RCB Victory Parade: ರೋಡ್‌ಶೋ ಅಗತ್ಯವಿರಲಿಲ್ಲ, ಜೀವ ಮುಖ್ಯ : RCB ವಿಜಯೋತ್ಸವ ಬಗ್ಗೆ ಗಂಭೀರ್‌ ಟೀಕೆ

Kannadaprabha News   | Kannada Prabha
Published : Jun 06, 2025, 10:55 AM ISTUpdated : Jun 06, 2025, 11:12 AM IST
Goutham gambhir on bengaluru stampede

ಸಾರಾಂಶ

ಆರ್‌ಸಿಬಿ ಸಂಭ್ರಮಾಚರಣೆ ವೇಳೆ ನಡೆದ ಕಾಲ್ತುಳಿತದ ಬಗ್ಗೆ ಗೌತಮ್ ಗಂಭೀರ್ ಆಘಾತ ವ್ಯಕ್ತಪಡಿಸಿದ್ದಾರೆ. ಜನರ ಸುರಕ್ಷತೆಗೆ ಆದ್ಯತೆ ನೀಡಬೇಕು ಮತ್ತು ರೋಡ್‌ಶೋಗಳ ಬದಲು ಒಳಾಂಗಣ ಕ್ರೀಡಾಂಗಣಗಳಲ್ಲಿ ಸಂಭ್ರಮಾಚರಣೆಗಳನ್ನು ಆಯೋಜಿಸಬೇಕು ಎಂದು ಅವರು ಹೇಳಿದ್ದಾರೆ

ಮುಂಬೈ (ಜೂ.6): ಆರ್‌ಸಿಬಿ ಸಂಭ್ರಮಾಚರಣೆ ವೇಳೆ ನಡೆದ ಕಾಲ್ತುಳಿತಕ್ಕೆ ಭಾರತದ ಮುಖ್ಯ ಕೋಚ್‌ ಗೌತಮ್‌ ಗಂಭೀರ್‌ ಆಘಾತ ವ್ಯಕ್ತಪಡಿಸಿದ್ದಾರೆ. ಇಂತಹ ಘಟನೆ ಮುಂದೆ ಯಾವತ್ತೂ ನಡೆಯಬಾರದು ಎಂದಿದ್ದಾರೆ.

ಭಾರತ ಟೆಸ್ಟ್‌ ತಂಡದ ನೂತನ ನಾಯಕ ಶುಭ್‌ಮನ್‌ ಗಿಲ್‌ ಜೊತೆಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ನಾವು ಜವಾಬ್ದಾರಿಯುತ ಮನುಷ್ಯರಾಗಬೇಕು. ಇಂತಹ ರೋಡ್‌ಶೋಗಳ ಬಗ್ಗೆ ನನಗೆ ವಿರೋಧವಿದೆ.

ನಮಗೆ ಇಲ್ಲಿ ಜನರ ಜೀವ ಮುಖ್ಯ. ಸಂಭ್ರಮಾಚರಣೆ ನಡೆಸುವುದಿದ್ದರೆ ಒಳಾಂಗಣ ಕ್ರೀಡಾಂಗಣಗಳಲ್ಲಿ ಆಯೋಜಿಸಬೇಕು’ ಎಂದಿದ್ದಾರೆ. ಸೂಕ್ತ ಸಿದ್ಧತೆ ನಡೆಸಲು ಆಗದಿದ್ದರೆ ನಾವು ರೋಡ್‌ಶೋ ನಡೆಬಾರದು. ಪ್ರೇಕ್ಷಕರು ತುಂಬಾ ಉತ್ಸಾಹದಲ್ಲಿರುತ್ತಾರೆ. ಹೀಗಾಗಿ ಎಲ್ಲಾ ಆಯಾಮಗಳಲ್ಲೂ ನಾವು ಜವಾಬ್ದಾರಿಯುತವಾಗಿ ವರ್ತಿಸಬೇಕಾದ ಅಗತ್ಯವಿದೆ’ ಎಂದಿದ್ದಾರೆ.

PREV

ಆರೋಗ್ಯ, ಸೌಂದರ್ಯ, ಫಿಟ್‌ನೆಸ್, ಕಿಚನ್ ಟಿಪ್ಸ್‌, ಸಂಬಂಧ, ಫ್ಯಾಷನ್, ರೆಸಿಪಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಮಸಾಲೆ ಪೌಡರ್ ಮಾಡುವಾಗ ಸ್ವಲ್ವೇ ಸ್ವಲ್ಪ ಅಕ್ಕಿ ಸೇರಿಸಿ, ಅಡುಗೆ ರುಚಿ ಡಬ್ಬಲ್ ಆಗುತ್ತೆ
ನಿಂಬೆಯಿಂದ ಮೊಟ್ಟೆ ಸಿಪ್ಪೆ ತೆಗೆಯೋದು, ಎಣ್ಣೆ ರಹಿತ ಕ್ರಿಸ್ಪಿ ಪೂರಿ.. 2025ರಲ್ಲಿ ಜನ ಮೆಚ್ಚಿದ Food Hacks