ಎಂ.ಎಸ್.ರಾಮಯ್ಯ ಆಸ್ಪತ್ರೆ ಸಿಇಓ ಶ್ರೀನಿವಾಸ್ ಮೂರ್ತಿ ಮಾತನಾಡಿ, ಮಧ್ಯಾಹ್ನ 1.15 ಕ್ಕೆ ಕಾರ್ಡಿಕ್ ಯುನಿಟ್ ನಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ತಕ್ಷಣ ಎಲ್ಲಾ ಸಿಬ್ಬಂದಿ ರೋಗಿಗಳನ್ನ ಶಿಫ್ಟ್ ಮಾಡಿಲಾಗಿದೆ. ಆಸ್ಪತ್ರೆಯಲ್ಲಿ ಇದ್ದ ಅಗ್ನಿಶಾಮಕ ಪರಿಕರಿಗಳಿಂದ ಬೆಂಕಿ ನಂದಿಸಿಸುವ ಪ್ರಯತ್ನ ಆಗಿದೆ. ಹೀಗಾಗಿ ಅರ್ಧ ಆಸ್ಪತ್ರೆಯ ಅರ್ಧದಷ್ಟು ಭಾಗದಲ್ಲಿ ವಿದ್ಯುತ್ ಸಂಪರ್ಕ ನಿಲ್ಲಿಸಿ, ರೋಗಿಗಳನ್ನ ಶಿಫ್ಟ್ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.