ಶೃಂಗೇರಿಯಲ್ಲಿ ಸಂಭ್ರಮದ ರಥೋತ್ಸವ: ಶ್ರೀಗಳಿಂದ ಅಡ್ಡ ಪಲ್ಲಕ್ಕಿ ಉತ್ಸವ, ನವರಾತ್ರಿ ಸಂಪನ್ನ!

Published : Oct 25, 2023, 10:43 PM IST
ಶೃಂಗೇರಿಯಲ್ಲಿ ಸಂಭ್ರಮದ ರಥೋತ್ಸವ: ಶ್ರೀಗಳಿಂದ ಅಡ್ಡ ಪಲ್ಲಕ್ಕಿ ಉತ್ಸವ, ನವರಾತ್ರಿ ಸಂಪನ್ನ!

ಸಾರಾಂಶ

ಶಂಕರಾಚಾರ್ಯರಿಂದ ಸ್ಥಾಪನೆಗೊಂಡ ಚಿಕ್ಕಮಗಳೂರಿನ  ಶೃಂಗೇರಿಯ ಶ್ರೀ ಶಾರದಾಂಬೆಯ ಸನ್ನಿದಿಯಲ್ಲಿ ನವರಾತ್ರಿಯನ್ನು ವಿಶೇಷವಾಗಿ ಆಚರಿಸಲಾಗುತ್ತದೆ. ವಿಜಯ ದಶಮಿಯ ಮರುದಿನವಾದ ಇಂದು ಕ್ಷೇತ್ರದಲ್ಲಿ ರಥೋತ್ಸವ ಹಾಗೂ ಅಡ್ಡ ಪಲ್ಲಕ್ಕಿ ಉತ್ಸವಗಳು ನೆರವೇರಿತು. 

ವರದಿ: ಆಲ್ದೂರು ಕಿರಣ್, ಏಷ್ಯಾನೆಟ್ ಸುವರ್ಣ ನ್ಯೂಸ್, ಚಿಕ್ಕಮಗಳೂರು 

ಚಿಕ್ಕಮಗಳೂರು (ಅ.25): ಶಂಕರಾಚಾರ್ಯರಿಂದ ಸ್ಥಾಪನೆಗೊಂಡ ಚಿಕ್ಕಮಗಳೂರಿನ  ಶೃಂಗೇರಿಯ ಶ್ರೀ ಶಾರದಾಂಬೆಯ ಸನ್ನಿದಿಯಲ್ಲಿ ನವರಾತ್ರಿಯನ್ನು ವಿಶೇಷವಾಗಿ ಆಚರಿಸಲಾಗುತ್ತದೆ. ವಿಜಯ ದಶಮಿಯ ಮರುದಿನವಾದ ಇಂದು ಕ್ಷೇತ್ರದಲ್ಲಿ ರಥೋತ್ಸವ ಹಾಗೂ ಅಡ್ಡ ಪಲ್ಲಕ್ಕಿ ಉತ್ಸವಗಳು ನೆರವೇರಿತು. ಶ್ರೀಶಾರದಾ ಮಠದ ಕಿರಿಯ ಜಗದ್ಗುರುಗಳಾದ ವಿಧುಶೇಖರ ಭಾರತೀ ತೀರ್ಥ ಶ್ರೀಪಾದರಿಗೆ ರತ್ನ ಖಚಿತವಾದ ಕಿರೀಟವನ್ನು ತೊಡಿಸಿ, ರಾಜಪೋಷಾಕಿನೊಂದಿಗೆ. ರತ್ನ ಕಚಿತವಾದ ಅಡ್ಡಪಲ್ಲಕ್ಕಿಯಲ್ಲಿ ಕುಳ್ಳಿರಿಸಿ ಮೆರವಣಿಗೆಯನ್ನು ಮಾಡಲಾಯಿತು.

ಗಜ, ಅಶ್ವದಳದೊಂದಿಗೆ  ಪ್ರಮುಖ ಬೀದಿಗಳಲ್ಲಿ ಪಲ್ಲಕ್ಕಿ ಉತ್ಸವ: ಕಳೆದ ಹತ್ತು ದಿನಗಳಿಂದ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಶಾರದಾ ಪೀಠದಲ್ಲಿ ನಡೆದುಕೊಂಡು ಬಂದಿರುವ ನವರಾತ್ರಿ ಉತ್ಸವ ಇಂದು ಜಗದ್ಗುರುಗಳಾದ ವಿಧುಶೇಖರ ಭಾರತೀ ತೀರ್ಥ  ಸ್ವಾಮೀಜಿಗಳ ಅಡ್ಡಪಲ್ಲಕ್ಕಿ ಉತ್ಸವ, ಶಾರದಾಂಬಾ ರಥೋತ್ಸವದ ಮೂಲಕ ಸಂಪನ್ನವಾಯಿತು. ನವರಾತ್ರಿ ಉತ್ಸವದ ದಿನಗಳಲ್ಲಿ ತನ್ನದೇ ಆದ ವಿಶಿಷ್ಯ ತೆ ಹೊಂದಿರುವ ಶೃಂಗೇರಿ ಶಾರದಾ ಪೀಠದಲ್ಲಿ ಇಂದು ನಡೆದ ರಥೋತ್ಸವ ಹಾಗು ಶ್ರೀಗಳ ಅಡ್ಡಪಲ್ಲಕ್ಕಿ ಉತ್ಸವ ಭಾರೀ ಮಹತ್ವನ್ನು ಪಡೆದುಕೊಂಡಿದೆ. ವಿಶೇಷ ಪೋಷಾಕು, ರತ್ನಖಚಿತ ಕಿರೀಟ ಧಾರಣೆ ಮಾಡಿದ ಶ್ರೀಗಳು ಸ್ವರ್ಣ ಪಲ್ಲಕ್ಕಿಯನ್ನು ಏರಿದ ಬಳಿಕ ಮಠದ ಸಂಪ್ರದಾಯ, ಬಿರುದು ಬಾವಲಿ, ಜಾನಪದ ನೃತ್ಯ, ನಾಡಿನ ಸಂಸ್ಕೃತಿ, ಇತಿಹಾಸ ಬಿಂಬಿಸುವ ಸ್ಥಬ್ದ ಚಿತ್ರಗಳು, ಗಜ, ಅಶ್ವದಳದೊಂದಿಗೆ  ಪ್ರಮುಖ ಬೀದಿಗಳಲ್ಲಿ ಪಲ್ಲಕ್ಕಿ ಸಾಗಿತ್ತು

ನಿಖಿಲ್‌ಗೆ ಗಿಫ್ಟ್ ಬಂದಿರೋದು ಎಂದು ಅರಣ್ಯಾಧಿಕಾರಿಗಳಿಗೆ ಹುಲಿ ಉಗುರಿನ ಪೆಂಡೆಂಟ್ ಒಪ್ಪಿಸಿದ ಎಚ್‌ಡಿಕೆ!

ಸಂಭ್ರಮದ ಕ್ಷಣಗಳನ್ನು ಸಾಕ್ಷೀಕರಿಸಿದ ಸಾವಿರಾರು ಭಕ್ತರು: ಶೃಂಗೇರಿಯಲ್ಲಿ ಶಾರದಾಂಬಾ ರಥೋತ್ಸವ ಹಾಗು ಶ್ರೀಗಳ ಪಲ್ಲಕ್ಕಿ ಉತ್ಸವ ಒಂದೇ ಸಂದರ್ಭದಲ್ಲಿ ನಡೆಯುವುದು ಇನ್ನೊಂದು ವಿಶೇಷವಾಗಿದೆ. ಹೀಗಾಗಿ ಈ ಸಂಭ್ರಮದ ಕ್ಷಣಗಳನ್ನು ಸಾಕ್ಷೀಕರಿಸಲು ನಾಡಿನ ಮೂಲೆ ಮೂಲೆಗಳಿಂದ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಬಂದು ಸೇರಿದ್ರು.ಪಲ್ಲಕ್ಕಿ ಉತ್ಸವಶೃಂಗೇರಿಯ ರಾಜಬೀದಿಗಳಲ್ಲಿ ಸಂಚರಿಸಿತು. ಮೆರವಣಿಗೆಯಲ್ಲಿ ಭಜನಾ ಕಾರ್ಯಕ್ರಮ, ಹೋಳಿನೃತ್ಯ, ಮಲೆನಾಡ ಮದುವೆಯ ಟ್ಯಾಬ್ಲೋ , ಎಲ್ಲರ ಗಮನ ಸೇಳೆಯಿತು. ಪಲ್ಲಕಿ ಉತ್ಸವದ ಬಳಿಕ ಶ್ರೀಗಳು ಶಾರದಾಂಬೆಗೆ ವಿಶೇಷ ಪೂಜೆ ಸಲ್ಲಿಸಿ ಸಾಂಪ್ರದಾಯಿಕ ಹಗಲು ದಬಾರ್ ನಡೆಸಿದ್ರು. ಒಟ್ಟಾರೆ  ಶ್ರೀ ಶಾರದಾ ಪೀಠದಲ್ಲಿ ನಡೆದ ರಥೋತ್ಸವ ಮತ್ತು ಭಾರತೀ ತೀರ್ಥ ಶ್ರೀಗಳ ಅಡ್ಡ  ಪಲ್ಲಕ್ಕಿ  ಉತ್ಸವದೊಂದಿಗೆ ಶೃಂಗೇರಿಯಲ್ಲಿ ಕಳೆದ ಹತ್ತು ದಿನ ಕಾಲ ನಡೆದ ಈ ಭಾರೀಯ  ನವರಾತ್ರಿ ಉತ್ಸವಕ್ಕೆ ತೆರೆ ಬಿತ್ತು.

PREV
Read more Articles on
click me!

Recommended Stories

ಕುಮಾರ ಪರ್ವತ ಯಾತ್ರೆ, ಬೆಟ್ಟದ ತುದಿಯಲ್ಲಿರುವ ದೇವರ ಪಾದಕ್ಕೆ ಸಂಪ್ರದಾಯದಂತೆ ವಿಶೇಷ ಪೂಜೆ ಸಂಪನ್ನ
ಅಂಜುವ ಮಾತೇ ಇಲ್ಲ, ತಮ್ಮ ಹಣೆಬರಹವನ್ನ ತಾವೇ ಬದಲಾಯಿಸಿಕೊಳ್ಳುವ 4 ರಾಶಿಗಳಿವು