
ಚೆನ್ನೈ (ತಮಿಳುನಾಡು): ತಮಿಳುನಾಡು ಮುಖ್ಯಮಂತ್ರಿ ವಿಜಯ್ ಅವರ ವೈಯಕ್ತಿಕ ಬದುಕು ಮತ್ತೆ ಸುದ್ದಿಯಲ್ಲಿದೆ. ಕೆಲವು ತಿಂಗಳುಗಳಿಂದ ವಿಜಯ್ ಮತ್ತು ಅವರ ಪತ್ನಿ ಸಂಗೀತಾ ಸೊರ್ನಲಿಂಗಂ ನಡುವೆ ಭಿನ್ನಾಭಿಪ್ರಾಯ ಮೂಡಿದೆ. ಇಬ್ಬರೂ ವಿಚ್ಛೇದನ ಪಡೆಯಲಿದ್ದಾರೆ ಎಂಬ ಸುದ್ದಿಗಳು ಹರಿದಾಡುತ್ತಿದ್ದವು. ಆದರೆ ಈಗ ಸಂಗೀತಾ ತಾವು ಸಲ್ಲಿಸಿದ್ದ ವಿಚ್ಛೇದನ ಅರ್ಜಿಯನ್ನು ಹಿಂಪಡೆದಿದ್ದಾರೆ ಎಂಬ ಮಾಹಿತಿ ಹೊರಬಿದ್ದಿದ್ದು, ಅಭಿಮಾನಿಗಳಲ್ಲಿ ಕುತೂಹಲ ಮೂಡಿಸಿದೆ.
ಆರು ತಿಂಗಳ ಹಿಂದೆ ಸದ್ದಿಲ್ಲದೆ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದ ಸಂಗೀತಾ, ಈಗ ಅದನ್ನು ವಾಪಸ್ ಪಡೆಯಲು ಕಾರಣವೇನು? ಇಲ್ಲಿದೆ ಸಂಪೂರ್ಣ ವಿವರ.
2026ರ ಫೆಬ್ರವರಿಯಲ್ಲಿ ಸಂಗೀತಾ ಅವರು ವಿಚ್ಛೇದನ ಕೋರಿ ಅರ್ಜಿ ಸಲ್ಲಿಸಿದ್ದರು ಎಂದು ವರದಿಯಾಗಿತ್ತು. ಆ ಅರ್ಜಿಯಲ್ಲಿ ಸಂಗೀತಾ ಅವರು ವಿಜಯ್ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿದ್ದರು. ವಿಜಯ್ ಅವರು ಬೇರೊಬ್ಬ ನಟಿಯ ಜೊತೆ ಸಂಬಂಧ ಹೊಂದಿದ್ದಾರೆ ಮತ್ತು ಈ ವಿಷಯ ತಮಗೆ 2021ರಲ್ಲಿಯೇ ತಿಳಿಯಿತು ಎಂದು ಆರೋಪಿಸಿದ್ದರು. ಅಲ್ಲದೇ ದಾಂಪತ್ಯ ಜೀವನದಲ್ಲಿ ವಿಜಯ್ ತಮ್ಮನ್ನು ನಿರ್ಲಕ್ಷಿಸುತ್ತಿದ್ದಾರೆ, ಮಾನಸಿಕವಾಗಿ ಹಿಂಸೆ ನೀಡುತ್ತಿದ್ದಾರೆ ಮತ್ತು ಸಾಮಾಜಿಕ ಕಾರ್ಯಕ್ರಮಗಳಿಂದ ತಮ್ಮನ್ನು ದೂರವಿಡುತ್ತಿದ್ದಾರೆ ಎಂಬುದು ಸಂಗೀತಾರ ದೂರಾಗಿತ್ತು.ಬೆನ್ನಲ್ಲೇ ಸ್ಟಾರ್ ಜೋಡಿ ಪ್ರತ್ಯೇಕವಾಗಿ ವಾಸಿಸುತ್ತಿದ್ದಾರೆ ಎಂದು ಹೇಳಲಾಗಿತ್ತು.
ಸಂಗೀತಾ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ ಬೆನ್ನಲ್ಲೇ, ಸೋಷಿಯಲ್ ಮೀಡಿಯಾದಲ್ಲಿ ನಟಿ ತ್ರಿಷಾ ಕೃಷ್ಣನ್ ಅವರ ಹೆಸರು ದೊಡ್ಡ ಮಟ್ಟದಲ್ಲಿ ಸದ್ದು ಮಾಡಿತು. ವಿಜಯ್ ಮತ್ತು ತ್ರಿಷಾ ಹಲವು ಹಿಟ್ ಸಿನಿಮಾಗಳಲ್ಲಿ ಒಟ್ಟಾಗಿ ನಟಿಸಿದ್ದು, ಇತ್ತೀಚಿನ ವರ್ಷಗಳಲ್ಲಿ ಅವರ ಸ್ನೇಹ ವಿವಾಹೇತರ ಸಂಬಂಧಕ್ಕೆ ತಿರುಗಿದೆ ಎಂಬ ವದಂತಿಗಳು ಹಬ್ಬಿದ್ದವು. ಆದರೆ, ಸಂಗೀತಾ ತಮ್ಮ ಅರ್ಜಿಯಲ್ಲಿ ಯಾವುದೇ ನಟಿಯ ಹೆಸರನ್ನು ನೇರವಾಗಿ ಉಲ್ಲೇಖಿಸಿರಲಿಲ್ಲ. ವಿಜಯ್ ಅಥವಾ ತ್ರಿಷಾ ಕೂಡ ಈ ವದಂತಿಗಳ ಬಗ್ಗೆ ಯಾವುದೇ ಅಧಿಕೃತ ಪ್ರತಿಕ್ರಿಯೆ ನೀಡಿರಲಿಲ್ಲ. ಹೀಗಾಗಿ ತ್ರಿಷಾ ಅವರ ಹೆಸರು ಕೇವಲ ಊಹಾಪೋಹವಾಗಿ ಉಳಿದಿದೆ.
ಆಗಸ್ಟ್ 7 ರಂದು ಸಂಗೀತಾ ಅವರು ವಿಚ್ಛೇದನ ಅರ್ಜಿಯನ್ನು ಹಿಂಪಡೆದಿದ್ದಾರೆ. ಇದಕ್ಕೆ ನಿಖರವಾದ ಕಾರಣ ಇನ್ನೂ ಬಹಿರಂಗವಾಗಿಲ್ಲವಾದರೂ, ಮೂರು ಪ್ರಮುಖ ಸಾಧ್ಯತೆಗಳನ್ನು ಚರ್ಚಿಸಲಾಗುತ್ತಿದೆ...
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.