ಶಸ್ತ್ರಚಿಕಿತ್ಸೆ ಬಳಿಕ ಹುಲಿ ಸಿಂಚನಾ ವೇಗವಾಗಿ ಚೇತರಿಸಿಕೊಳ್ಳುತ್ತಿದ್ದು, ಬನ್ನೇರುಘಟ್ಟ ಜೈವಿಕ ಉದ್ಯಾನವನದ ಸಿಬ್ಬಂದಿ ಅದನ್ನು ಪ್ರೀತಿಯಿಂದ ಆರೈಕೆ ಮಾಡುತ್ತಿದ್ದಾರೆ. ಹುಲಿಗೆ ಮರುಜೀವ ನೀಡಿ, ಅದು ದೀರ್ಘಕಾಲ ಆರೋಗ್ಯವಾಗಿರಲು ಕಾರಣವಾದ ವೈದ್ಯರ ತಂಡ ಮತ್ತು ಬನ್ನೇರುಘಟ್ಟ ಜೈವಿಕ ಉದ್ಯಾನವನದ ಆಡಳಿತ ವರ್ಗದ ಈ ಕಾರ್ಯಕ್ಕೆ ಸಾರ್ವಜನಿಕರಿಂದ ಹಾಗೂ ಪ್ರಾಣಿಪ್ರಿಯರಿಂದ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ.