ಸಾವಯವ ಮಾದರಿಯಲ್ಲಿ ಸೇಬು ಹಣ್ಣನ್ನು ಬೆಳೆದಿರುವ ಹಿನ್ನೆಲೆಯಲ್ಲಿ ಸ್ಥಳೀಯ ಮಾರುಕಟ್ಟೆಯಲ್ಲಿಯೂ ಶ್ರೀಶೈಲ ಅವರ ಸೇಬು ಹಣ್ಣುಗಳಿಗೆ ಬೇಡಿಕೆ ಹೆಚ್ಚಾಗಿದೆ. ಜಮಖಂಡಿ, ಮಹಾಲಿಂಗಪುರ, ಮುಧೋಳ, ಬೀಳಗಿ, ರಾಯಬಾಗ ಸೇರಿದಂತೆ ಬೆಂಗಳೂರವರೆಗೆ ರಪ್ತಾಗುತ್ತಿದೆ. ಪ್ರತಿ ಕೆಜಿಗೆ 80-150 ರೂ. ರಂತೆ ಮಾರಾಟ ಬರೋಬ್ಬರಿ 15 ಲಕ್ಷ ಲಾಭವನ್ನ ಪಡೆದಿದ್ದಾರೆ. ರೈತ ಶ್ರೀಶೈಲನ ಸಾಧನೆ ಕಂಡು ತಾವು ಸಹ ಸೇಬು ಬೆಳೆಯಲು ರೈತರು ಉತ್ಸುಕರಾಗಿ ಶ್ರೀಶೈಲ ಜಮೀನಿಗೆ ಭೇಟಿ ನೀಡಿ ತಮ್ಮ ಅನುಭವ ಹಂಚಿಕೊಂಡಿದ್ದು ಕಂಡು ಬಂತು. ಒಟ್ಟಿನಲ್ಲಿ ದೇಶದ ಪ್ರಧಾನಿ ನರೇಂದ್ರ ಮೋದಿ ತಮ್ಮ ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಬಾಗಲಕೋಟೆ ರೈತ ಶ್ರೀಶೈಲನ ಗುಣಗಾನ ಮಾಡಿದ್ದು, ಈ ರೈತನ ಕೃಷಿ ಸಾಧನೆ ಇದೀಗ ಇತರೆ ರೈತರಿಗೂ ಮಾದರಿಯಾಗಿದ್ದು ಸುಳ್ಳಲ್ಲ.
ವರದಿ: ಮಲ್ಲಿಕಾರ್ಜುನ ಹೊಸಮನಿ, ಏಷ್ಯಾನೆಟ್ ಸುವರ್ಣನ್ಯೂಸ್