ಸ್ಥಳೀಯರ ಸಮಯಪ್ರಜ್ಞೆ, ಪೊಲೀಸರ ರಕ್ಷಣೆ:
ಅಪಘಾತಕ್ಕೀಡಾಗುವುದನ್ನು ಗಮನಿಸಿದ ಕೂಡಲೇ ಸ್ಥಳೀಯರು ಧಾವಿಸಿ ಬಂದು ರಕ್ಷಣಾ ಕಾರ್ಯಾಚರಣೆಗೆ ಮುಂದಾದರು. ಅಲ್ಲದೆ, ತಕ್ಷಣವೇ ಅತ್ತಿಬೆಲೆ ಪೊಲೀಸ್ ಠಾಣೆಗೆ ಮಾಹಿತಿ ನೀಡಿದರು.
ಮಾಹಿತಿ ತಿಳಿದ ಕೂಡಲೇ ಸ್ಥಳಕ್ಕೆ ಆಗಮಿಸಿದ ಅತ್ತಿಬೆಲೆ ಪೊಲೀಸರು ಮತ್ತು ಸ್ಥಳೀಯರ ನೆರವಿನಿಂದ ಕಾರಿನೊಳಗೆ ಸಿಲುಕಿದ್ದ ಚಾಲಕ ಶ್ರೀನಿವಾಸ್ ಅವರನ್ನು ಸುರಕ್ಷಿತವಾಗಿ ಹೊರತೆಗೆಯಲಾಯಿತು. ಬಳಿಕ ಜಖಂಗೊಂಡಿದ್ದ ಕಾರನ್ನು ಕ್ರೇನ್ ಮೂಲಕ ಹೆದ್ದಾರಿಯಿಂದ ತೆರವುಗೊಳಿಸಿ, ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲಾಯಿತು.