ಮತದಾನದ ಮಹತ್ವ ಸಾರಲು ವಿಧಾನ ಸೌಧದ ಮುಂದೆ ಯೋಗರಾಜ್ ಭಟ್ಟರ ಹಾಡು

Published : Mar 31, 2018, 11:47 AM ISTUpdated : Apr 11, 2018, 12:47 PM IST
ಮತದಾನದ ಮಹತ್ವ ಸಾರಲು ವಿಧಾನ ಸೌಧದ ಮುಂದೆ ಯೋಗರಾಜ್ ಭಟ್ಟರ ಹಾಡು

ಸಾರಾಂಶ

ರಾಜ್ಯ ವಿಧಾನಸಭೆ ಚುನಾವಣೆ ಕಾವೇರುತ್ತಿದೆ. ದಿನಾಂಕ ಫಿಕ್ಸ್ ಆಗುತ್ತಿದ್ದಂತೆ ಎಲ್ಲಾ  ರಾಜಕೀಯ ಪಕ್ಷಗಳ ಪ್ರಚಾರ ತಾರಕಕ್ಕೇರಿದೆ. ಈ ನಡುವೆಯೇ ರಾಜ್ಯದ ಜನತೆಗೆ ಮತದಾನದ ಮಹತ್ವ ಸಾರಲು ರಾಜ್ಯ ಚುನಾವಣಾ ಆಯೋಗದ ಮನವಿಯ ಕಾರಣಕ್ಕೆ ನಿರ್ದೇಶಕ ಯೋಗರಾಜ್ ಭಟ್ ಚುನಾವಣೆ ಕುರಿತೇ ವಿಶೇಷವಾದ ಒಂದು ಗೀತೆಯೊಂದನ್ನು ರಚಿಸಿದ್ದು, ಈಗ ಅದರ ಚಿತ್ರೀಕರಣ ಶುರುವಾಗಿದೆ.

ಬೆಂಗಳೂರು (ಮಾ. 31): ರಾಜ್ಯ ವಿಧಾನಸಭೆ ಚುನಾವಣೆ ಕಾವೇರುತ್ತಿದೆ. ದಿನಾಂಕ ಫಿಕ್ಸ್ ಆಗುತ್ತಿದ್ದಂತೆ ಎಲ್ಲಾ  ರಾಜಕೀಯ ಪಕ್ಷಗಳ ಪ್ರಚಾರ ತಾರಕಕ್ಕೇರಿದೆ. ಈ ನಡುವೆಯೇ ರಾಜ್ಯದ ಜನತೆಗೆ ಮತದಾನದ ಮಹತ್ವ ಸಾರಲು ರಾಜ್ಯ ಚುನಾವಣಾ ಆಯೋಗದ ಮನವಿಯ ಕಾರಣಕ್ಕೆ ನಿರ್ದೇಶಕ ಯೋಗರಾಜ್ ಭಟ್ ಚುನಾವಣೆ ಕುರಿತೇ ವಿಶೇಷವಾದ ಒಂದು ಗೀತೆಯೊಂದನ್ನು ರಚಿಸಿದ್ದು, ಈಗ ಅದರ ಚಿತ್ರೀಕರಣ ಶುರುವಾಗಿದೆ.

ಪಾರದರ್ಶಕ ಮತದಾನವನ್ನು ಉತ್ತೇಜಿಸುವ ಸಂಬಂಧ ಈ ಗೀತೆಯನ್ನು  ಬಳಸಿಕೊಳ್ಳಲಾಗುತ್ತಿದೆ.  ಯೋಗರಾಜ್ ಭಟ್ಟರ ಹಲವು ಗೀತೆಗಳ ಹಾಗೆಯೇ ಇದು ಕೂಡ ಜನಪ್ರಿಯವಾಗುವ ನಿರೀಕ್ಷೆ ಇದೆ. ಶುಕ್ರವಾರ ಈ ಗೀತೆಗೆ ಬೆಂಗಳೂರಿನ ಕಂಠೀರವ ಕ್ರಿಡಾಂಗಣ  ಹಾಗೂ ವಿಧಾನಸೌಧದ ಮುಂಭಾಗ ಚಿತ್ರೀಕರಣ ನಡೆಯಿತು. ರಾಜ್ಯದ ನೂರಾರು ಸಾಂಸ್ಕೃತಿಕ ಕಲಾವಿದರು ಚಿತ್ರೀಕರಣದಲ್ಲಿ  ಭಾಗವಹಿಸಿದ್ದರು.

‘ಈ ಚುನಾವಣೆ ಗೀತೆಯ ಪರಿಕಲ್ಪನೆ ಮುಖ್ಯ ಚುನಾವಣಾಧಿಕಾರಿ ಸಂಜೀವ್  ಕುಮಾರ್ ಅವರದ್ದು. ಅವರು ಚುನಾವಣೆಗೆ ಗೀತೆ ಸಿದ್ಧಪಡಿಸಲು ಉತ್ಸಾಹ ತೋರಿದರು. ನಾವು ವಿಕಲಚೇತನರು, ಆದಿವಾಸಿಗಳು ಮತ್ತು ಯುವ ಮತದಾರರನ್ನು ಈ ಚುನಾವಣಾ  ಗೀತೆಯ ಚಿತ್ರೀಕರಣಕ್ಕೆ ಬಳಸಿಕೊಳ್ಳುತ್ತಿದ್ದೇವೆ’ ಎಂದು ನಿರ್ದೇಶಕ ಯೋಗರಾಜ್ ಭಟ್  ಹೇಳಿದರು. ವಿಧಾನಸೌಧದ ಮುಂಭಾಗ ಚಿತ್ರೀಕರಣಕ್ಕೆ ಚಾಲನೆ ನೀಡಿದ ಮುಖ್ಯ  ಚುನಾವಣಾಧಿಕಾರಿ ಸಂಜೀವ್ ಕುಮಾರ್, ‘ಈ ಯೋಜನೆ ಕುರಿತು ನಾವು ಬಹಳ  ಕಾಲ ಸಂಶೋಧನೆ ನಡೆಸಿದ್ದೇವೆ. ಈ ಗೀತೆ ಜಾಗೃತ ಮತ್ತು ನೈತಿಕ ಮತದಾನವನ್ನು  ಉತ್ತೇಜಿಸಲಿದೆ. ಇದು ದೊಡ್ಡ ಸಂಖ್ಯೆಯಲ್ಲಿ ಮತದಾರರು ಆಗಮಿಸಿ ಮತದಾನ
ಮಾಡಲು ಪ್ರೇರೇಪಿಸುತ್ತದೆ’ ಎಂದರು.

ಈ ಗೀತೆಗೆ ಸಂಗೀತ ನಿರ್ದೇಶಕ ಹರಿಕೃಷ್ಣ ಸಂಗೀತ ಸಂಯೋಜನೆ ಮಾಡಿದ್ದು,  ಗಾಯಕ ವಿಜಯ್ ಪ್ರಕಾಶ್ ಮತ್ತವರ ತಂಡ ಹಾಡಲಿದೆ. ಇಮ್ರಾನ್ ಸರ್ದಾರಿಯಾ ನೃತ್ಯ ನಿರ್ದೇಶನ ಮಾಡಿದ್ದಾರೆ. ಐದು ದಿನಗಳಿಂದ ಚಿತ್ರೀಕರಣ ನಡೆಯುತ್ತಿದೆ. ರಾಜ್ಯದ  ವಿವಿಧೆಡೆಗಳಲ್ಲಿ ಚಿತ್ರೀಕರಣ ನಡೆದಿದೆ. ಪಂಚತಂತ್ರ ಚಿತ್ರತಂಡದ ನಾಯಕ ವಿಹಾನ್  ಸೇರಿದಂತೆ ಹಲವು ಕಲಾವಿದರು ಚಿತ್ರೀಕರಣದಲ್ಲಿ ಪಾಲ್ಗೊಂಡರು. 

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

click me!

Recommended Stories

45 Movie Trailer Release: ಚೆಲುವೆಯ ನೋಟ ಚೆನ್ನ..ಸಿನಿಮಾ ನೋಡಲೇಬೇಕು ಎಂದು ಸೈಕ್‌ ಮಾಡಿದ ಕಾರಣಗಳಿವು!
The Devil Movie ಶೋಗೆ ಚಪ್ಪಲಿ ಹಾಕ್ಬೇಡ ಅಂತ ಮಗ ವಿನೀಶ್‌ಗೆ ಹೇಳೋಕೆ ಕಾರಣವಿದೆ: Vijayalakshmi Darshan