
ಭುವನೇಶ್ವರ(ಫೆ.23): ಕೇರಳ ಬ್ಲಾಸ್ಟರ್ಸ್ ಮತ್ತು ಒಡಿಶಾ ಎಫ್ ಸಿ ತಂಡಗಳ ನಡುವಿನ ಕೊನೆಯ ಪಂದ್ಯ 4-4 ಗೋಲುಗಳಿಂದ ಡ್ರಾಗೊಂಡಿದ್ದು, ಉಭಯ ತಂಡಗಳು ಅಂಕ ಹಂಚಿಕೊಂಡು ಗೌರವ ಮತ್ತು ನೆಮ್ಮದಿಯೊಂದಿಗೆ ನಿರ್ಗಮಿಸಿದವು.
ಇದನ್ನೂ ಓದಿ: ISL 2020: ಮನೆಯಲ್ಲೇ ಸೋತ ಮುಂಬೈ, ಸೆಮಿಫೈನಲ್ಗೆ ಚೆನ್ನೈ
ಆತಿಥೇಯ ಒಡಿಶಾ ಪರ ಮ್ಯಾನ್ವೆಲ್ ಒನೌ ಅವರ ಹ್ಯಾಟ್ರಿಕ್ (1, 36 ಮತ್ತು 51ನೇ ನಿಮಿಷ) ಮತ್ತು ಪೆರೆಜ್ ಗ್ಯುಡೆಸ್ (44ನೇ ನಿಮಿಷ) ಅವರ ಅದ್ಭುತ ಸಾಧನೆ ಮಾಡಿದರೆ ಪ್ರವಾಸಿ ಕೇರಳ ಬ್ಲಾಸ್ಟರ್ಸ್ ಪರ ನಾರಾಯಣ್ ದಾಸ್ ನೀಡಿದ ಉಡುಗೊರೆ ಗೋಲು (6ನೇ ನಿಮಿಷ), ಮೆಸ್ಸಿ ಬೌಲಿ (28ನೇ ನಿಮಿಷ), ಬಾರ್ಥಲೋಮ್ಯೊ ಒಗ್ಬಚೆ (82 ಮತ್ತು 90ನೇ ನಿಮಿಷ) ಗಳಿಸಿದ ಗೋಲಿನಿಂದ ಸಮಬಲ ಸಾಧಿಸುವಂತಾಯಿತು.
ಗೆದ್ದು ಗೌರವದೊಂದಿಗೆ ನಿರ್ಗಮಿಸಬೇಕೆಂಬುದು ಒಡಿಶಾ ಹಾಗೂ ಕೇರಳ ತಂಡದ ಮುಖ್ಯ ಗುರಿಯಾಗಿತ್ತು. ಇದರ ಪರಿಣಾಮ ಗೋಲು ದಾಖಲಾಗಲೇ ಬೇಕು, ಮನೆಯಂಗಣದಲ್ಲಿ ಮಿಂಚಿದ ಒಡಿಶಾ ಪ್ರಥಮಾರ್ಧದಲ್ಲಿ 3-2 ಗೋಲುಗಳ ಅಂತರದಲ್ಲಿ ಮೇಲುಗೈ ಸಾಧಿಸಿತು. ಮ್ಯಾನ್ವೆಲ್ ಒನೌ ಪಂದ್ಯ ಆರಂಭಗೊಂಡ 1ನೇ ನಿಮಿಷದಲ್ಲಿ ಗೋಲು ಗಳಿಸಿ ತಂಡಕ್ಕೆ ಮುನ್ನಡೆ ಕಲ್ಪಿಸಿದರು. ಆದರೆ ನಾರಾಯಣ ದಾಸ್ ಮಾಡಿದ ಪ್ರಮಾದದಿಂದಾಗಿ ಕೇರಳ ಬ್ಲಾಸ್ಟರ್ಸ್ ಸಮಬಲ ಸಾಧಿಸಿತು.
ಅದು ನಾರಾಯಣ ದಾಸ್ ಅವರ ಉಡುಗೊರೆ ಗೋಲಾಗಿತ್ತು. 28ನೇ ನಿಮಿಷದಲ್ಲಿ ಮೆಸ್ಸಿ ಬೌಲಿ ಗಳಿಸಿದ ಗೋಲಿನಿಂದ ಕೇರಳ ಬ್ಲಾಸ್ಟರ್ಸ್ 2-1 ಅಂತರದಿಂದ ಮುನ್ನಡೆ ಕಂಡಿತು. ಆದರೆ ನಂತರ ಒಡಿಶಾ ಪಂದ್ಯದ ಮೇಲೆ ಹಿಡಿತ ಸಾಧಿಸಿತು. 36ನೇ ನಿಮಿಷದಲ್ಲಿ ಮ್ಯಾನ್ವೆಲ್ ಒನೌ ವೈಯಕ್ತಿಕ ಎರಡನೇ ಗೋಲು ಗಳಿಸುವ ಮೂಲಕ ಪಂದ್ಯ 2-2ರಲ್ಲಿ ಸಮಬಲಗೊಂಡಿತು. 44ನೇ ನಿಮಿಷದಲ್ಲಿ ಪೆರೇಜ್ ಗ್ಯುಡೇಸ್ ಪೆನಾಲ್ಟಿ ಮೂಲಕ ಗಳಿಸಿದ ಗೋಲಿನಿಂದ ಒಡಿಶಾ 3-2 ಅಂತರದಲ್ಲಿ ಪ್ರಥಮಾರ್ಧವನ್ನು ತನ್ನದಾಗಿಸಿಕೊಂಡಿತು.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.