ಕೊಡಗು, ಮೈಸೂರು, ಹಾಸನ ಸೇರಿದಂತೆ ಬೆಂಗಳೂರು ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ಸಾಕಷ್ಟು ಮಂದಿ ಬಾಳೆ ಬೆಳೆಯುತ್ತಿದ್ದಾರೆ. ಆದರೆ ರೈತರು ನೇರವಾಗಿ ಮಾರುಕಟ್ಟೆಗೆ ಹಣ್ಣುಗಳನ್ನು ಪೂರೈಸಲು ಆಗುತ್ತಿಲ್ಲ. ಆದರೆ, ಶ್ರಾವಣ ಮಾಸದಲ್ಲಿ ಜನರು ಎಷ್ಟೇ ದುಬಾರಿ ಇದ್ದರೂ ಬಾಳೆಹಣ್ಣು ಖರೀದಿ ಮಾಡುತ್ತಾರೆಂಬ ದೃಷ್ಟಿಯಿಂದ ವ್ಯಾಪಾರಿಗಳೇ ಬೆಲೆ ಏರಿಕೆ ಮಾಡಿದ್ದಾರೆ ಎಂದು ರೈತರು ಹೇಳಿದ್ದಾರೆ.