
ಜಾರ್ಖಂಡ್(ಅ.20): ಅಭ್ಯಾಸದ ವೇಳೆ ಸಿಡಿಲು ಬಡಿದು ಫುಟ್ಬಾಲ್ ಕೋಚ್ ಒಬ್ಬರು ಮೈದಾನದಲ್ಲೇ ಸಾವನ್ನಪ್ಪಿದ ಘಟನೆ ಇಲ್ಲಿ ನಡೆದಿದೆ. ಮಾಜಿ ಸಂತೋಷ್ ಟ್ರೋಫಿ ಫುಟ್ಬಾಲಿಗ ಅಭಿಜಿತ್ ಗಂಗೂಲಿ (53) ಮೃತ ದುರ್ದೈವಿ. ಈ ಘಟನೆ ವೇಳೆ ಇಬ್ಬರು ಆಟಗಾರರಿಗೂ ಗಾಯವಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಅಭಿನವ ಬಿಂದ್ರಾ ವಿರುದ್ಧ ಕಿಡಿಕಾರಿದ ಮೇರಿ ಕೋಮ್
ಶನಿವಾರ ಇಲ್ಲಿನ ಬಿರ್ಸಾ ಮುಂಡಾ ಮೈದಾನದಲ್ಲಿ ಬೆಳಗ್ಗೆ 7.30ರ ವೇಳೆಗೆ ಧನ್ಬಾದ್ ರೈಲ್ವೆ ಡಿವಿಷನ್ ಫುಟ್ಬಾಲ್ ತಂಡ ಅಭ್ಯಾಸ ನಡೆಸುತ್ತಿತ್ತು. ಕೋಚ್ ಅಭಿಜಿತ್ ಆಟಗಾರರಿಗೆ ತರಬೇತಿ ನೀಡುತ್ತಿದ್ದರು. ಈ ವೇಳೆ ಮಳೆ ಆರಂಭವಾಗಿ ಸಿಡಿಲು ಬಡಿದ ಕಾರಣ, ಗಂಗೂಲಿ ಪ್ರಜ್ಞೆ ತಪ್ಪಿ ಬಿದ್ದರು. ಆಸ್ಪತ್ರೆಗೆ ಕೊರೆದೊಯ್ಯಲಾಯಿತು. ಆದರೆ ಅವರು ಮಾರ್ಗ ಮಧ್ಯಯೇ ಪ್ರಾಣಬಿಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದರು.
ರಾಂಚಿ ಟೆಸ್ಟ್: ರೋಹಿತ್ ಶರ್ಮಾ ಭರ್ಜರಿ ಡಬಲ್ ಸೆಂಚುರಿ
1993ರ ಸಂತೋಷ್ ಟ್ರೋಫಿಯಲ್ಲಿ ಬಿಹಾರ ತಂಡವನ್ನು ಪ್ರತಿನಿಧಿಸಿದ್ದ ಅಭಿಜಿತ್, 90ರ ದಶಕದ ಶ್ರೇಷ್ಠ ಡಿಫೆಂಡರ್ಗಳಲ್ಲಿ ಒಬ್ಬರೆನಿಸಿದ್ದರು. ರಾಷ್ಟ್ರೀಯ ತಂಡದ ಆಟಗಾರ ರವಿ ಲಾಲ್ ಹೆಂಬ್ರಮ್ ಹಾಗೂ ಉದಯೋನ್ಮುಖ ಆಟಗಾರ ಚಂದನ್ ಟುಡು ಗಾಯಗೊಂಡ ಆಟಗಾರರು.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.