’ಉರಿ’ ಸಿನಿಮಾ ನೋಡಿ ’ಇನ್ಸ್‌ಪೈರಿಂಗ್’ ಎಂದ ವೆಂಕಯ್ಯನಾಯ್ಡು!

Published : Jan 30, 2019, 12:53 PM IST
’ಉರಿ’ ಸಿನಿಮಾ ನೋಡಿ ’ಇನ್ಸ್‌ಪೈರಿಂಗ್’ ಎಂದ ವೆಂಕಯ್ಯನಾಯ್ಡು!

ಸಾರಾಂಶ

’ಉರಿ’ ಸಿನಿಮಾಗೆ ಹರಿದು ಬರುತ್ತಿದೆ ಅಭಿನಂದನೆಗಳ ಮಹಾಪೂರ | ಸರ್ಜಿಕಲ್ ಸ್ಟ್ರೈಕನ್ನು ತೆರೆ ಮೇಲೆ ತರುವಲ್ಲಿ ಯಶಸ್ವಿಯಾಗಿದೆ ಚಿತ್ರತಂಡ | ಉರಿ ಚಿತ್ರ ನೋಡಿದ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು 

ನವದೆಹಲಿ (ಜ. 30): ಸರ್ಜಿಕಲ್ ಸ್ಟ್ರೈಕ್ ಆಧಾರಿತ ಉರಿ ಸಿನಿಮಾಗೆ ಅಭಿನಂದನೆಗಳ ಮಹಾಪೂರವೇ ಹರಿದು ಬರುತ್ತಿದೆ. 

’ಉರಿ’ ಚಿತ್ರವನ್ನು ನೋಡಿದ ನಿರ್ಮಲಾ ಸೀತಾರಾಮನ್ ಥಿಯೇಟರ್ ನಲ್ಲೇ ಸೈನಿಕರಿಗೆ ವಂದಿಸಿದ್ದು ಹೀಗೆ

ಪ್ರಧಾನಿ ಮೋದಿ, ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಚಿತ್ರವನ್ನು ನೋಡಿ ಮೆಚ್ಚಿಕೊಂಡಿದ್ದಾರೆ. ಇದೀಗ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಉರಿ ಸಿನಿಮಾ ನೋಡಿ ಇನ್ಸ್ ಪೈರಿಂಗ್ ಆಗಿದೆ ಎಂದಿದ್ದಾರೆ. 

 

ಸರ್ಜಿಕಲ್ ಸ್ಟ್ರೈಕ್ ನಡೆದಿದ್ದು ಹೇಗೆ ಗೊತ್ತಾ? ತಿಳಿದುಕೊಳ್ಳಲು ’ಉರಿ’ ಸಿನಿಮಾ ನೋಡಿ

2016 ರ ಸೆಪ್ಟೆಂಬರ್ 18 ರಂದು ಉರಿ ಸೇನಾ ನೆಲೆಮೇಲೆ ಪಾಕ್ ಭಯೋತ್ಪಾದಕರು ದಾಳಿ ಮಾಡ್ತಾರೆ. ಈ ದಾಳಿಯಲ್ಲಿ 19 ಸೈನಿಕರು ಹುತಾತ್ಮರಾಗುತ್ತಾರೆ. ಇದಕ್ಕೆ ಉತ್ತರವಾಗಿ ಭಾರತೀಯ ಸೈನಿಕರು ಸರ್ಜಿಕಲ್ ಸ್ಟ್ರೈಕ್ ನಡೆಸುತ್ತಾರೆ. ಸರ್ಜಿಕಲ್ ದಾಳಿಗೆ ಭಾರತೀಯ ಸೇನೆ ಹೇಗೆ ತಯಾರಿ ನಡೆಸಿತ್ತು? ಅವರಿಗೆ ಎದುರಾದ ಕಷ್ಟಗಳೇನು ಎಂಬುದನ್ನು ಈ ಸಿನಿಮಾ ಹೇಳುತ್ತದೆ.  ಆದಿತ್ಯ ಧಾರ್ ಈ ಚಿತ್ರವನ್ನು ನಿರ್ದೇಶಿಸಿದ್ದಾರೆ. 

‘ಉರಿ ಸಿನಿಮಾ ನೋಡಿ ಖುಷಿಯಾಯ್ತು. ಇಡೀ ಚಿತ್ರತಂಡಕ್ಕೆ ನನ್ನ ಅಭಿನಂದನೆಗಳು. ಭಾರತೀಯ ಸೇನೆಗೆ ಗೌರವ ಸಲ್ಲಿಸಿದ ಇಡೀ ಚಿತ್ರತಂಡಕ್ಕೆ ವಂದನೆಗಳು ಎಂದಿದ್ದಾರೆ. 

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

click me!

Recommended Stories

Swayambhu: ನಿಖಿಲ್ ಸಿದ್ಧಾರ್ಥ್ ಐತಿಹಾಸಿಕ ಚಿತ್ರದ ಟ್ರೈಲರ್ ಔಟ್! KGF, ಇಲ್ಲೂ ಬಾಹುಬಲಿ ತಂತ್ರಜ್ಞರ ಕೈಚಳಕ
ಕಷ್ಟಪಡುತ್ತಿದ್ದ ನಟರಿಗೆ ಧರ್ಮಛತ್ರದಂತಿತ್ತು ರಾಜ್‌ಪಾಲ್ ಮನೆ: ಸಾಲ ಕಟ್ಟಲಾಗದೇ ಜೈಲಿಗೆ ಹೋದ ಗೆಳೆಯನ ಉದಾರತೆ ತೆರೆದಿಟ್ಟ ನಟ