ತವರಿನಲ್ಲಿ ತಿರುಗೇಟು ನೀಡಲು ಬೆಂಗಳೂರು FC ರೆಡಿ!

Suvarna News   | Asianet News
Published : Feb 21, 2020, 08:38 PM IST
ತವರಿನಲ್ಲಿ ತಿರುಗೇಟು ನೀಡಲು ಬೆಂಗಳೂರು FC ರೆಡಿ!

ಸಾರಾಂಶ

ಕಂಠೀರವ ಕ್ರೀಡಾಂಗಣದಲ್ಲಿ ಫೆ.22(ಶನಿವಾರ) ಸಂಜೆ ನಡೆಯಲಿರುವ ಇಂಡಿಯನ್ ಸೂಪರ್ ಲೀಗ್ ಪಂದ್ಯದಲ್ಲಿ ಆತಥೆೇಯ ಬೆಂಗಳೂರು ಹಾಗೂ  ಎಟಿಕೆ ತಂಡ  ಮುಖಾಮುಖಿಯಾಗುತ್ತಿದೆ. ಈ ಪಂದ್ಯ ಇದೀಗ ತೀವ್ರ ಕುತೂಹಲಕ್ಕೆ ಕಾರಣವಾಗಿದೆ.    

ಬೆಂಗಳೂರು(ಫೆ.21): ಬಲಿಷ್ಠ ತಂಡಗಳ ಹೋರಾಟಕ್ಕೆ ಉದ್ಯಾನ ನಗರಿ ಸಜ್ಜಾಗಿದೆ. ಹಾಲಿ ಚಾಂಪಿಯನ್ ಬೆಂಗಳೂರು ಎಫ್‌ಸಿ ಹಾಗೂ ಮಾಜಿ ಚಾಂಪಿಯನ್ ಎಟಿಕೆ ನಡುವಿನ ಹೋರಾಟ ತೀವ್ರ ಕುತೂಹಲಕ್ಕೆ ಕಾರಣವಾಗಿದೆ.  ಕಾರಣ  ಡೆಸೆಂಬರ್ ನಲ್ಲಿ ನಡೆದ ಪಂದ್ಯದಲ್ಲಿ ಎಟಿಕೆ ತಂಡ ಪಂದ್ಯದ ಆರಂಭದಿಂದ ಅಂತ್ಯದ ವರೆಗೂ ಪ್ರಭುತ್ವ ಸಾಧಿಸಿ 1-0 ಅಂತರದಲ್ಲಿ ಜಯ ಗಳಿಸಿತ್ತು. ಇದೀಗ ಸೇಡು ತೀರಿಸಿಕೊಳ್ಳಲು ಬೆಂಗಳೂರು ತಂಡ ಸಜ್ಜಾಗಿದೆ. 

ಇದನ್ನೂ ಓದಿ: ಕಾರ್ನರ್ ಕಿಕ್ ಗೋಲ್, 10ರ ಪೋರನ ಫುಟ್ಬಾಲ್ ಆಟಕ್ಕೆ ದಿಗ್ಗಜರೇ ದಂಗು

ಎರಡೂ ತಂಡಗಳು ಈಗಾಗಲೇ ಪ್ಲೇ ಆಫ್ ಗೆ ಅರ್ಹತೆ ಪಡೆದಿರುವುದರಿಂದ ಇತ್ತಂಡಗಳ ಕೋಚ್ ಗಳು ತಮ್ಮ ಮೊದಲ ಆಯ್ಕೆಯ ಆಟಗಾರರಿಗೆ ವಿಶ್ರಾಂತಿ ನೀಡುವ ಸಾಧ್ಯತೆ ಇದೆ.

 

ಬೆಂಗಳೂರು ತಂಡ ಚೆನ್ನೈಯಿನ್ ಹಾಗೂ ಕೇರಳ ವಿರುದ್ಧ ನಡೆದ ಪಂದ್ಯದಲ್ಲಿ ಕೇವಲ ಒಂದು ಅಂಕವನ್ನು ಗಳಿಸಲು ಶಕ್ಯವಾಗಿ ಅದು ತನ್ನ ನೈಜ ಸಾಮರ್ಥ್ಯ ತೋರುವಲ್ಲಿ ವಿಫಲವಾಗಿತ್ತು. ಎಎಫ್ ಸಿ ಅರ್ಹತಾ ಸುತ್ತಿನ ಪಂದ್ಯದಲ್ಲೂ ಮಾಲ್ದೀವ್ಸ್ ನ ಮಾಜಿಯಾ ವಿರುದ್ಧ 2-1 ಗೋಲುಗಳ ಅಂತರದಲ್ಲಿ ಸೋಲನುಭವಿಸಿತ್ತು.

ಇದನ್ನೂ ಓದಿ: ಎದುರಾಳಿಯ ಜನನಾಂಗಕ್ಕೆ ಕಚ್ಚಿದ ಫುಟ್ಬಾಲ್ ಪಟು; ಹಾಕಬೇಕಾಯ್ತು 10 ಹೊಲಿಗೆ !

ಖುಷಿಯ ವಿಚಾರವೆಂದರೆ ಸುನಿಲ್ ಛೆಟ್ರಿ ಹಾಗೂ ಜುವಾನನ್ ತಂಡಕ್ಕೆ ಮರಳಿದ್ದಾರೆ. ನಾಲ್ಕನೇ ಬಾರಿಗೆ ಯಲ್ಲೋ ಕಾರ್ಡ್ ಪಡೆದ ಅಲ್ಬರ್ಟ್ ಸೆರಾನ್ ಪಂದ್ಯದಿಂದ ಹೊರಗುಳಿಯಲಿದ್ದಾರೆ.

‘’ಎಟಿಕೆ ತಂಡ ಪ್ರಶಸ್ತಿ ಗೆದ್ದ ನಂತರ ಪ್ಲೇ ಆಫ್ ತಲುಪಿದ ಏಕೈಕ ತಂಡವೆನಸಿದೆ. ಉಳಿದಂತೆ ಎಲ್ಲಾ ತಂಡಗಳು ಪ್ರಶಸ್ತಿ ಗೆದ್ದ ನಂತರ ಸಂಕಟ ಎದುರಿಸಿವೆ. ಆದರೆ ನಾವು ಮೂರನೇ ಋತುವಿನ್ನೂ ಪ್ಲೇ ಆಫ್ ಹಂತ ತಲುಪಿದ್ದೇವೆ,’’ ಎಂದು ಕ್ವಾಡ್ರಾಟ್ ಹೇಳಿದ್ದಾರೆ.

ಕಳೆ ವಾರಾಂತ್ಯದಲ್ಲಿ ಚೆನ್ನೈಯಿನ್ ಎಫ್ ಸಿ ವಿರುದ್ಧ ನಡೆದ ಪಂದ್ಯದಲ್ಲಿ 3-1 ಗೋಲುಗಳಿಂದ ಸೋಲು ಅನುಐವಿಸಿರುವ ಎಟಿಕೆ ಈಗ ಪುಟಿದೇಳುವ ತವಕದಲ್ಲಿದೆ. ಆಂಟೋನಿಯೋ ಹಬ್ಬಾಸ್ ಪಡೆ, ಪ್ಲೇ ಆಫ್ ಗೆ ಮುನ್ನ ನಡೆಯುವ ಪಂದ್ಯದಲ್ಲಿ ಉತ್ತಮ ಪ್ರದರ್ಶನ ನೀಡುವ ಗುರಿ ಹೊಂದಿದೆ.

ಹಿಂದಿನ ಪಂದ್ಯದಲ್ಲಿ ಗಾಯಗೊಂಡ ಕಾರಣ ಎಟಿಕೆಯ ಸೆಂಟರ್ ಬ್ಯಾಕ್ ಆಟಗಾರ ಅನಾಸ್ ಎಡಥೋಡಿಕಾ ಆರು ತಿಂಗಳ ಅವಧಿಗೆ ಆಟದಿಂದ ಹೊರಗುಳಿಯಲಿದ್ದಾರೆ. ಆಕ್ರಮಣಕಾರಿ ಮಿಡ್ ಫೀಲ್ಡರ್ ಜೇವಿಯರ್ ಹೆರ್ನಾಂಡೀಸ್ ಅಮಾನತುಗೊಂಡಿರುವುದರಿಂದ ಡೇವಿಡ್ ವಿಲಿಯಮ್ಸ್ ಅವರು ತಂಡವನ್ನು ಮುನ್ನಡೆಸಲಿದ್ದಾರೆ.

‘’ನಾಳೆಯ ಪಂದ್ಯದಲ್ಲಿ ನಾವು ಗೆಲ್ಲಬೇಕಾಗಿದೆ. ನಮ್ಮ ಯೋಚನೆಗಳು ಯಾವುದೇ ಕಾರಣಕ್ಕೂ ಬದಾಳಗುವುದಿಲ್ಲ. ಬೆಂಗಳೂರು ಉತ್ತಮ ಕ್ಲಬ್, ಅವರು ಹಾಲಿ ಚಾಂಪಿಯನ್ನರು. ಆದ್ದರಿಂದ ನಮಗೆ ಪಂದ್ಯ ಕಠಿಣ ಎನಿಸಬಹುದು. ನಾವು ಎದುರಾಳಿಗಳನ್ನು ಗೌರವಿಸಿತ್ತೇವೆ. ಸುನಿಲ್ ಛೆಟ್ರಿಯ ಬಗ್ಗೆ ನಾವು ಯಾವುದೇ ಹೊಸ ಯೋಜನೆ ಹಾಕಿಕೊಂಡಿಲ್ಲ. ನಮ್ಮ ಯೋಜನೆ ಬೆಂಗಳೂರು ಎಫ್ ಸಿ ವಿರುದ್ಧವೇ ಹೊರತು ಯಾವುದೇ ವೈಯಕ್ತಿಕ ಆಟಗಾರನ ವಿರುದ್ಧವಲ್ಲ. ಎಂದು ಹಬ್ಬಾಸ್ ಹೇಳಿದ್ದಾರೆ. 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಅಬ್ಬಬ್ಬಾ..! ಲಿಯೋನೆಲ್ ಮೆಸ್ಸಿ ಹೋಟೆಲ್‌ನಲ್ಲಿ ಉಳಿದುಕೊಳ್ಳುವ ಒಂದು ದಿನದ ಚಾರ್ಜ್ ಇಷ್ಟೊಂದಾ?
ಕೋಲ್ಕತಾ ಸ್ಟೇಡಿಯಂನಿಂದ ಲಿಯೋನೆಲ್ ಮೆಸ್ಸಿ ಬೇಗ ನಿರ್ಗಮನ; ಮಿತಿಮೀರಿದ ಅಭಿಮಾನಿಗಳ ದಾಂಧಲೆ!