Chikkamagaluru: ಹಿರೇಮಗಳೂರಿನ ಶ್ರೀ ಕೋದಂಡರಾಮ ದೇವಾಲಯದಲ್ಲಿ ಕನ್ನಡದಲ್ಲಿ ಪೂಜೆ

By Govindaraj SFirst Published Oct 31, 2022, 8:09 PM IST
Highlights

ಕರ್ನಾಟಕದಲ್ಲೇ ಕನ್ನಡದ ಉಳಿವಿಗಾಗಿ ಹೋರಾಡ್ಬೇಕಾದ ಸ್ಥಿತಿ ಬಂದೊಂದಗಿದೆ. ಕನ್ನಡದ ಅಸ್ತಿತ್ವಕ್ಕಾಗಿ ಕನ್ನಡಿಗರೇ ಹೋರಾಟ, ಚಳುವಳಿಗಿಳಿದಿರೋದು ನಿಜಕ್ಕೂ ದುರಾದೃಷ್ಟ. 

ವರದಿ: ಆಲ್ದೂರು ಕಿರಣ್, ಏಷ್ಯಾನೆಟ್ ಸುವರ್ಣ ನ್ಯೂಸ್, ಚಿಕ್ಕಮಗಳೂರು 

ಚಿಕ್ಕಮಗಳೂರು (ಅ.31): ಕರ್ನಾಟಕದಲ್ಲೇ ಕನ್ನಡದ ಉಳಿವಿಗಾಗಿ ಹೋರಾಡ್ಬೇಕಾದ ಸ್ಥಿತಿ ಬಂದೊಂದಗಿದೆ. ಕನ್ನಡದ ಅಸ್ತಿತ್ವಕ್ಕಾಗಿ ಕನ್ನಡಿಗರೇ ಹೋರಾಟ, ಚಳುವಳಿಗಿಳಿದಿರೋದು ನಿಜಕ್ಕೂ ದುರಾದೃಷ್ಟ. ಇಂತಹಾ ಕಾಲಘಟ್ಟದಲ್ಲಿ ಚಿಕ್ಕಮಗಳೂರು ಜಿಲ್ಲೆಯ ಹಿರೇಮಗಳೂರಿನ ಶ್ರೀಕೋದಂಡರಾಮ ದೇವಾಲಯದಲ್ಲಿ ಮಾತ್ರ ಕನ್ನಡವನ್ನ ಉಳಿಸಿ, ಬೆಳೆಸೋದ್ರ ಜೊತೆ ಕನ್ನಡದ ಮಹತ್ವವನ್ನ ವಿಶ್ವವ್ಯಾಪ್ತಿ ಸಾರುವ ಕೆಲಸದಲ್ಲಿ ನಿರತವಾಗಿದೆ. ಇಲ್ಲಿ ಸಂಸ್ಕೃತಕ್ಕೆ ನೋ ಎಂಟ್ರಿ. ಮದುವೆ, ಉಪನಯನ ಸೇರಿದಂತೆ ಎಲ್ಲಾ ಧಾರ್ಮಿಕ ಪೂಜೆಯೂ ಕನ್ನಡದಲ್ಲೇ. 

ಇದು ನಿಜಕ್ಕೂ ಕನ್ನಡಿಗನ ಹೆಮ್ಮೆ: ಕಲೆ, ಸಾಹಿತ್ಯ, ಸಾಂಸ್ಕೃತಿಕ ಕ್ಷೇತ್ರದಲ್ಲಿ ಕಾಫಿನಾಡು ಚಿಕ್ಕಮಗಳೂರು ತನ್ನದೇ ಆದ ಚಾಪು ಮೂಡಿಸಿದೆ. ಚಿಕ್ಕಮಗಳೂರು ನಗರದಿಂದ ಐದಾರು ಕಿ.ಮೀ. ದೂರದ ಶ್ರೀ ಕೋದಂಡರಾಮ ಸ್ವಾಮಿ ದೇವಾಲಯದಲ್ಲಿ ಕೋದಂಡರಾಮನಿಗೆ ಕನ್ನಡದಲ್ಲೇ ಪೂಜೆ-ಕೈಂಕರ್ಯಗಳನ್ನ ನೆರವೇರಿಸೋ ಮೂಲಕ ಕಾಫಿನಾಡು ತನ್ನದೇ ಆದ ಖ್ಯಾತಿ ಗಳಿಸಿದೆ. ದೇವಾಲಯಗಳಲ್ಲಿ ಸಂಸ್ಕೃತದಲ್ಲಿ ಮಂತ್ರ ಪಠಣ ಮಾಡೋದು ಸಾಮಾನ್ಯ. ಆದ್ರೆ, ಈ ದೇವಾಲಯದ ಅರ್ಚಕರಾಗಿರೋ ಹಿರೇಮಗಳೂರು ಕಣ್ಣನ್, ಕನ್ನಡದಲ್ಲೇ ಪೂಜೆ ಮಾಡೋದನ್ನ ರೂಢಿಸಿಕೊಂಡಿದ್ದಾರೆ. 

Chikkamagaluru: ಬಾಸೂರು ಹುಲ್ಲುಗಾವಲು ಪ್ರದೇಶದಲ್ಲಿ ಕುರಿಗಳು: ಭವಿಷ್ಯದಲ್ಲಿ ಮೇವು ಸಿಗದ ಪರಿಸ್ಥಿತಿ

ಹಿರೇಮಗಳೂರಿನ ಈ ದೇವಾಲಯದಲ್ಲಿ ನಿತ್ಯವೂ ಮಂತ್ರ ಪಠಣ, ಹೋಮ, ಹವನ ಎಲ್ಲವೂ ಕನ್ನಡದಲ್ಲೇ. ಮದುವೆಯನ್ನು ಕನ್ನಡದಲ್ಲೇ ಮಾಡೋದು ಇಲ್ಲಿನ ವಿಶೇಷ. ದೇವಾಲಯದೊಳಗಿನ ಗೋಡೆಗಳ ಮೇಲೆಲ್ಲವೂ ಕನ್ನಡಮಯ. ದೇವಾಲಯದ ವಠಾರವೆಲ್ಲವೂ ಸಂಪೂರ್ಣ ಕನ್ನಡಾಂಭೆಯ ಮಡಿಲು. ದೇವಾಲಯಕ್ಕೆ ಬರೋ ಭಕ್ತರಿಗೆ ಭಕ್ತಿಯ ಜೊತೆ ಕನ್ನಡ ಹಾಗೂ ಜೀವನದ ಪಾಠಗಳ ಸಂದೇಶವುಳ್ಳ ಬರಹಗಳು ದೇವಾಲಯದ ಗೋಡೆಗಳ ಮೇಲೆಲ್ಲಾ ರಾರಾಜಿಸ್ತಿವೆ.  

ವಿದೇಶಿಗರಿಗೆ ಸಂಸ್ಕೃತ ಹೇಳಿಕೊಡೋ ಕಣ್ಣನ್, ಕೋದಂಡರಾಮನಿಗೆ ಕನ್ನಡದಲ್ಲೇ ಪೂಜಾ: ನಾಲ್ಕು ದಶಕಗಳ ಹಿಂದೆ ಚಿಕ್ಕಮಗಳೂರಿನ ಹಿರೇಮಗಳೂರಿಗೆ ಆಗಮಿಸಿದ ಕಣ್ಣನ್ ತಂದೆ ಸಚ್ಚಿದಾನಂದರವರು ಕನ್ನಡ ನೆಲದಲ್ಲಿ ಕನ್ನಡವೇ ಕಣ್ಮರೆಯಾಗ್ತಿರೋ ಕಾಲದಲ್ಲಿ ಏಕೆ ಕನ್ನಡವನ್ನು ಉಳಿಸಬಾರದೆಂದು ನಿತ್ಯವೂ ಕೋದಂಡರಾಮನಿಗೆ ಕನ್ನಡದಲ್ಲಿ ಪೂಜೆ ಸಲ್ಲಿಸಲು ಪ್ರಾರಂಭಿಸಿದ್ದರು. ಅಪ್ಪನ ಹಾದಿಯನ್ನೇ ಮೈಗೂಡಿಸಿಕೊಂಡ ಕಣ್ಣನ್ ಕೂಡ ಅಂದಿನಿಂದಲೂ ಕನ್ನಡದಲ್ಲಿ ಪೂಜೆ ಮಾಡುವುದನ್ನು ಅಭ್ಯಾಸ ಮಾಡಿಕೊಂಡು, ಕನ್ನಡದ ನೆಲದಲ್ಲೇ ಕನ್ನಡದ ಉಳಿವಿಗೆ ಶ್ರಮಿಸುತ್ತಿದ್ದಾರೆ. ದೇಶ ವಿದೇಶಗಳಿಂದ್ಲೂ ಇಲ್ಲಿಗೆ ನೂರಾರು ಭಕ್ತರು ಆಗಮಿಸ್ತಾರೆ. 

Chikkamagaluru: ಮಾಟ ಮಂತ್ರಕ್ಕೆ ಇಲ್ಲಿ ಬ್ರೇಕ್: ಕಣ್ಣಾಸರಕ್ಕೂ ಇಲ್ಲಿನ ಪೂಜೆ ರಾಮಬಾಣ

ವಿಶ್ವದ ನಾನಾ ಭಾಗಗಳಿಂದ ಬರೋ ವಿದೇಶಿಗರಿಗೆ ಸಂಸ್ಕೃತ ಹೇಳಿಕೊಡೋ ಕಣ್ಣನ್, ಕೋದಂಡರಾಮನಿಗೆ ಕನ್ನಡದಲ್ಲೇ ಪೂಜಾ ಕೈಂಕರ್ಯ ನೆರವೇರಿಸ್ತಿದ್ದಾರೆ. ದೇವರಿಗೆ ಕನ್ನಡದಲ್ಲೇ ಮಂತ್ರ ಪಠಣ ಕೇಳಿದ ಭಕ್ತರಿಗೆ ಅಚ್ಚರಿಯಾಗೋದ್ರ ಜೊತೆ, ಕಣ್ಣನ್ ಮಾಮನ ಬಗ್ಗೆಯೂ ಅಪಾರ ಗೌರವ ವ್ಯಕ್ತಪಡಿಸ್ತಾರೆ. ಪ್ರತಿವರ್ಷ ಇಸ್ರೇಲ್ ದೇಶದಿಂದ ಬರುವ ಸಂಸ್ಕೃತ ವಿದ್ಯಾರ್ಥಿಗಳಿಗೆ ಸಂಸ್ಕೃತ ಪಾಠವನ್ನು ಕಣ್ಣನ್ ಭೋದನೆ ಮಾಡುತ್ತಾರೆ. ಒಟ್ಟಾರೆ, ಇಲ್ಲಿಗೆ ಬರೋ ಭಕ್ತರಿಗೆ ಕನ್ನಡ ನಾಡು ನುಡಿಯ ಬಗ್ಗೆ ಅರಿವೂ ಮೂಡಿಸುವ ಕಾರ್ಯವನ್ನು ಈ ದೇವಾಲಯ ಮಾಡ್ತಿದೆ. ಆಂಗ್ಲ ಭಾಷೆಯ ವ್ಯಾಮೋಹದ ನಡುವೆ ಮರೆಯಾಗ್ತಿರೋ ಕನ್ನಡವನ್ನು ಉಳಿಸಿ ಬೆಳೆಸುವ ಕಾರ್ಯವನ್ನು ಮಾಡುತ್ತಿರುವ ಕಣ್ಣನ್ರವರ ಸಾಧನೆ ನಿಜಕ್ಕೂ ಶ್ಲಾಘನೀಯ. ಆದ್ರೆ, ಸರ್ಕಾರವೂ ಕಣ್ಣನ್‌ಗೆ ಸೂಕ್ತ ರೀತಿಯಲ್ಲಿ ಸಹಕಾರ ನೀಡಿದ್ದೇ ಆದ್ರೆ, ಮುಂದಿನ ದಿನಗಳಲ್ಲಿ ಕಣ್ಣನ್ ಇಡೀ ಕರ್ನಾಟಕವೇ ಕನ್ನಡಮಯವಾಗಿಸೋದ್ರಲ್ಲಿ ಎರಡು ಮಾತಿಲ್ಲ.

click me!