ತಿರುಪತಿಯಲ್ಲಿ ಭಾರಿ ಭದ್ರತಾ ಲೋಪ: ದೇಗುಲದ ವಿಡಿಯೋ ವೈರಲ್‌

Published : May 10, 2023, 07:00 AM IST
ತಿರುಪತಿಯಲ್ಲಿ ಭಾರಿ ಭದ್ರತಾ ಲೋಪ: ದೇಗುಲದ ವಿಡಿಯೋ ವೈರಲ್‌

ಸಾರಾಂಶ

ವಿಶ್ವವಿಖ್ಯಾತ ತಿರುಪತಿ ವೆಂಕಟೇಶ್ವರ ದೇವಸ್ಥಾನದಲ್ಲಿ ಭಾರಿ ಭದ್ರತಾ ವೈಫಲ್ಯ (security lapse) ಉಂಟಾಗಿದ್ದು ನಿಷೇಧದ ಹೊರತಾಗಿಯೂ ದೇವಸ್ಥಾನದ ಒಳಗೆ ಮೊಬೈಲ್‌ ತೆಗೆದುಕೊಂಡು ಹೋದ ಭಕ್ತನೊಬ್ಬ ದೇಗುಲದ ಗೋಪುರ ಹಾಗೂ ಇತರ ಭಾಗಗಳನ್ನು ಚಿತ್ರೀಕರಿಸಿದ್ದಾನೆ.

ತಿರುಪತಿ: ವಿಶ್ವವಿಖ್ಯಾತ ತಿರುಪತಿ ವೆಂಕಟೇಶ್ವರ ದೇವಸ್ಥಾನದಲ್ಲಿ ಭಾರಿ ಭದ್ರತಾ ವೈಫಲ್ಯ (security lapse) ಉಂಟಾಗಿದ್ದು ನಿಷೇಧದ ಹೊರತಾಗಿಯೂ ದೇವಸ್ಥಾನದ ಒಳಗೆ ಮೊಬೈಲ್‌ ತೆಗೆದುಕೊಂಡು ಹೋದ ಭಕ್ತನೊಬ್ಬ ದೇಗುಲದ ಗೋಪುರ ಹಾಗೂ ಇತರ ಭಾಗಗಳನ್ನು ಚಿತ್ರೀಕರಿಸಿದ್ದಾನೆ. ಸಾಮಾಜಿಕ ಜಾಲತಾಣದಲ್ಲಿ ಈ ವಿಡಿಯೋ ವೈರಲ್‌ ಆದ ಬಳಿಕ ಕೃತ್ಯ ಬೆಳಕಿಗೆ ಬಂದಿದೆ.

ಚಿನ್ನದ ಲೇಪಿತ ಆನಂದ ನಿಲಯಂ (ಗೋಪುರ) (Ananda Nilayam) ಹಾಗೂ ವಿಮಾನ ಪ್ರಕಾರಂ (ಗರ್ಭಗುಡಿಗೆ ಸುತ್ತಲಿನ ಭಾಗ) ಭಾಗಗಳನ್ನು ಚಿತ್ರೀಕರಿಸಲಾಗಿದೆ. ಇದರ ಬೆನ್ನಲ್ಲೇ ದೇವಸ್ಥಾನ ಮಂಡಳಿಯು ಘಟನೆ ಕುರಿತು ತನಿಖೆಗೆ ಆದೇಶಿಸಿದೆ. ಪ್ರಾಥಮಿಕ ಹಂತದಲ್ಲಿ ಭದ್ರತಾ ಲೋಪವನ್ನು ತಡೆಗಟ್ಟುವಲ್ಲಿ ವಿಫಲವಾದ ಕಾರಣ ದೇವಸ್ಥಾನದ ಭದ್ರತಾ ವಿಭಾಗವು ತನಿಖೆ ಎದುರಿಸಬೇಕಾಗುತ್ತದೆ ಎನ್ನಲಾಗಿದೆ.

ತಿರುಪತಿ ಹುಂಡಿ ಸಂಗ್ರಹದಲ್ಲಿ ತೀವ್ರ ಕುಸಿತ: ತಿಮ್ಮಪ್ಪ ದೇಗುಲಕ್ಕೆ ಹೋಗೋ ಭಕ್ತರ ಸಂಖ್ಯೆಯೇ ಕಡಿಮೆಯಾಯ್ತಾ?

ದೇವಸ್ಥಾನದ ಒಳಗೆ ಯಾವುದೇ ರೀತಿಯ ಎಲೆಕ್ಟ್ರಾನಿಕ್‌ ಸಾಧನಗಳನ್ನು(Electronic) ನಿಷೇಧಿಸಲಾಗಿದೆ. ಆದರೂ ವಿಡಿಯೋ ಚಿತ್ರೀಕರಿಸಿರುವ ಅಪರಿಚಿತ ಭಕ್ತಾದಿ, ಭದ್ರತಾ ಸಿಬ್ಬಂದಿಯನ್ನು ದಾಟಿ ಹೇಗೆ ಮೊಬೈಲ್‌ ಅಥವಾ ಕ್ಯಾಮರಾ ಕೊಂಡೊಯ್ದು ವಿಡಿಯೋ ಮಾಡಿದ್ದಾನೆ ಎಂಬುದು ದೊಡ್ಡ ಪ್ರಶ್ನೆಯಾಗಿದೆ. ಭಾನುವಾರ ತಿರುಮಲದಲ್ಲಿ ಸುರಿದ ಧಾರಾಕಾರ ಮಳೆಯಿಂದ 2 ಗಂಟೆಗಳ ಕಾಲ ವಿದ್ಯುತ್‌ ವ್ಯತ್ಯಯ ಉಂಟಾಗಿತ್ತು. ಇದೇ ವೇಳೆ ಘಟನೆ ಸಂಭವಿಸಿರಬಹುದು ಎಂದು ಅಧಿಕಾರಿಗಳು ಶಂಕಿಸಿದ್ದಾರೆ.

ಪತ್ತೆಗೆ ಕ್ರಮ:

‘ಮಾಹಿತಿ ತಂತ್ರಜ್ಞಾನ ಇಲಾಖೆಯ ನೆರವಿನೊಂದಿಗೆ ಮೊದಲು ಜಾಲತಾಣದಲ್ಲಿ ವೀಡಿಯೋ ಎಲ್ಲಿ ಮತ್ತು ಯಾರು ಅಪ್ಲೋಡ್‌ ಮಾಡಿದ್ದಾರೆ ಎಂಬುದನ್ನು ಪತ್ತೆ ಹಚ್ಚಲಾಗುವುದು. ಬಳಿಕ ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು’ ಎಂದು ಟಿಟಿಡಿಯ (TTD) ಮುಖ್ಯ ಭದ್ರತಾ ಅಧಿಕಾರಿ ಡಿ ನರಸಿಂಹ ಕಿಶೋರ್‌ (Narasimha Kishore) ತಿಳಿಸಿದ್ದಾರೆ.

ಅಲ್ಲದೇ ದೇವಾಲಯದ ಒಳಾಂಗಣ ಹಾಗೂ ಹೊರಾಂಗಣ ಭಾಗಗಳಲ್ಲಿ ಳವಡಿಸಲಾದ ಎಲ್ಲ ಸಿಸಿಟಿವಿ ದೃಶ್ಯಗಳನ್ನು ಕೂಲಂಕಷವಾಗಿ ಪರಿಶೀಲಿಸುತ್ತಿದ್ದೇವೆ ಎಂದಿದ್ದಾರೆ.

Tirupati: ವಿಐಪಿ ಬ್ರೇಕ್ ರದ್ದು, ಸಾಮಾನ್ಯ ಯಾತ್ರಾರ್ಥಿಗಳಿಗೆ ಪ್ರತಿದಿನ 15 ಗಂಟೆಗಳ ದರ್ಶನಕ್ಕೆ ನಿರ್ಧಾರ

ಕಳವಳ:

ಇನ್ನು ಭಧ್ರತಾ ವೈಫಲ್ಯದ ಕುರಿತು ಕಳವಳ ವ್ಯಕ್ತಪಡಿಸಿರುವ ಮಾಜಿ ಟಿಟಿಡಿ ಸದಸ್ಯ ಹಾಗೂ ಬಿಜೆಪಿ ನಾಯಕ ಗಿ ಭಾನು ಪ್ರಕಾಶ್‌ ರೆಡ್ಡಿ, ‘ಭದ್ರತಾ ವ್ಯವಸ್ಥೆಯನ್ನು ನವೀಕರಿಸಲು ಟಿಟಿಡಿಯು ಪ್ರತಿವರ್ಷ ಕೋಟ್ಯಂತರ ರು.ಗಳನ್ನು ವ್ಯಯಿಸುತ್ತಿದ್ದರೂ ಇಂತಹ ಘಟನೆ ನಡೆದಿರುವುದು ಆಘಾತಕಾರಿಯಾಗಿದೆ. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು’ ಎಂದಿದ್ದಾರೆ.

PREV
Read more Articles on
click me!

Recommended Stories

ಈ 4 ರಾಶಿಯವರಲ್ಲಿ ಒಳ್ಳೆಯದಕ್ಕಿಂತ ಕೆಟ್ಟ ಗುಣಗಳೇ ಹೆಚ್ಚು, ದ್ವೇಷ ಸಾಧಿಸೋದ್ರಲ್ಲಿ ನಿಸ್ಸೀಮರು
ಹೊಸ ವರ್ಷದಲ್ಲಿ 3 ರಾಜಯೋಗ, 3 ರಾಶಿಗೆ ಬಹಳಷ್ಟು ಹಣ