ಹಾಸನ: ಸಂಭ್ರಮದ ಹಾಸನಾಂಬೆ-ಸಿದ್ದೇಶ್ವರ ಜಾತ್ರಾ ಮಹೋತ್ಸವ, ಇಂದು ಮಧ್ಯಾಹ್ನ 12ಕ್ಕೆ ದೇಗುಲ ಬಂದ್‌

Published : Oct 27, 2022, 08:55 AM IST
ಹಾಸನ: ಸಂಭ್ರಮದ ಹಾಸನಾಂಬೆ-ಸಿದ್ದೇಶ್ವರ ಜಾತ್ರಾ ಮಹೋತ್ಸವ, ಇಂದು ಮಧ್ಯಾಹ್ನ 12ಕ್ಕೆ ದೇಗುಲ ಬಂದ್‌

ಸಾರಾಂಶ

ಇಂದು ಮಧ್ಯಾಹ್ನ 12 ಗಂಟೆ ಸುಮಾರಿಗೆ ಹಾಸನಾಂಬೆ ದೇಗುಲದ ಗರ್ಭಗುಡಿ ಬಂದ್ ಆಗಲಿದೆ. ಶಾಸ್ತ್ರೋಕ್ತವಾಗಿ ಗರ್ಭಗುಡಿಯ ಬಾಗಿಲು ಮುಚ್ಚಲಿರುವ ಪುರೋಹಿತರು

ಹಾಸನ(ಅ.27):  ಹಾಸನಾಂಬೆ ಹಾಗೂ ಸಿದ್ದೇಶ್ವರ ಜಾತ್ರಾ ಮಹೋತ್ಸವ ಹಿನ್ನೆಲೆಯಲ್ಲಿ ದೇವಾಲಯದ ಆವರಣದಲ್ಲಿ ಕೆಂಡೋತ್ಸವ ನಡೆದಿದೆ. ಕೆಂಡೋತ್ಸವದಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡಿದ್ದರು. ಸಿದ್ದೇಶ್ವರ ಸ್ವಾಮಿ ಉತ್ಸವ ನಡೆಸಿದ ಬಳಿಕ ಕೆಂಡೋತ್ಸವ ನಡೆದಿದೆ.

ಇಂದು(ಗುರುವಾರ) ಮಧ್ಯಾಹ್ನ 12 ಗಂಟೆ ಸುಮಾರಿಗೆ ಹಾಸನಾಂಬೆ ದೇಗುಲದ ಗರ್ಭಗುಡಿ ಬಂದ್ ಆಗಲಿದೆ. ಪುರೋಹಿತರು ಶಾಸ್ತ್ರೋಕ್ತವಾಗಿ ಗರ್ಭಗುಡಿಯ ಬಾಗಿಲು ಮುಚ್ಚಲಿದ್ದಾರೆ. 

ಹಾಸನಾಂಬೆಯಲ್ಲಿ ಭೀಕರ ಭವಿಷ್ಯ ನುಡಿದ ಬ್ರಹ್ಮಾಂಡ ಗುರೂಜಿ

ಜಿಲ್ಲಾ ಉಸ್ತುವಾರಿ ಸಚಿವ ಗೋಪಾಲಯ್ಯ, ಜಿಲ್ಲಾಧಿಕಾರಿ, ಪೊಲೀಸ್ ವರಿಷ್ಠಾಧಿಕಾರಿ ಸೇರಿದಂತೆ ಅಧಿಕಾರಿಗಳ ಹಾಗೂ ಜನಪ್ರತಿನಿಧಿಗಳ ಸಮ್ಮುಖದಲ್ಲಿ ಗರ್ಭಗುಡಿ ಬಾಗಿಲು ಕ್ಲೋಸ್ ಆಗಲಿದೆ.  ಹೀಗಾಗಿ ಇಂದು 11 ಗಂಟೆಯವರೆಗೂ ಹಾಸನಾಂಬೆಗೆ ನೈವೇದ್ಯ ನಡೆಯಲಿದೆ. 11 ಗಂಟೆ ನಂತರ ಗರ್ಭಗುಡಿ ಕ್ಲೋಸ್ ಮಾಡೋದಕ್ಕೆ ವಿಧಿವಿಧಾನ ಆರಂಭವಾಗಲಿದೆ. ಮತ್ತೆ ಮುಂದಿನ ವರ್ಷ ಹಾಸನಾಂಬೆಯ ದರ್ಶನ ಸಿಗಲಿದೆ. 
 

PREV
Read more Articles on
click me!

Recommended Stories

ನಾಳೆ ಫೆಬ್ರವರಿ 26 ರಂದು ಕುಂಭ ರಾಶಿಯಲ್ಲಿ ಬುಧ ಹಿಮ್ಮುಖ, ನಾಳೆಯಿಂದ ಈ 3 ರಾಶಿಗೆ ಹಣ ಮತ್ತು ಸಮೃದ್ಧಿ
ಮುಂದಿನ 8 ದಿನಗಳವರೆಗೆ 5 ರಾಶಿಗೆ ಕಷ್ಟ-ನಷ್ಟ, 9 ಗ್ರಹಗಳು ತೀವ್ರ ಕೋಪದಿಂದ ವಿಪತ್ತು