Udupi ಪೊಲೀಸರಿಗೆ ಗೌರವ ಕೊಡದೆ ಇಲ್ಲಿ ಜಾತ್ರೆ ಶುರುವಾಗುವುದೇ ಇಲ್ಲ!

Published : Apr 23, 2022, 04:05 PM IST
Udupi ಪೊಲೀಸರಿಗೆ ಗೌರವ ಕೊಡದೆ ಇಲ್ಲಿ ಜಾತ್ರೆ ಶುರುವಾಗುವುದೇ ಇಲ್ಲ!

ಸಾರಾಂಶ

ಉತ್ಸವಕ್ಕೆ ಮುನ್ನ ಪೊಲೀಸರಿಗೆ ಮರ್ಯಾದೆ ಮೆರವಣಿಗೆಯಲ್ಲಿ ಪೊಲೀಸರು ಬಂದ ಬಳಿಕವೇ ರಥೋತ್ಸವ ಬ್ರಹ್ಮಾವರದಲ್ಲೊಂದು ವಿಶಿಷ್ಟ ಸಂಪ್ರದಾಯ

ಉಡುಪಿ(ಏ.23): ವ್ಯಕ್ತಿಗೆ ಅಥವಾ ವ್ಯವಸ್ಥೆಗೆ ಭಯದಿಂದ ಗೌರವ ನೀಡೋದು ಬೇರೆ; ಪ್ರೀತಿಯಿಂದ ಗೌರವ ನೀಡೋದೇ ಬೇರೆ. ಉಡುಪಿಯ ಬ್ರಹ್ಮಾವರ ಜಾತ್ರೆಯಲ್ಲೊಂದು ವಿಶಿಷ್ಟ ಸಂಪ್ರದಾಯವಿದೆ. ಇಲ್ಲಿ ಪೋಲೀಸರು ಬಾರದೆ ರಥೋತ್ಸವ ಆರಂಭವಾಗಲ್ಲ. ಅವರನ್ನು ಅಕ್ಕರೆಯಿಂದ ಮೆರವಣಿಗೆಯಲ್ಲಿ ಕರೆತಂದ ನಂತರವೇ ಹಬ್ವದ ಸಂಭ್ರಮ ಕಳೆಕಟ್ಟೋದು!

ಉಡುಪಿಯ ಬ್ರಹ್ಮಾವರ ಮಹಾಲಿಂಗೇಶ್ವರ ಜಾತ್ರೆಯಲ್ಲಿ ಈ ಅಪರೂಪದ ಸಂಪ್ರದಾಯ ಪಾಲಿಸಲಾಗುತ್ತಿದೆ.ಬ್ಯಾಂಡು ವಾದ್ಯದ ನಡುವೆ ಊರಿನ ಗಣ್ಯರು ಸಕಲ ಗೌರವಗಳನ್ನು ಹೊತ್ತು ಪೊಲೀಸ್ ಠಾಣೆಗೆ ಬರುತ್ತಾರೆ. ಇದೇನು ಅಂತಿಂಥಾ ಮರ್ಯಾದೆಯಲ್ಲ, ರಾಜಮರ್ಯಾದೆ. ಉತ್ಸವದ ದಿನ ರಥ ಎಳೆಯುವ ಮುನ್ನ ದೇವಾಲಯದ ಆಡಳಿತ ವರ್ಗ, ಅರ್ಚಕರು ಗ್ರಾಮದ ಪೊಲೀಸ್ ಠಾಣೆಗೆ ಬರುತ್ತಾರೆ. ಅಲ್ಲಿನ ಪೊಲೀಸ್ ಅಧಿಕಾರಿಗಳಿಗೆ ಫಲಪುಷ್ಪ ನೀಡಿ ಉತ್ಸವಕ್ಕೆ ಬರುವಂತೆ ಆಹ್ವಾನ ನೀಡುತ್ತಾರೆ. ಬಳಿಕ ಮೆರವಣಿಗೆಯಲ್ಲಿ ಪೊಲೀಸ್ ಅಧಿಕಾರಿಗಳನ್ನು ದೇವಾಲಯಕ್ಕೆ ಕರೆದೊಯ್ಯುತ್ತಾರೆ. ಪೊಲೀಸರು ಬಂದ ಬಳಿಕವೇ ತೆಂಗಿನಕಾಯಿ ಒಡೆದು ಉತ್ಸವ ಆರಂಭವಾಗುತ್ತೆ. 

UDUPI ಹಿಜಾಬ್ ಹೋರಾಟಗಾರ್ತಿಯರು ಎರಡನೇ ದಿನ ಪಿಯುಸಿ ಪರೀಕ್ಷೆಗೆ ಬರಲೇ ಇಲ್ಲ!

ಹೆಚ್ಚಾಗಿ ಜಾತ್ರೆ ಅಂದ್ರೆ ಪೊಲೀಸರಿಗೆ ಕಾವಲು ಕಾಯೋ ಕೆಲಸ ಫಿಕ್ಸ್. ಆದ್ರೆ ಬ್ರಹ್ಮಾವರದಲ್ಲಿ ಮಾತ್ರ ಹಾಗಿಲ್ಲ. ಈ ಸಂಪ್ರದಾಯ ಎಂದು ಆರಂಭವಾಯ್ತೋ ಗೊತ್ತಿಲ್ಲ. ಆದರೆ ಪೊಲೀಸರಿಗೆ ಗೌರವ ನೀಡುವ ಮೂಲಕ ಕಾನೂನಿಗೆ ಗೌರವ ನೀಡುವ ಈ ಸಂಪ್ರದಾಯ ಬೇರೆಲ್ಲೂ ಕಾಣಸಿಗಲ್ಲ. ಏಳೆಂಟು ಗ್ರಾಮಗಳಿಗೆ ಈ ಮಹಾಲಿಂಗೇಶ್ವರ ದೇವರು ಒಡೆಯ. ದೇವರ ಉತ್ಸವ ಅಂದ್ರೆ ಸಾವಿರಾರು ಜನರು ಸೇರುತ್ತಿದ್ದ ಕಾಲದಲ್ಲಿ, ರಕ್ಷಣೆ ಕೊಟ್ಟು ಉತ್ಸವ ನಡೆಸಿದ ಪೊಲೀಸರಿಗೆ ಗೌರವ ನೀಡುವ ಸಲುವಾಗಿ ಈ ಕ್ರಮ ಬೆಳೆದುಬಂದಿರಬಹುದು. ಇಂದಿಗೂ ಈ ಪದ್ಧತಿಯನ್ನು ಸಂಪ್ರದಾಯದಂತೆ ಪಾಲಿಸಲಾಗುತ್ತೆ.

ಜಗತ್ತು ರಕ್ಷಿಸುವ ದೇವರ ಜಾತ್ರೆಯಲ್ಲಿ ಮಾನವರಿಗೆ ರಕ್ಷಣೆ ನೀಡುವ ಆರಕ್ಷಕರಿಗೆ ನೀಡುವ ಈ ಆತಿಥ್ಯ ನಿಜಕ್ಕೂ ಇಂಟರೆಸ್ಟಿಂಗ್ ಅಲ್ವಾ! ಗ್ರಾಮದ ನೆಮ್ಮದಿಗೆ ಹಗಲಿರುಳು ದುಡಿಯುವ ಪೊಲೀಸರಿಗೂ ಇದರಿಂದ ಏನೋ ಒಂದು ಸಾರ್ಥಕ ಅನುಭವ.

ಉನ್ನತ ವ್ಯಾಸಂಗ ಪಾಕ್‌ ನಲ್ಲಿ ಪಡೆಯದಂತೆ UGC and AICTE ಸೂಚನೆ

Udupi ಹಿಜಾಬ್ ಹೋರಾಟಗಾರ್ತಿಯರು ಎರಡನೇ ದಿನ ಪಿಯುಸಿ ಪರೀಕ್ಷೆಗೆ ಬರಲೇ ಇಲ್ಲ!: ಹಿಜಾಬ್ ಹೋರಾಟಗಾರ್ತಿಯರು 2ನೇದಿನದ ಪಿಯುಸಿ ಪರೀಕ್ಷೆ ಬರೆಯಲು ಬರಲೇ ಇಲ್ಲ. ಮೊದಲನೇ ದಿನದ ಹೈಡ್ರಾಮಾಗಳ ನಂತರ, ಎರಡನೇ ದಿನವೂ ಅದು ಮುಂದುವರಿಯಬಹುದು ಎಂಬ ಲೆಕ್ಕಾಚಾರ ತಲೆಕೆಳಗಾಗಿದೆ. ಶಾಸಕ ರಘುಪತಿ ಭಟ್ ಕೊಟ್ಟ ಎಚ್ಚರಿಕೆಗೆ, ಹುಡುಗಿಯರ ರೋಷಾವೇಷ ಸ್ವಲ್ಪಮಟ್ಟಿಗೆ ತಣ್ಣಗಾದಂತೆ ಕಂಡುಬರುತ್ತಿದೆ.

ಇಂದು 2ನೇದಿನದ ಪಿಯುಸಿ ಪರೀಕ್ಷೆ ನಡೆಯಿತು. ಉಡುಪಿಯ ಸರಕಾರಿ ಪದವಿಪೂರ್ವ ಕಾಲೇಜಿನ ಹಿಜಾಬ್ ಹೋರಾಟಗಾರ್ತಿಯರ ಪೈಕಿ ಮೂವರು ಇಂದು ಪರೀಕ್ಷೆ ಬರೆಯಬೇಕಾಗಿತ್ತು. ವಿಜ್ಞಾನ ವಿಭಾಗದ ಅಲ್ಮಾಸ್, ಹಝ್ರಾ ಶಿಫಾ, ಆಯಿಷಾ ಈ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದ ವಿದ್ಯಾರ್ಥಿನಿಯರು. ಹೈಕೋರ್ಟ್ ಮೊರೆ ಹೋದವರು ಪೈಕಿ ಈ ಮೂವರು ಕೂಡ ಸೇರಿದ್ದರು. ಇವರೆಲ್ಲರಿಗೂ ಇಂದು ಗಣಿತ ಪರೀಕ್ಷೆ ನಿಗದಿಯಾಗಿತ್ತು.

ನಿನ್ನೆ ಸಂಜೆ ವೇಳೆಗೆ ಸರಕಾರಿ ಪದವಿಪೂರ್ವ ಹೆಮ್ಮಕ್ಕಳ ಕಾಲೇಜಿಗೆ ಬಂದಿದ್ದ ಅಲ್ಮಾಸ್, ಹಾಲ್ ಟಿಕೆಟ್ ಪಡೆದು ಹೋಗಿದ್ದರು. ಹಾಗಾಗಿ ಗಣಿತ ಪರೀಕ್ಷೆಯನ್ನು ಖಂಡಿತವಾಗಿಯೂ ಈಕೆ ಬರೆಯಲು ಬರುತ್ತಾರೆ ಎಂಬ ನಿರೀಕ್ಷೆಯಿತ್ತು. ಆದರೆ ಈಕೆಯ ಜೊತೆ ಹೋರಾಟಗಾರ್ತಿಯರಾದ ಹಝ್ರಾ ಶಿಫಾ ಮತ್ತು ಆಯಿಷಾ ಹಾಲ್ ಟಿಕೆಟ್ ಪಡೆದುಕೊಳ್ಳಲೇ ಇಲ್ಲ. ಶನಿವಾರ 10:45 ರವರೆಗೆ ಹಾಲ್ ಟಿಕೆಟ್ ಪಡೆಯುವುದಕ್ಕೆ ಅವಕಾಶ ಇತ್ತು. ಇವರು ಮತ್ತೆ ಬಂದು ಹಾಲ್ ಟಿಕೆಟ್ ಪಡೆದು ಹೈಡ್ರಾಮಾ ಮಾಡಬಹುದು ಎಂಬ ನಿರೀಕ್ಷೆಯಿತ್ತು. ಆದರೆ ಈ ನಿರೀಕ್ಷೆ ಸುಳ್ಳಾಗಿದೆ. ಮೂವರ ಪೈಕಿ ಇಬ್ಬರು ಹಾಲ್ ಟಿಕೇಟ್ ಪಡೆಯದಿದ್ದರೆ, ಪಡೆದ ಅಲ್ಮಾಸ್ ಕೂಡಾ ಪರೀಕ್ಷಾ ಕೇಂದ್ರಕ್ಕೆ ಬರಲಿಲ್ಲ.

PREV
Read more Articles on
click me!

Recommended Stories

ಈ 4 ರಾಶಿಯವರಲ್ಲಿ ಒಳ್ಳೆಯದಕ್ಕಿಂತ ಕೆಟ್ಟ ಗುಣಗಳೇ ಹೆಚ್ಚು, ದ್ವೇಷ ಸಾಧಿಸೋದ್ರಲ್ಲಿ ನಿಸ್ಸೀಮರು
ಹೊಸ ವರ್ಷದಲ್ಲಿ 3 ರಾಜಯೋಗ, 3 ರಾಶಿಗೆ ಬಹಳಷ್ಟು ಹಣ