ಖ್ಯಾತ ತುಳು ಸಾಹಿತಿ ಸೀತಾರಾಮ್ ಕುಲಾಲ್ ಇನ್ನಿಲ್ಲ

Published : Jul 28, 2019, 04:05 PM ISTUpdated : Jul 28, 2019, 04:07 PM IST
ಖ್ಯಾತ ತುಳು ಸಾಹಿತಿ ಸೀತಾರಾಮ್ ಕುಲಾಲ್ ಇನ್ನಿಲ್ಲ

ಸಾರಾಂಶ

ಮೋಕೆದ ಸಿಂಗಾರಿ….ಪಕ್ಕಿಲು ಮೂಜಿ ಹಾಡುಗಳ ಹರಿಕಾರ ಸೀತಾರಾಮ್ ಕುಲಾಲ್ ಇನ್ನಿಲ್ಲ | ದ.ಕ ಜಿಲ್ಲೆಯ ಬಿಜೈ ನಿವಾಸಿ | ತುಳು ಸಾಹಿತ್ಯ ಅಕಾಡಮಿಯ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು 

ಮಂಗಳೂರು (ಜು. 28): ತುಳು ಬಾಷೆಯ ಖ್ಯಾತ ಗೀತ ರಚನೆಗಾರ, ಸಾಹಿತಿ ಎಂ ಕೆ ಸೀತಾರಾನ್ ಕುಲಾಲ್ ಅನಾರೋಗ್ಯದಿಂದ ಇಂದು ವಿಧಿವಶರಾಗಿದ್ದಾರೆ. 

11 ತುಳು ಚಿತ್ರಗಳಿಗೆ 25 ಕ್ಕೂ ಹೆಚ್ಚು ಸೂಪರ್ ಹಿಟ್ ಹಾಡುಗಳನ್ನು ನೀಡಿದ ಹಿರಿಯ ತುಳು ಸಾಹಿತಿ ಎಂ.ಕೆ.ಸೀತಾರಾಮ್ ಕುಲಾಲ್. ಸೀತಾರಾಮ್ ಕುಲಾಲ್ ರವರು ಮೊದಲು ‘ದಾಸಿ ಪುತ್ರ’ ಕನ್ನಡ ನಾಟಕದ ಮೂಲಕ ರಂಗಭೂಮಿ ಪ್ರವೇಶಿಸಿದರು. ನಂತರ ‘ಪಗೆತ ಪುಗೆ’ ತುಳು ಚಲನಚಿತ್ರಕ್ಕೆ ಸಾಹಿತ್ಯ ಬರೆಯುವುದರೊಂದಿಗೆ ತುಳು ಚಿತ್ರರಂಗದ ಪ್ರವೇಶಿಸಿದರು. ಅಲ್ಲದೇ ಬಯ್ಯಮಲ್ಲಿಗೆ, ಬೊಳ್ಳಿತೋಟ, ಉಡಲ್ದ ತುಡರ್ ಬದ್ಕದ ಬಿಲೆ,  ಕೋಟಿ ಚೆನ್ನಯ, ಬದಿ ಸೇರಿ ಒಟ್ಟು ಹನ್ನೊಂದು ಚಿತ್ರಗಳಿಗೆ ಸಾಹಿತ್ಯವನ್ನು ಬರೆದಿದ್ದಾರೆ. ಸುಮಾರು 17 ಕನ್ನಡ ಚಾರಿತ್ರಿಕ ನಾಟಕ 6 ಕನ್ನಡ ಪೌರಾಣಿಕ ಸೇರಿ ಒಟ್ಟು 66 ಕೃತಿಗಳನ್ನು ರಚಿಸಿದ್ದಾರೆ.

ಕಲಾವಿದರಾಗಿ ಕಳೆದ 45 ವರ್ಷಗಳಿಂದ ಕಲಾಸೇವೆ ಮಾಡಿದ ಇವರು ತಾವು ರಚಿಸಿರುವ ಯಾವುದೇ ಕೃತಿಗಾಗಲಿ ನಟನೆ ನಾಟಕ ಹಾಗೂ ಹಾಡುಗಳಗಾಗಲಿ ಯಾವುದೇ ರೀತಿಯ ಸಂಭಾವನೆಯನ್ನು ಪಡೆಯದೇ ಇರುವುದು ವಿಶೇಷ. 

ರಂಗಕಲಾ ಭೂಷಣʼ, ತುಳು ರತ್ನ, ಪೆರ್ಮೆದ ತುಳುವೆ, ತುಳು ಸಿರಿ, ತುಳು ಸಾಹಿತ್ಯ ರತ್ನಾಕರ, ತೌಳವ ಪ್ರಶಸ್ತಿ ಮುಂತಾದ ಗೌರವಗಳಿಗೆ ಪಾತ್ರರಾಗಿದ್ದ ಕುಲಾಲರು ತುಳು ಸಾಹಿತ್ಯ ಅಕಾಡಮಿಯ ಅಧ್ಯಕ್ಷರಾಗಿ ಕೆಲಸ ಮಾಡಿದ್ದರು. 

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

click me!

Recommended Stories

ಸಂಭ್ರಮದಿಂದ ಕ್ರಿಸ್ಮಸ್ ಆಚರಿಸುತ್ತಿದ್ದಾರೆ Niveditha Gowda… ಶೋಕಿ ಎಂದ ಜನ
ಟಾಕ್ಸಿಕ್ ಪೋಸ್ಟರ್ ರಿಲೀಸ್ ಮಾಡಿ ಕುತೂಹಲ ಹೆಚ್ಚಿಸಿದ ಯಶ್, ಸಿನಿಮಾ ಬಿಡುಗಡೆ ಕೌಂಟ್‌ಡೌನ್ ಶುರು