ಬಾದಾಮಿ: ಬನಶಂಕರಿ ನಿನ್ನಪಾದಕೆ ಶಂಭುಕೋ..!

By Kannadaprabha NewsFirst Published Jan 7, 2023, 7:30 PM IST
Highlights

ಚಾಲುಕ್ಯರ ನಾಡಿನ ಆರಾಧ್ಯ ದೇವತೆ ಉತ್ತರ ಕರ್ನಾಟಕ ಭಾಗದಲ್ಲಿ ಅಧಿದೇವತೆ ಎನಿಸಿಕೊಂಡಿರುವ, ರಾಜ್ಯ ಹೊರ ರಾಜ್ಯಗಳಲ್ಲಿ ಕೋಟ್ಯವಧಿ ಭಕ್ತರನ್ನು ಹೊಂದಿರುವ ಆದಿಶಕ್ತಿ ಬಾದಾಮಿಯ ಬನಶಂಕರಿ ದೇವಿಯ ಜಾತ್ರಾ ಮಹೋತ್ಸವವು ಶುಕ್ರವಾರ ಸಂಜೆ ಗೋಧೂಳಿ ಸಮಯದಲ್ಲಿ ಲಕ್ಷಾಂತರ ಭಕ್ತರು ಜಯ ಘೋಷಗಳ ಮಧ್ಯ ವಿಜೃಂಭನೆಯಿಂದ ಜರುಗಿತು. 

ಶಂಕರ ಕುದರಿಮನಿ

ಬಾದಾಮಿ(ಜ.07):  ಚಾಲುಕ್ಯರ ನಾಡಿನ ಆರಾಧ್ಯ ದೇವತೆ ಉತ್ತರ ಕರ್ನಾಟಕ ಭಾಗದಲ್ಲಿ ಅಧಿದೇವತೆ ಎನಿಸಿಕೊಂಡಿರುವ, ರಾಜ್ಯ ಹೊರ ರಾಜ್ಯಗಳಲ್ಲಿ ಕೋಟ್ಯವಧಿ ಭಕ್ತರನ್ನು ಹೊಂದಿರುವ ಆದಿಶಕ್ತಿ ಬಾದಾಮಿಯ ಬನಶಂಕರಿ ದೇವಿಯ ಜಾತ್ರಾ ಮಹೋತ್ಸವವು ಶುಕ್ರವಾರ ಸಂಜೆ ಗೋಧೂಳಿ ಸಮಯದಲ್ಲಿ ಲಕ್ಷಾಂತರ ಭಕ್ತರು ಜಯ ಘೋಷಗಳ ಮಧ್ಯ ವಿಜೃಂಭನೆಯಿಂದ ಜರುಕಿತು ರಥೋತ್ಸವದಲ್ಲಿ ಪಾಲ್ಗೊಂಡು ಉತ್ತತ್ತಿ, ಹಣ್ಣು ಹೂವು ಸಮರ್ಪಿಸುವದರ ಮೂಲಕ ದೇವಿಯ ಕೃಪೆಗೆ ಪಾತ್ರರಾದರು ನಿರಂತರ ಒಂದು ತಿಂಗಳ ಕಾಲ ಜರುಗುವ ಜಾತ್ರೆಯ ಸವಿಯೇ ವಿಶಿಷ್ಟವಾದುದು. ಇದಕ್ಕೆ ಸೇರಿದ್ದ ಸಹಸ್ರಾರು ಭಕ್ತರು ಸಾಕ್ಷಿಯಾಗಿ ಧನ್ಯತಾ ಭಾವ ಮೆರೆದರು.

ಬನಶಂಕರಿ ದೇವಿ ಗುಡಿಯ ಪೂಜಾರ ಮನೆತನದವರಿಂದ ಬೆಳಗ್ಗೆ ವಿಶೇಷ ಪೂಜೆ-ಪುನಸ್ಕಾರಗಳೊಂದಿಗೆ ವಿವಿಧ ಪೂಜಾ ಕೈಂಕರ‍್ಯಗಳು ಮತ್ತು ರಥಾಂಗ ಹೋಮ ನಡೆದು, ಸಂಜೆ 5 ಗಂಟೆಯ ಹೊತ್ತಿಗೆ ಸಹಸ್ರಾರು ಭಕ್ತರು ದೇವಿಯ ನಾವåಸ್ಮರಣೆಯೊಂದಿಗೆ ರಥವನ್ನು ಎಳೆದು ಹೂವು, ಹಣ್ಣು ಕಾಯಿ ಅರ್ಪಿಸುವುದರ ಮೂಲಕ ರಥೋತ್ಸವವು ಸಾಂಗವಾಗಿ ನೆರವೇರಿ ಬನದ ಸಿರಿಯಲ್ಲಿ ಜಾತ್ರೆಯ ಐಸಿರಿ ಸೊಬಗನ್ನು ಬಿಂಬಿಸಿತು. ಇದಕ್ಕಾಗಿ ಗದಗ ಜಿಲ್ಲೆಯ ರೋಣ ತಾಲೂಕಿನ ಮಾಡಲಗೇರಿ ಗ್ರಾಮದ ಭಕ್ತ ವೃಂದವು ಪ್ರತಿವರ್ಷದಂತೆ ಈ ವರ್ಷವು ಧಾರ್ಮಿಕ ಪದ್ಧತಿಯಂತೆ ದೇವಿ ತೇರಿನ ಹಗ್ಗವನ್ನು ಶೃಂಗಾರಗೊಂಡಿದ್ದ ಹಳ್ಳಿ ಬಂಡಿಯಲ್ಲಿ ಕಾಲ್ನಡಿಗೆ ಮೂಲಕ ತೆಗೆದುಕೊಂಡು ಬಂದು ರಥೋತ್ಸವಕ್ಕೆ ಸಮರ್ಪಿಸಿದರು.

ಬಾದಾಮಿ: ಬನಶಂಕರಿದೇವಿ ದರ್ಶನ ಪಡೆದ ಸಚಿವ ಶ್ರೀರಾಮುಲು

ಬನಶಂಕರಿಯ ಸ್ಥಳದಲ್ಲಿ ಕಿಕ್ಕಿರಿದು ತುಂಬಿದ್ದ ಭಕ್ತರ ಕಂಠದಿಂದ ಹೊರಬಂದ ಜಯಘೋಷಗಳ ಮುಗಿಲು ಮುಟ್ಟುವಂತಿತ್ತು. ಹೂವು, ಹಣ್ಣು, ಕಾಯಿ, ಕರುಪರ ಅರ್ಪಿಸುವುದರ ಜೊತೆಗೆ ಬಾಳೆಹಣ್ಣು, ಉತ್ತತ್ತಿಗಳನ್ನು ರಥೋತ್ಸವದಲ್ಲಿ ತೂರಿ ಭಕ್ತಿ-ಭಾವವನ್ನು ಮೆರೆದರು.

ಬನದೇವಿ, ಶಾಖಾಂಬರಿ ಎಂತಲೂ ಕರೆಯಿಸಿಕೊಳ್ಳುವ ಬನಶಂಕರಿದೇವಿಯು ಬನಗಳ ಮಧ್ಯವಿರುವ ದೇವತೆ. ತುಂಬಾ ನಯನ ಮನೋಹರವಾದ ಪರಿಸರದಲ್ಲಿರುವ ಜಾತ್ರಾ ನಿಮಿತ್ತ ವಿದ್ಯುತ್ತ ದೀಪಗಳಿಂದ ಅಲಂಕಾರಗೊಂಡಿದ್ದ ದೇವಾಲಯ ನೋಡುಗರ ಕಣ್ಮನ ಸೆಳೆಯಿತು.

ಎಲ್ಲ ಜಾತಿ, ಜನಾಂಗದ ಆರಾಧ್ಯ ದೇವತೆ ಈ ಬನಶಂಕರಿ. ಕಳೆದ ದಿ 30 ರಂದು ನವರಾತ್ರಿ ಘಟಸ್ಥಾಪನೆ ಹಾಕುವುದರ ಮೂಲಕ ಜಾತ್ರಾ ಮಹೋತ್ಸವದ ವಿವಿಧ ಧಾರ್ಮಿಕ ಕಾರ್ಯಕ್ರಮಗಳಿಗೆ ವಿದ್ಯುಕ್ತವಾಗಿ ಚಾಲನೆ ನೀಡಲಾಗಿತ್ತು, ಶುಕ್ರವಾರ ರಥೋತ್ಸವ ನಡೆದು ಜ.10 ರಂದು ಕಳಸ ಇಳಿಸುವುದು. ಪೌಷ್ಯ ಬಹುಳ ಅಷ್ಟಮಿ ಮಕರ ಸಂಕ್ರಮಣ ಜರುಗಲಿದ್ದು ಲೋಕ ಕಲ್ಯಾಣಾರ್ಥವಾಗಿ ಪ್ರತಿನಿತ್ಯ ವೇದ ಪಾರಾಯಣ ಸಪ್ತಶತಿ ಪಾರಾಯಣ ಸೇರಿದಂತೆ ಇನ್ನಿತರ ಕಾರ್ಯಕ್ರಮಗಳು ಜರುಗಲಿವೆ.

ಹೆಚ್ಚಿನ ಸೇವೆ ಮಾಡಲು ನಿಮ್ಮ, ದೇವಿಯ ಆಶೀರ್ವಾದವಿರಲಿ

ಬಾದಾಮಿ: ತಾಯಿ ಬನಶಂಕರಿ ದೇವಿ ಎಲ್ಲರಿಗೂ ಸುಖ, ಶಾಂತಿ, ಆರ್ಯುಆರೋಗ್ಯ ಕೊಟ್ಟು ಕಾಪಾಡಲಿ ಎಂದು ಕರ್ನಾಟಕದ ಸಮಸ್ಥ ಜನತೆಪರವಾಗಿ ದೇವಿಯಲ್ಲಿ ಕೇಳಿ ಕೊಳ್ಳುತ್ತೇನೆ. ಜಾತ್ರೆ ಆಗಮಿಸಿದ ಜನಸಾಗರಕ್ಕೆ ಕೈ ಮುಗಿದು ಸದಾ ನಿಮ್ಮ ಆಶೀರ್ವಾದ ನನ್ನ ಮೇಲೆ ಇರಲಿ, ಕ್ಷೇತ್ರದ ಅಭಿವೃದ್ಧಿಗೋಸ್ಕರ ಇನ್ನೂ ಹೆಚ್ಚಿನ ಸೇವೆಯನ್ನು ಮಾಡಲು ನಿಮ್ಮ ಮತ್ತು ಬನಶಂಕರಿ ದೇವಿಯ ಆಶೀರ್ವಾದ ಇರಲಿ ಎಂದು ಮಾಜಿ ಸಿಎಂ, ಬಾದಾಮಿ ಶಾಸಕ ಸಿದ್ದರಾಮಯ್ಯ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾರು ಜಾತ್ರೆಯಲ್ಲಿ ಗದ್ದಲವನ್ನು ಮಾಡದೇ ಚೆನ್ನಾಗಿ ಜಾತ್ರೆಯನ್ನು ಮಾಡಿ. ಜನರ ಆಡು ಭಾಷೆಯಲ್ಲಿ ಶಂಕರಿ ಜಾತ್ರೆಯಾಗಿ ಪರಿಣಮಿಸಿರುವ ಈ ಜಾತ್ರೆಗೆಂದು ಸಾವಿರಾರು ಜನತೆ ಬಂದು ಒಂದೆಡೆ ಸೇರಿದ್ದು ನಿಜಕ್ಕೂ ಕೂಡು ಕುಟುಂಬದ ಸಂಭ್ರಮದಂತಿತ್ತು ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಸಹಸ್ರಾರು ಸಂಖ್ಯೆಯಲ್ಲಿ ಭಕ್ತಾಧಿಗಳು ಭಾಗಿ

ಬೆಳ್ಳಂಬೆಳಗು ಪ್ರದರ್ಶಿಸುವ ನಾಟಕ ಮತ್ತು ಸಿನೆಮಾ ಕಂಪನಿಗಳು ಬೇರೆ, ಬೇರೆ ಊರುಗಳಿಂದ ಬಳೆ ವ್ಯಾಪಾರಿಗಳು ಬಂದು ಈ ಜಾತ್ರೆಯಲ್ಲಿ ದೊಡ್ಡದಾದ ಬಳೆಯ ಮಳಿಗೆಯನ್ನೇ ಸೃಷ್ಟಿಮಾಡಿದ್ದಾರೆ. ಅಲ್ಲಿರುವ ವಿವಿಧ ತರಹದ ಬಳೆಗಳನ್ನು ನೋಡುವುದೇ ಹೆಣ್ಣು ವåಕ್ಕಳಿಗೊಂದು ಸಂಭ್ರಮ. ಅದರಂತೆ ಅರಿಷಿಣ-ಕುಂಕುಮದ ಸಾಲು ಅಂಗಡಿಗಳು ಜಾತ್ರೆಗೊಂದು ಕಳೆ ತಂದು ಕೊಟ್ಟಿದ್ದವು. ದೇವಿ ಸನ್ನಿಧಾನಕ್ಕೆ ಬರುವ ಜನ ಬಳೆ, ಕುಂಕುಮ ತೆಗೆದುಕೊಂಡು ಜಾತ್ರೆಯ ಸವಿ ನೆನಪಿನಲ್ಲಿ ತಮ್ಮೂರಿಗೆ ಸಾಗಿ ಆ ಸವಿಯನ್ನು ಎಲ್ಲರಿಗೂ ಹಂಚುತ್ತಾರೆ. ರಥೋತ್ಸವದಲ್ಲಿ ಚುನಾಯಿತ ಪ್ರತಿನಿಧಿಗಳು, ಗಣ್ಯರು, ಅಧಿಕಾರಿಗಳು ಸೇರಿದಂತೆ ಸಹಸ್ರಾರು ಸಂಖ್ಯೆಯಲ್ಲಿ ಭಕ್ತಾಧಿಗಳು ಭಾಗಹಿಸಿದ್ದರು.

ಬಾದಾಮಿ: ತಾಯಿ ಬನಶಂಕರಿದೇವಿ ಜಾತ್ರೆ ಯಶಸ್ವಿಗೊಳಿಸಿ, ಡಿಸಿ ಸುನೀಲಕುಮಾರ

ಪೊಲೀಸ್‌ ಬಂದೋಬಸ್ತ್‌:

ಬಾದಾಮಿಯಿಂದ ಬನಶಂಕರಿವರೆಗೂ ರಸ್ತೆಯಲ್ಲಿ ರಥೋತ್ಸವ ಸಂದರ್ಭದಲ್ಲಿ ವಾಹನಗಳ ಸಂಚಾರವು ಸ್ವಲ್ಪ ಮಟ್ಟಿಗೆ ಅಸ್ತವ್ಯಸ್ತ ಗೊಂಡಿತ್ತಾದರೂ ಕೂಡ ನಾಗರಿಕರು, ಪೊಲೀಸರು ಅದನ್ನು ಸರಳವಾಗಿ ಸುಗಮಗೊಳಿಸುವಲ್ಲಿ ಯಶಸ್ವಿಯಾದರು. ರಥೋತ್ಸವದ ಸಂದರ್ಭದಲ್ಲಿ ಎಸ್ಪಿ, ಸಿಪಿಐ ಮತ್ತು ಪಿಎಸೈ ಹಾಗೂ ಅಂಗರಕ್ಷಕ ದಳ ನೇತೃತ್ವದಲ್ಲಿ ಭಾರಿ ಬಿಗಿ ಪೊಲೀಸ್‌ ಬಂದೋಬಸ್ತ್‌ನ್ನು ಏರ್ಪಡಿಲಾಗಿತ್ತು.

ವಾಹನಗಳ ಭರಾಟೆ:

ರಥೋತ್ಸವ ಸಮಯದಂದು ರಸ್ತೆ ಉದ್ದಗಲಕ್ಕೂ ಸಾರಿಗೆ ಸಂಸ್ಥೆಯ ಬಸ್‌ಗಳು ಮತ್ತು ಆಟೋರಿಕ್ಷಾಗಳು, ಬೈಕ್‌ಗಳು ಭರಾಟೆ ಏಕೆಂದರೆ ಸುಮಾರು ನೂರಾರು ವಾಹನಗಳು ಮೇಲಿಂದ ಮೇಲೆ ಸಂಚರಿಸಿ ಭಕ್ತರನ್ನು ಬನಶಂಕರಿ ದೇವಿಯ ಸ್ಥಳಕ್ಕೆ ಕರೆದೊಯ್ಯುವಲ್ಲಿ ನಿರತವಾಗಿದ್ದವು.

click me!