ಬೆಂಗಳೂರು ಎಫ್‌ಸಿಗೆ 5-0 ಗೋಲುಗಳ ಜಯ

Kannadaprabha News   | Asianet News
Published : Apr 15, 2021, 12:58 PM IST
ಬೆಂಗಳೂರು ಎಫ್‌ಸಿಗೆ 5-0 ಗೋಲುಗಳ ಜಯ

ಸಾರಾಂಶ

2021ರ ಎಎಫ್‌ಸಿ ಕಪ್‌ ಅರ್ಹತಾ ಸುತ್ತಿನ ಪಂದ್ಯದಲ್ಲಿ ಬೆಂಗಳೂರು ಎಫ್‌ಸಿ ತಂಡವು ಭರ್ಜರಿ ಗೆಲುವು ದಾಖಲಿಸಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.

ಬ್ಯಾಂಬೋಲಿಮ್‌(ಏ.15): 2021ರ ಎಎಫ್‌ಸಿ ಕಪ್‌ ಅರ್ಹತಾ ಸುತ್ತಿನ 2ನೇ ಹಂತದ ಪಂದ್ಯದಲ್ಲಿ ಬೆಂಗಳೂರು ಎಫ್‌ಸಿ, ನೇಪಾಳದ ತ್ರಿಭುವನ್‌ ಆರ್ಮಿ ವಿರುದ್ಧ 5-0 ಗೋಲುಗಳ ಜಯ ಸಾಧಿಸಿದೆ. 

ಬುಧವಾರ ನಡೆದ ಪಂದ್ಯದ ಮೊದಲಾರ್ಧ ಯಾವುದೇ ಗೋಲು ದಾಖಲಾಗಿರಲಿಲ್ಲ. ಆದರೆ ರಾಹುಲ್‌ ಭೇಕೆ (51ನೇ ನಿ., 65ನೇ ನಿ,.), ಸುನಿಲ್‌ ಚೆಟ್ರಿ (52ನೇ ನಿ.,) ಹಾಗೂ ಕ್ಲೀಟನ್‌ ಸಿಲ್ವಾ (61, 65ನೇ ನಿ.,) ಗೋಲು ಬಾರಿಸಿ ಗೆಲುವು ತಂದುಕೊಟ್ಟರು. ಮುಂದಿನ ಪಂದ್ಯದಲ್ಲಿ ಬಿಎಫ್‌ಸಿ ಬಾಂಗ್ಲಾ ಇಲ್ಲವೇ ಮಾಲ್ಡೀವ್ಸ್‌ನ  ತಂಡವನ್ನು ಎದುರಿಸಲಿದೆ.

ಬೆಂಗಳೂರು ಸಾಯ್‌ನಲ್ಲಿ 5 ಅಥ್ಲೀಟ್‌ಗಳಿಗೆ ಸೋಂಕು!

ಬೆಂಗಳೂರು: ಟೋಕಿಯೋ ಒಲಿಂಪಿಕ್ಸ್‌ಗೆ ಸಿದ್ಧತೆ ನಡೆಸುತ್ತಿರುವ 20 ಕಿ.ಮೀ. ನಡಿಗೆ ಸ್ಪರ್ಧಿ ಪ್ರಿಯಾಂಕ ಗೋಸ್ವಾಮಿ, 1500 ಮೀ. ಓಟದಲ್ಲಿ ಏಷ್ಯನ್‌ ಚಾಂಪಿಯನ್‌ ಜಿನ್ಸನ್‌ ಜಾನ್ಸನ್‌ ಸೇರಿ ಇಲ್ಲಿ ಅಭ್ಯಾಸ ನಡೆಸುತ್ತಿರುವ ಐವರು ಅಥ್ಲೀಟ್‌ಗಳಿಗೆ ಕೊರೋನಾ ಸೋಂಕು ತಗುಲಿದೆ. 

ಈ ಪೈಕಿ ಸ್ಟೀಪಲ್‌ ಚೇಸ್‌ ಪಟು ಚಿಂತಾ ಯಾದವ್‌, ನಡಿಗೆ ಸ್ಪರ್ಧೆಯ ಕೋಚ್‌ ಅಲೆಕ್ಸಾಂಡರ್‌ ಸಹ ಇದ್ದಾರೆ. ಸೋಂಕಿತರನ್ನು ಕ್ವಾರಂಟೈನ್‌ನಲ್ಲಿ ಇರಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಯಾರಿಗೂ ದೊಡ್ಡ ಪ್ರಮಾಣದಲ್ಲಿ ಸೋಂಕಿನ ಲಕ್ಷಣಗಳಿಲ್ಲ ಎಂದು ಮೂಲಗಳು ತಿಳಿಸಿವೆ.
 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

2026ರ FIFA ವಿಶ್ವಕಪ್ ವೇಳಾಪಟ್ಟಿ ಪ್ರಕಟ! ಇಲ್ಲಿದೆ ಕಂಪ್ಲೀಟ್ ಡೀಟೈಲ್ಸ್
ಕ್ರಿಸ್ಟಿಯಾನೋ ರೊನಾಲ್ಡ್ ಭಾರತ ಭೇಟಿ ರದ್ದು: ತೆರೆಮರೆಯ ಹಿಂದಿನ ನಿಜವಾದ ಕಾರಣವೇನು?