ಬೆಂಗ್ಳೂರಲ್ಲಿ ಸ್ಯಾಫ್‌ ಕಪ್‌ ಫುಟ್ಬಾಲ್‌ ಟೂರ್ನಿ! ಮೊದಲ ಬಾರಿ ಬೆಂಗಳೂರು ಆತಿಥ್ಯ

Published : Mar 20, 2023, 09:01 AM IST
ಬೆಂಗ್ಳೂರಲ್ಲಿ ಸ್ಯಾಫ್‌ ಕಪ್‌ ಫುಟ್ಬಾಲ್‌ ಟೂರ್ನಿ! ಮೊದಲ ಬಾರಿ ಬೆಂಗಳೂರು ಆತಿಥ್ಯ

ಸಾರಾಂಶ

ಸ್ಯಾಫ್‌ ಕಪ್ ಫುಟ್ಬಾಲ್ ಟೂರ್ನಿಗೆ ಬೆಂಗಳೂರು ಆತಿಥ್ಯ 4ನೇ ಬಾರಿಗೆ ಭಾರತ ಆತಿಥ್ಯ, ಬೆಂಗಳೂರಲ್ಲಿ ಇದೇ ಮೊದಲು ಜೂನ್ 20ರಿಂದ ಜುಲೈ 03ರ ವರೆಗೆ ನಡೆಯಲಿದೆ ಟೂರ್ನಿ

ಬೆಂಗಳೂರು(ಮಾ.20): ದಕ್ಷಿಣ ಏಷ್ಯಾ ಫುಟ್ಬಾಲ್‌ ಫೆಡರೇಷನ್‌(ಸ್ಯಾಫ್‌)ನ 14ನೇ ಆವೃತ್ತಿಯ ಚಾಂಪಿಯನ್‌ಶಿಪ್‌ಗೆ ಬೆಂಗಳೂರು ಆತಿಥ್ಯ ವಹಿಸಲಿದೆ. ಭಾನುವಾರ ಇಲ್ಲಿನ ಕರ್ನಾಟಕ ಒಲಿಂಪಿಕ್‌ ಸಂಸ್ಥೆ(ಕೆಒಎ) ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಅಖಿಲ ಭಾರತೀಯ ಫುಟ್ಬಾಲ್‌ ಫೆಡರೇಷನ್‌(ಎಐಎಫ್‌ಎಫ್‌) ಅಧ್ಯಕ್ಷ ಕಲ್ಯಾಣ್‌ ಚೌಬೆ ಈ ವಿಷಯವನ್ನು ತಿಳಿಸಿದರು.

ಭಾರತ 4ನೇ ಬಾರಿಗೆ ಪಂದ್ಯಾವಳಿಗೆ ಆತಿಥ್ಯ ವಹಿಸುತ್ತಿದ್ದು, ಬೆಂಗಳೂರಲ್ಲಿ ಮೊದಲ ಬಾರಿಗೆ ಟೂರ್ನಿ ನಡೆಯಲಿದೆ. ಈ ಹಿಂದೆ 1999ರಲ್ಲಿ ಗೋವಾ, 2011ರಲ್ಲಿ ನವದೆಹಲಿ, 2015ರಲ್ಲಿ ತಿರುವನಂತಪುರಂ ನಗರಗಳು ಆತಿಥ್ಯ ವಹಿಸಿದ್ದವು.

ಟೂರ್ನಿಯಲ್ಲಿ ಭಾರತ, ಶ್ರೀಲಂಕಾ, ನೇಪಾಳ ಸೇರಿ ಒಟ್ಟು 6 ತಂಡಗಳು ಪಾಲ್ಗೊಳ್ಳುವ ನಿರೀಕ್ಷೆ ಇದೆ. ಕಂಠೀರವ ಕ್ರೀಡಾಂಗಣದಲ್ಲಿ ಪಂದ್ಯಗಳು ನಡೆಯಲಿವೆ. ತಲಾ 3 ತಂಡಗಳನ್ನು 2 ಗುಂಪುಗಳನ್ನಾಗಿ ವಿಂಗಡಿಸಿ, ರೌಂಡ್‌ ರಾಬಿನ್‌ ಮಾದರಿಯಲ್ಲಿ ಪಂದ್ಯಗಳನ್ನು ನಡೆಸಲಾಗುತ್ತದೆ. ಗುಂಪಿನಲ್ಲಿ ಅಗ್ರ 2 ಸ್ಥಾನ ಪಡೆಯುವ ತಂಡಗಳು ಸೆಮೀಸ್‌ಗೇರಲಿವೆ. ಪಂದ್ಯಾವಳಿಯ ವೇಳಾಪಟ್ಟಿಯನ್ನು ಸದ್ಯದಲ್ಲೇ ಪ್ರಕಟಿಸುವುದಾಗಿ ಚೌಬೆ ಹೇಳಿದ್ದಾರೆ. ಭಾರತ 8 ಬಾರಿ ಚಾಂಪಿಯನ್‌ ಆಗಿದ್ದು, ಮಾಲ್ಡೀವ್‌್ಸ 2, ಬಾಂಗ್ಲಾ, ಆಫ್ಘನ್‌, ಶ್ರೀಲಂಕಾ ತಲಾ ಒಮ್ಮೆ ಪ್ರಶಸ್ತಿ ಜಯಿಸಿವೆ.

Indian Wells Open: 43ರ ಟೆನಿಸಿಗ ರೋಹನ್ ಬೋಪಣ್ಣ ವಿಶ್ವದಾಖಲೆ..!

ಬೆಂಗಳೂರಿಗೆ ಆತಿಥ್ಯ ಅವಕಾಶ ಸಿಕ್ಕಿರುವ ಬಗ್ಗೆ ಪ್ರತಿಕ್ರಿಯಿಸಿದ ಕೆಒಎ ಅಧ್ಯಕ್ಷ ಡಾ.ಕೆ.ಗೋವಿಂದರಾಜು, ‘ಸ್ಯಾಫ್‌ ಕಪ್‌ಗೆ ಬೆಂಗಳೂರು ಆತಿಥ್ಯ ವಹಿಸುವ ವಿಷಯ ಬಹಳ ಖುಷಿ ನೀಡಿದೆ. ಈ ಟೂರ್ನಿಯು ದೊಡ್ಡ ಮಟ್ಟದ ಯಶಸ್ಸು ಕಾಣಲಿದೆ ಎನ್ನುವ ನಂಬಿಕೆ ಇದೆ’ ಎಂದರು.

ಒಲಿಂಪಿಕ್ಸ್‌ಗೆ ಅರ್ಹತೆ ಪಡೆದ ವಿಕಾಸ್‌, ಪರಂ

ನೊಮಿ(ಜಪಾನ್‌): 20 ಕಿ.ಮೀ. ವೇಗದ ನಡಿಗೆ ಸ್ಪರ್ಧೆಯಲ್ಲಿ ಭಾರತದ ವಿಕಾಸ್‌ ಸಿಂಗ್‌ ಹಾಗೂ ಪರಂಜೀತ್‌ ಸಿಂಗ್‌ 2024ರ ಪ್ಯಾರಿಸ್‌ ಒಲಿಂಪಿಕ್ಸ್‌ ಹಾಗೂ 2023ರ ವಿಶ್ವ ಚಾಂಪಿಯನ್‌ಶಿಪ್‌ಗೆ ಅರ್ಹತೆ ಪಡೆದಿದ್ದಾರೆ. ಭಾನುವಾರ ಇಲ್ಲಿ ನಡೆದ ಏಷ್ಯನ್‌ 20 ಕಿ.ಮೀ. ವೇಗದ ನಡಿಗೆ ಚಾಂಪಿಯನ್‌ಶಿಪ್‌ನಲ್ಲಿ ಕ್ರಮವಾಗಿ 1 ಗಂಟೆ 20.05 ನಿಮಿಷ, 1 ಗಂಟೆ 20.08 ನಿಮಿಷಗಳಲ್ಲಿ ಗುರಿ ತಲುಪಿದರು. ವಿಕಾಸ್‌ 2ನೇ, ಪರಂಜೀತ್‌ 3ನೇ ಸ್ಥಾನ ಗಳಿಸಿದರು. 

ಒಲಿಂಪಿಕ್ಸ್‌ ಹಾಗೂ ಈ ವರ್ಷ ಆಗಸ್ಟ್‌ನಲ್ಲಿ ಹಂಗೇರಿಯ ಬುಡಾಪೆಸ್ಟ್‌ನಲ್ಲಿ ನಡೆಯಲಿರುವ ವಿಶ್ವ ಚಾಂಪಿಯನ್‌ಶಿಪ್‌ಗೆ ಅರ್ಹತೆ ಪಡೆಯಲು 1 ಗಂಟೆ 20.10 ನಿಮಿಷಗಳಲ್ಲಿ ಗುರಿ ನಿಗದಿಪಡಿಸಲಾಗಿತ್ತು. ಕಳೆದ ತಿಂಗಳು ರಾಷ್ಟ್ರೀಯ ಚಾಂಪಿಯನ್‌ಶಿಪ್‌ ಗೆಲ್ಲುವ ಮೂಲಕ ಆಕ್ಷ್‌ದೀಪ್‌ ಸಿಂಗ್‌ ಸಹ ಅರ್ಹತೆ ಪಡೆದಿದ್ದರು. ಈ ಮೂವರು ಭಾರತೀಯ ನೌಕಾ ಪಡೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

2026ರ FIFA ವಿಶ್ವಕಪ್ ವೇಳಾಪಟ್ಟಿ ಪ್ರಕಟ! ಇಲ್ಲಿದೆ ಕಂಪ್ಲೀಟ್ ಡೀಟೈಲ್ಸ್
ಕ್ರಿಸ್ಟಿಯಾನೋ ರೊನಾಲ್ಡ್ ಭಾರತ ಭೇಟಿ ರದ್ದು: ತೆರೆಮರೆಯ ಹಿಂದಿನ ನಿಜವಾದ ಕಾರಣವೇನು?