‘ಸಾರ್ವಜನಿಕರಲ್ಲಿ ವಿನಂತಿ' ಮಾಡಿಕೊಂಡ್ರು ಯೋಗರಾಜ್ ಭಟ್ರು!

Published : Oct 04, 2018, 03:17 PM IST
‘ಸಾರ್ವಜನಿಕರಲ್ಲಿ ವಿನಂತಿ' ಮಾಡಿಕೊಂಡ್ರು ಯೋಗರಾಜ್ ಭಟ್ರು!

ಸಾರಾಂಶ

ಯೋಗರಾಜ್ ಭಟ್ ಸಿನಿಮಾಗಳೆಂದರೆ ಏನಾದರೊಂದು ವಿಶೇಷ ಇದ್ದೇ ಇರುತ್ತೆ. ವಿಭಿನ್ನ ಟೈಟಲ್, ಸ್ಪೆಷಲ್ ಕಥೆ, ಪಂಚಿಂಗ್ ಡೈಲಾಗ್ ಏನಾದರೊಂದು ಇರುತ್ತದೆ. ಅಂತದ್ದೆ ಒಂದು ಟೈಟಲ್ ಇಟ್ಕೊಂಡು ಬರ್ತಾ ಇದ್ದಾರೆ ಯೋಗರಾಜ್ ಭಟ್ರು. 

ಬೆಂಗಳೂರು (ಅ. 04): ಪ್ರಯಾಣಿಕರ ಗಮನಕ್ಕೆ, ಮುಂದಿನ ಬದಲಾವಣೆ, ಒಂದು ಸಣ್ಣ ಬ್ರೇಕ್‌ನ ನಂತರ -ಹೀಗೆ ಉದ್ದ ಮತ್ತು ಯೂನಿಕ್ ಟೈಟಲ್‌ಗಳ ಜತೆಗೆ ‘ಸಾರ್ವಜನಿಕರಲ್ಲಿ ವಿನಂತಿ’ ಎನ್ನುವ ಹೆಸರು ಸೇರಿಕೊಳ್ಳುತ್ತಿದೆ.

ಈ ಹೆಸರಿನಲ್ಲೊಂದು ಸಿನಿಮಾ ತಯಾರಾಗಿದ್ದು, ಇದರ ಮೋಷನ್ ಪೋಸ್ಟರ್ ಅನ್ನು ನಿರ್ದೇಶಕ ಯೋಗರಾಜ್ ಭಟ್ ಬಿಡುಗಡೆ ಮಾಡಿದ್ದಾರೆ. ಚಿತ್ರದ ನಿರ್ದೇಶಕರು ಕೃಪಾ ಸಾಗರ್. ಚಿತ್ರದ ನಾಯಕನಾಗಿ ಮದನ್‌ರಾಜ್, ನಾಯಕಿಯಾಗಿ ಅಮೃತಾ ಕೆ ಹಾಗೂ ರಮೇಶ್ ಪಂಡಿತ್, ಮಂಡ್ಯ ರಮೇಶ್, ನಾಗೇಶ್ ಮಯ್ಯಾ, ಕಾಮಿಡಿ ಕಿಲಾಡಿಗಳು ಖ್ಯಾತಿಯ ಸಂಜು ಬಸಯ್ಯ ನಟಿಸಿದ್ದಾರೆ.

ಅಪರಾಧಕ್ಕೆ ಕಡಿವಾಣ ಹಾಕುವ ಕತೆಯಲ್ಲಿ ಕೊಲೆಗಡುಕರು, ಕಳ್ಳತನ ಮಾಡುವವರು ಮಾತ್ರ ಕ್ರಿಮಿನಲ್ಸ್ ಆಗಿರುವುದಿಲ್ಲ. ನಮ್ಮ ಎದುರು ವಿನಯದಿಂದ ವರ್ತಿಸುತ್ತಾ, ಬೆನ್ನ ಹಿಂದೆ ಮೋಸ ಮಾಡುವವರು ನಿಜವಾದ ಅಪರಾಧಿಗಳು ಆಗಿರುತ್ತಾರೆ. ಇಂತಹವರ ಬಗ್ಗೆ ಸಾರ್ವಜನಿಕರು ಎಚ್ಚರದಿಂದ ಇರಬೇಕೆಂದು ಸಂದೇಶ ಹೇಳುವ ಸಿನಿಮಾ ಇದು.

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

click me!

Recommended Stories

ಡೆವಿಲ್ Vs ಮಾರ್ಕ್.. ಯಾರಿಗೆಷ್ಟು ಮಾರ್ಕ್ಸ್? ಬಾಕ್ಸಾಫೀಸ್​ ಗಳಿಕೆಯಲ್ಲಿ ಯಾರು ಗೆಲ್ತಾರೆ?
ಜೈಲಲ್ಲಿ ಮುಂದುವರೆದ ದಾಸನ ದಾದಾಗಿರಿ.. ಟಿವಿ ಬದಲು ಸಿಸಿಟಿವಿ ಬಂತು ದರ್ಶನ್ ಸೆಲ್‌ಗೆ!