ಕ್ರೋಧಿನಾಮ ಸಂವತ್ಸರದಲ್ಲಿ ಪಂಚ ಭೂತಗಳ ಉಪಟಳ; ಇಬ್ಬರು ಪ್ರಧಾನಿಗಳ ಸಾವಿನ ಭವಿಷ್ಯ ನುಡಿದ ಕೋಡಿಶ್ರೀ

Published : Jun 25, 2024, 09:19 PM ISTUpdated : Jun 25, 2024, 09:29 PM IST
ಕ್ರೋಧಿನಾಮ ಸಂವತ್ಸರದಲ್ಲಿ ಪಂಚ ಭೂತಗಳ ಉಪಟಳ; ಇಬ್ಬರು ಪ್ರಧಾನಿಗಳ ಸಾವಿನ ಭವಿಷ್ಯ ನುಡಿದ ಕೋಡಿಶ್ರೀ

ಸಾರಾಂಶ

ಕ್ರೋಧಿನಾಮ ಸಂವತ್ಸರದಲ್ಲಿ ಪಂಚ ಭೂತಗಳಾದ ಭೂಮಿ, ಆಕಾಶ, ನೀರು, ವಾಯು, ಬೆಂಕಿಯಿಂದ ಭಾರೀ ತೊಂದರೆ ಉಂಟಾಗಲಿದೆ ಎಂದು ಕೋಡಿಮಠದ ಡಾ. ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ.

ಧಾರವಾಡ (ಜೂ.25): ಭಾರತೀಯ ಪರಂಪರೆಯ ಪ್ರಕಾರ ಪ್ರಸ್ತುತ ನಾವು ಕ್ರೋಧಿನಾಮ ಸಂವತ್ಸರದಲ್ಲಿದ್ದು, ಪಂಚ ಭೂತಗಳಾದ ಭೂಮಿ, ಆಕಾಶ, ನೀರು, ವಾಯು, ಬೆಂಕಿಯಿಂದ ಭಾರೀ ತೊಂದರೆ ಉಂಟಾಗಲಿದೆ ಎಂದು ಕೋಡಿಮಠದ ಡಾ. ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ.

ಧಾರವಾಡದಲ್ಲಿ ಮಂಗಳವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಭಾರತೀಯ ಪರಂಪರೆಯಲ್ಲಿ ಜನರಿಗೆ ದೇವರು, ಧರ್ಮ, ಭವಿಷ್ಯ, ದಿನ, ಕಾಲ, ಪಂಚಾಂಗದ ಮಹತ್ವವಿದೆ. ಇದು ಭಾರತೀಯ ಪದ್ದತಿಯಲ್ಲಿ ಕ್ರೋಧಿನಾಮ ಸಂವತ್ಸರವಾಗಿದೆ. ಇದು ಒಳಿತಿಗಿಂತ ಕೆಡುಕನ್ನು ಹೆಚ್ಚು ಮಾಡುತ್ತದೆ. ಭೂಮಿ, ಆಕಾಶ, ನೀರು, ವಾಯು, ಬೆಂಕಿ ಸೇರಿ ಐದು ಪಂಚಭೂತಗಳಿಂದ ತೊಂದರೆಯಿದೆ. ಇದನ್ನು ನಾನು ಆಕಾಶತತ್ವ ಎಂದು ಕರೆಯುತ್ತಾರೆ. ಶ್ರಾವಣದಲ್ಲಿ ಆಕಾಶ ತತ್ವದ ಬಗ್ಗೆ ಹೇಳುತ್ತೇನೆ. ಈ ಸಂವತ್ಸರದಲ್ಲಿ ಸುರಿದಲ್ಲಿಯೇ ಮಳೆ ಸುರಿಯುತ್ತದೆ. ಬೆಳೆ ಬಂದರೆ ಬಂತು ಇಲ್ಲವೆಂದರೆ ಇಲ್ಲ. ಈಗ ಜಲಪ್ರಳಯ ಆಗಲಿದೆ. ಭೂ ಕುಸಿತ ಆಗಲಿದೆ. ವಾಯುನಿಂದಲೂ ವಿಪರೀತ ತೊಂದರೆಯಿದೆ. ಆದರೂ, ನಮ್ಮ ನಾಡಿಗೆ ಈ ಬಾರಿ ಸುಭೀಕ್ಷೆಯಿದೆ ಎಂದರು.

ನಟ ದರ್ಶನ್ ಕೋಪ ಮತ್ತು ಉಮಾಪತಿ ಗೌಡ ತಾಳ್ಮೆ, ಭವಿಷ್ಯ ನುಡಿದ ಕೋಡಿಶ್ರೀ

ರಾಜಕಾರಣದಲ್ಲಿ ನಾನು ಹೇಳಿದಂತೆ ಅತಂತ್ರದಿಂದಲೇ ಕೂಡಿದೆ. ಶ್ರಾವಣದಲ್ಲಿ ನಾನು ಈ ಬಗ್ಗೆ ರಾಜಕೀಯದ ಬಗ್ಗೆ ನುಡಿಯುತ್ತೇನೆ. ಅಶುಭವನ್ನು ಈಗಲೇ ನುಡಿಯಬಾರದು. ಮಹಾಭಾರದಲ್ಲಿ ಅಭಿಮನ್ಯುವಿನ ಬಿಲ್ಲಿನ ದಾರವನ್ನು ಕರ್ಣನ ಕೈಯಿಂದ ಕತ್ತರಿಸುತ್ತಾರೆ. ಆದರೆ, ಈಗ ಅಭಿಮನ್ಯುವಿನ ಹೆಂಡತಿ ಪಾರ್ಲಿಮೆಂಟಿಗೆ ಪ್ರವೇಶ ಮಾಡುತ್ತಾಳೆ. ಆದರೆ, ಈಗ ಪಾರ್ಲಿಮೆಂಟಿನಲ್ಲಿ ಧುರ್ಯೋಧನನ ತೊಡೆ ಮುರಿಸಿದ ಕೃಷ್ಣ ಇಲ್ಲಿಲ್ಲ. ಆದ್ದರಿಂದ ಧುರ್ಯೋಧನನೇ ಗೆಲ್ಲುತ್ತಾನೆ ಎಂದು ಮಾಹಿತಿ ನೀಡಿದರು.

Kodishree prediction: ಕೋಡಿಶ್ರೀ ಭವಿಷ್ಯ ನಿಜವಾಯ್ತಾ..? 2024ಕ್ಕೆ ತಪ್ಪಿದ್ದಲ್ಲ ಆಪತ್ತು..!

ರಾಜ್ಯದಲ್ಲಿ ದೊಡ್ಡವರಿಗೆ ಎದುರಾದ ಸಂಕಷ್ಟ: ನಾನು 4 ತಿಂಗಳ ಮೊದಲೇ ಹೇಳಿದಂತೆ ವಿದೇಶದಲ್ಲಿ ಭೀಕರ ಮಳೆಯಾಗ್ತದೆ, ಇಬ್ಬರು ಪ್ರಧಾನಿಗಳು ಸಾಯುತ್ತಾರೆ, ಸಾವು ನೋವುಗಳು ಸಂಭವಿಸುತ್ತವೆ, ದೊಡ್ಡ ದೊಡ್ಡವರಿಗೆ ಭಾರಿ ದುಃಖ, ನೋವು, ತಾಪಎದುರಾಗುತ್ತದೆ ಎಂದು ಹೇಳಿದ್ದೆನು. ಅದೇ ರೀತಿ ಆಗಿದೆ. ಈಗ ರಾಜ್ಯದಲ್ಲಿಯೂ ದೊಡ್ಡವರಿಗೆ ಕಷ್ಟ ಅನುಭವಿಸುವ ರೀತಿ ಪ್ರಕರಣಗಳು ನಡೆಯುತ್ತಿವೆ. ಕರೆಯದೇ ಬರುವವನು ಕೋಪ, ಬರೆಯದೇ ಹೋದವನು ಕಣ್ಣು, ಬರಿಗಾಲಲ್ಲಿ ನಡೆಯುವವನು ಮನಸ್ಸು ಈ ಮೂರದ್ದೂ ನಿಯತ್ತು ಇಟ್ಟುಕೊಂಡವರಿಗೆ ಯಾವ ಸಮಸ್ಯೆಯೂ ಬರುವುದಿಲ್ಲ. ಆದರೆ, ದುಡ್ಡು, ಅಧಿಕಾರ ಮುಖ್ಯವೆಂದು ಹೊರಟವರು ಅಧಃಪತನ ಕಾಣುತ್ತಿದ್ದಾರೆ.

PREV
Read more Articles on
click me!

Recommended Stories

ಈ 4 ರಾಶಿಯವರಲ್ಲಿ ಒಳ್ಳೆಯದಕ್ಕಿಂತ ಕೆಟ್ಟ ಗುಣಗಳೇ ಹೆಚ್ಚು, ದ್ವೇಷ ಸಾಧಿಸೋದ್ರಲ್ಲಿ ನಿಸ್ಸೀಮರು
ಹೊಸ ವರ್ಷದಲ್ಲಿ 3 ರಾಜಯೋಗ, 3 ರಾಶಿಗೆ ಬಹಳಷ್ಟು ಹಣ