Daily Horoscope: ವೃಷಭಕ್ಕೆ ಸ್ಪರ್ಧಿಗಳಿಂದ ಸಮಸ್ಯೆ, ವೃಶ್ಚಿಕಕ್ಕೆ ಗೌರವಾದರ

By Suvarna NewsFirst Published Jan 27, 2022, 5:00 AM IST
Highlights

27 ಜನವರಿ 2022, ಗುರುವಾರದ ಭವಿಷ್ಯ ಹೇಗಿದೆ?
ಯಾವ ರಾಶಿಗೆ ಶುಭ ಫಲವಿದೆ?
ಮೇಷದ ಸಮಸ್ಯೆಗಳು ಈಡೇರಲಿವೆ, ಕುಂಭಕ್ಕೆ ಆಸ್ತಿ ಖರೀದಿ ಯೋಗ

ಮೇಷ(Aries): ನಿಮ್ಮ ದೊಡ್ಡ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ. ಆದರೆ, ಕುಟುಂಬ ಸದಸ್ಯರ ಮೇಲೆ ವೃಥಾ ಅನುಮಾನ ಮಾಡಿ ಮತ್ತೊಂದು ಸಮಸ್ಯೆ ಮೈ ಮೇಲೆ ಎಳೆದುಕೊಳ್ಳಬೇಡಿ. ಕಚೇರಿಯಲ್ಲಿ ಮೆಚ್ಚುಗೆ ಇರಲಿದೆ. ಖರ್ಚು ವೆಚ್ಚ ಹೆಚ್ಚಬಹುದು. ದತ್ತಾತ್ರೇಯ ಸ್ಮರಣೆ ಮಾಡಿ. 

ವೃಷಭ(Taurus): ವ್ಯಾಪಾರಿಗಳಿಗೆ ಅಸೂಯಾಪರರಿಂದ, ಸ್ಪರ್ಧಿಗಳಿಂದ ತೊಂದರೆಗಳು ಎದುರಾಗಬಹುದು. ಆರೋಗ್ಯ ಚೆನ್ನಾಗಿರಲಿದೆ. ಬೇಗ ಹಣ ಸಂಪಾದಿಸಬೇಕೆಂಬ ಹಪಹಪಿಗೆ ಬಿದ್ದು ಅಡ್ಡ ದಾರಿ ಹಿಡಿಯುವ ಯೋಚನೆಯೂ ಮಾಡಬೇಡಿ. ವಿಷ್ಣು ಸಹಸ್ರನಾಮ ಪಠಣ ಮಾಡಿ. 

ಮಿಥುನ(Gemini): ಕೆಲಸದ ಸ್ಥಳದಲ್ಲಿ ಸವಾಲುಗಳು ಎದುರಾಗಬಹುದು. ತಾಂತ್ರಿಕ ಅಡಚಣೆಗಳು ಉಂಟಾಗಬಹುದು. ಏಕಾಗ್ರತೆ ತಪ್ಪಬಹುದು. ಚಂಚಲತೆ ತಪ್ಪಿಸಿಕೊಳ್ಳಲು ಧ್ಯಾನದ ಮೊರೆ ಹೋಗಿ. ಸುಳ್ಳಾಡಿ ಆಪ್ತರ ನಂಬಿಕೆ ಕಳೆದುಕೊಳ್ಳುವ ಪರಿಸ್ಥಿತಿ ತಂದುಕೊಳ್ಳಬೇಡಿ. ಗುರು ರಾಯರ ಸ್ಮರಣೆ ಮಾಡಿ. 

ಕಟಕ(Cancer): ಆರ್ಥಿಕ ವಿಷಯಗಳ ಕುರಿತ ನಿರ್ಧಾರಗಳನ್ನು ತೆಗೆದುಕೊಳ್ಳುವಾಗ ಎರಡೆರಡು ಬಾರಿ ಯೋಚಿಸಿ. ವ್ಯಾಪಾರದಲ್ಲಿ ನಷ್ಟ ಉಂಟಾಗಬಹುದು. ಸ್ನೇಹಿತರೊಂದಿಗೆ ಕಾಲ ಕಳೆಯಬಹುದು. ಆರ್ಥಿಕ ಪರಿಸ್ಥಿತಿ ಸಾಮಾನ್ಯವಾಗಿರಲಿದೆ. ರಾಘವೇಂದ್ರ ಶತನಾಮಾವಳಿ ಹೇಳಿಕೊಳ್ಳಿ. 

ಸಿಂಹ(Leo): ದೂರ ಪ್ರಯಾಣದಿಂದ ಮನಸ್ಸಿಗೆ ನೆಮ್ಮದಿ ಇದ್ದರೂ ದೇಹಾಯಾಸ ಕಾಡಬಹುದು. ಧಾರ್ಮಿಕ ವಿಚಾರಗಳಲ್ಲಿ ಆಸಕ್ತಿ. ವ್ಯಾಪಾರಿಗಳಿಗೆ ಮಿಶ್ರ ಫಲ ದೊರೆಯಲಿದೆ. ಸಂಗಾತಿಯೊಂದಿಗೆ ಜಗಳ ಆಡುವಾಗ ಪದ ಬಳಕೆ ಬಗ್ಗೆ ಎಚ್ಚರ ಇರಲಿ. ಮಾತು ಮಿತವಾಗಿದ್ದರೆ ಒಳಿತು. ರಾಮ ಸ್ಮರಣೆ ಮಾಡಿ. 

ಕನ್ಯಾ(Virgo): ಬಹಳ ಸಮಯದಿಂದ ನಿಂತಿದ್ದ ಕೆಲಸ ಚುರುಕು ಪಡೆಯಬಹುದು. ಪೋಷಕರ ಸಹಕಾರದಿಂದ ಗುರಿ ಸಾಧನೆಯತ್ತ ಸಾಗುವಿರಿ. ನಿರುದ್ಯೋಗಿಗಳಿಗೆ ಅವಕಾಶಗಳು ಎದುರಾಗಬಹುದು. ಸ್ವಂತ ಉದ್ಯಮ ಆರಂಭಿಸಲು ಶುಭದಿನ. ಬಡವರಿಗೆ ವಸ್ತ್ರ ದಾನ ಮಾಡಿ. 

ತುಲಾ(Libra): ದೂರ ಪ್ರಯಾಣ ಯೋಗ ಬರಲಿದೆ. ಮನೆ ಹಿರಿಯರ ಆರೋಗ್ಯದಲ್ಲಿ ಏರುಪೇರಾಗಬಹುದು. ಕೈಗೊಂಡ ಕಾರ್ಯಗಳಿಗೆ ಅಡೆ ತಡೆ ಉಂಟಾಗಬಹುದು. ಮನೆ ಹಿರಿಯರ ಆಶೀರ್ವಾದ ಪಡೆಯಿರಿ. ಹಣಕಾಸು ಖರ್ಚು ಹೆಚ್ಚಲಿದೆ. ತಾಯಿಯ ಕೈಯಿಂದ ಸಿಹಿ ತಿನ್ನಿಸಿಕೊಳ್ಳಿ. 

Energy Centers: ನಾವೇಕೆ ಪ್ರತಿ ದಿನ ದೇವಸ್ಥಾನಕ್ಕೆ ಭೇಟಿ ನೀಡಬೇಕು?

ವೃಶ್ಚಿಕ(Scorpio): ಮಾತೇ ಮುತ್ತು, ಮಾತೇ ಮೃತ್ಯು ಎಂಬುದನ್ನು ನೆನಪಲ್ಲಿಡಿ. ಸಾಮಾಜಿಕವಾಗಿ ಗೌರವಾದರಗಳು ಹೆಚ್ಚಲಿವೆ. ವಿವಿಧ ಮೂಲಗಳಿಂದ ಹಣಕಾಸು ಬರಲಿದೆ. ಮತ್ತೊಬ್ಬರ ವಿಚಾರದಲ್ಲಿ ಮಧ್ಯಸ್ಥಿಕೆ ಮಾಡಲು ಹೋಗಿ ದ್ವೇಷ ಕಟ್ಟಿ ಕೊಳ್ಳಬೇಡಿ. ಗಣಪತಿ ಸ್ಮರಣೆ ಮಾಡಿ. 

ಧನುಸ್ಸು(Sagittarius): ಯಾವ ಯೋಚನೆಯಿಂದ ಕೆಲಸಕ್ಕೆ ಕೈ ಹಾಕಿದರೂ ಸರಿ ಹೋಗದೆ ಮಾನಸಿಕ ಒತ್ತಡ ಹೆಚ್ಚಬಹುದು. ದ್ವೇಷಿಸುವವರ ಕಾಟ ಹೆಚ್ಚಲಿದೆ. ವಿವಾಹಕ್ಕೆ ಸಂಬಂಧ ಕೂಡಿ ಬರುವುದು. ಆರೋಗ್ಯದ ಬಗ್ಗೆ ಅಲಕ್ಷ್ಯ ಬೇಡ. ಹತ್ತಿರದ ದೇವಾಲಯಕ್ಕೆ ಭೇಟಿ ನೀಡಿ. 

ಮಕರ(Capricorn): ಮಾತಿನ ಮೋಡಿಯಿಂದ ಜನರನ್ನು ಗೆಲ್ಲುತ್ತೀರಿ. ಸತತ ಪ್ರಯತ್ನಕ್ಕೆ ಫಲ ಇದ್ದೇ ಇರುತ್ತದೆ. ಬುದ್ಧಿಕೌಶಲದಿಂದ ಉದ್ಯೋಗದಲ್ಲಿ ಭಡ್ತಿ ದೊರೆಯುವುದು. ಸರ್ಕಾರಿ ನೌಕರರ ತೊಂದರೆಗಳು ನಿವಾರಣೆಯಾಗುವುವು. ಉನ್ನತ ವ್ಯಾಸಂಗಕ್ಕೆ ವಿದೇಶ ಪ್ರಯಾಣ ಯೋಗವಿದೆ. ರಾಘವೇಂದ್ರ ಸ್ವಾಮಿ ಸ್ಮರಣೆ ಮಾಡಿ. 

Diamond Astrology: ಕೊಳ್ಳುವ ಮೊದಲು ನಿಮಗೆ ವಜ್ರ ಆಗಿ ಬರುತ್ತದೆಯೇ ಇಲ್ಲವೇ ತಿಳಿಯಿರಿ..

ಕುಂಭ(Aquarius): ವಸ್ತು, ವಾಹನ, ಆಸ್ತಿ ಖರೀದಿ ಯೋಗವಿದೆ. ಆಸ್ತಿ ಖರೀದಿ ಇಲ್ಲವೇ ಮಾರಾಟದ ವ್ಯವಹಾರ ಕುದುರುವುದು. ವೃತ್ತಿ ಕೌಶಲ್ಯದಿಂದ ಅಸಾಧ್ಯವಾದುದನ್ನೂ ಸಾಧಿಸಿ ಸೈ ಎನಿಸಿಕೊಳ್ಳುವಿರಿ. ಪರೋಪಕಾರ ಬುದ್ಧಿಯಿಂದ ಜನ ಮೆಚ್ಚುಗೆ ಗಳಿಸುವಿರಿ. ಕೃಷ್ಣನಿಗೆ ತುಳಸಿ ಅರ್ಪಿಸಿ. 

ಮೀನ(Pisces): ವಾಹನಗಳ ವೇಗದ ಚಾಲನೆ ಬೇಡವೇ ಬೇಡ. ಅತಿಯಾದ ಆತ್ಮವಿಶ್ವಾಸ ಯಾವುದಕ್ಕೂ ಒಳ್ಳೆಯದಲ್ಲ. ಹಣ ಹೂಡಿಕೆ ಮಾಡುವ ಮುನ್ನ ನಾಲ್ಕು ಬಾರಿ ಯೋಚಿಸಿ. ಪಾಲುದಾರಿಕೆ ಕೆಲಸಗಳ ಬಗ್ಗೆ ಎಚ್ಚರ ಅಗತ್ಯ. ಹಸುವಿಗೆ ಹುಲ್ಲು ತಿನ್ನಿಸಿ. 

click me!