಗ್ ರಿಲೀಫ್

Published : Jul 31, 2017, 10:32 PM ISTUpdated : Apr 11, 2018, 12:53 PM IST
ನಟ ಉಪೇಂದ್ರಗೆ ಬಿಗ್ ರಿಲೀಫ್

ಸಾರಾಂಶ

. ಈ ಸಂಬಂಧ ಸರ್ಕಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದರು.ಈ ರಿಟ್‌ ಅರ್ಜಿ ವಿಲೇವಾರಿ ಮಾಡಿದ್ದ ನ್ಯಾಯಮೂರ್ತಿ ಆನಂದ ಬೈರಾರೆಡ್ಡಿ ಅವರಿದ್ದ ಏಕಸದಸ್ಯ ಪೀಠವು, ‘ಭೂ ಕಂದಾಯ ಕಾಯ್ದೆಗೆ 2015ರಲ್ಲಿ ತರಲಾದ ತಿದ್ದುಪಡಿಯು ಪೂರ್ವಾನ್ವಯಕ್ಕೆ ಒಳಪಡುತ್ತದೆ

ಬೆಂಗಳೂರು(ಜು.31): ನಟ ಉಪೇಂದ್ರಗೆ ಬಿಗ್ ರಿಲೀಫ್ ಸಿಕ್ಕಿದೆ. ರಾಜ್ಯ ಸರ್ಕಾರ ಸಲ್ಲಿಸಿದ ಮೇಲ್ಮನವಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ನಟ ಉಪೇಂದ್ರ ಕೃಷಿ ಭೂಮಿಯನ್ನು  2005ರಲ್ಲಿ ತಾವರೆಕರೆ ಹೋಬಳಿಯ ಸರ್ವೇ ನಂ. 13/1 ಹಾಗೂ 14ರಲ್ಲಿ ಖರೀದಿಸಿದ್ದರು. ಆದರೆ ಸ್ಥಳೀಯ ಸಹಾಯಕ ಆಯುಕ್ತರು, ಉಪೇಂದ್ರ ಅವರಿಗೆ ಕೃಷಿಯೇತರ ಮೂಲದ ಆದಾಯ ಮಿತಿ ವಾರ್ಷಿಕ 2 ಲಕ್ಷಕ್ಕಿಂತಲೂ ಜಾಸ್ತಿ ಇರುವುದರಿಂದ ಈ ಖರೀದಿ ಕ್ರಮ ಕಾನೂನು ಬಾಹಿರ ಎಂದು ಸ್ಥಿರಾಸ್ತಿ ಮುಟ್ಟುಗೋಲಿಗೆ ಆದೇಶಿಸಿದ್ದರು. ಇದನ್ನು ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದ ಉಪೇಂದ್ರ ಕರ್ನಾಟಕ ಭೂ ಕಂದಾಯ ಕಾಯ್ದೆಯ 79 ಎ ಮತ್ತು 79 ಬಿ ಅಸಾಂವಿಧಾನಿಕವಾಗಿವೆ ಎಂದು ಆಕ್ಷೇಪಿಸಿದ್ದರು. ಈ ಸಂಬಂಧ ಸರ್ಕಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದರು.ಈ ರಿಟ್‌ ಅರ್ಜಿ ವಿಲೇವಾರಿ ಮಾಡಿದ್ದ ನ್ಯಾಯಮೂರ್ತಿ ಆನಂದ ಬೈರಾರೆಡ್ಡಿ ಅವರಿದ್ದ ಏಕಸದಸ್ಯ ಪೀಠವು, ‘ಭೂ ಕಂದಾಯ ಕಾಯ್ದೆಗೆ 2015ರಲ್ಲಿ ತರಲಾದ ತಿದ್ದುಪಡಿಯು ಪೂರ್ವಾನ್ವಯಕ್ಕೆ ಒಳಪಡುತ್ತದೆ. ಆದ್ದರಿಂದ ಉಪೇಂದ್ರ ಖರೀದಿಸಿರುವ ಕೃಷಿ ಜಮೀನು ಕಾನೂನು ಬಾಹಿರ ಅಲ್ಲ ಎಂದು ತೀರ್ಪು ನೀಡಿತ್ತು. ಈ ತೀರ್ಪು ಪ್ರಶ್ನಿಸಿ ಸರ್ಕಾರ ಮೇಲ್ಮನವಿ ಸಲ್ಲಿಸಿ ಹಿನ್ನಡೆ ಅನುಭವಿಸಿದೆ.

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

click me!

Recommended Stories

ಒಂದೇ ದಿನದಲ್ಲಿ ದಾಖಲೆ ಬರೆದ ಸುದೀಪ್​ Mark ಟ್ರೈಲರ್​: ಇಷ್ಟೊಂದು ವ್ಯೂವ್ಸ್​ ಆಗಿದ್ದು ನಿಜನಾ? ಏನಿದು ಚರ್ಚೆ?
ಸಲಗ Vs ರೂಲರ್: ಅಳಿದು ಉಳಿದವರ ಲ್ಯಾಂಡ್ ಲಾರ್ಡ್ ದುನಿಯಾದಲ್ಲಿ ಶೆಟ್ಟರ ವಾರ್!