ರಾಜ್ಯದಲ್ಲಿ ಆರ್ಥಿಕ ಚಟುವಟಿಕೆಗಳು ಪ್ರಾರಂಭ: ಟ್ಯಾಕ್ಸ್‌ ಬಗ್ಗೆ ಸಿಎಂ ಖಡಕ್ ಸೂಚನೆ

First Published May 7, 2020, 5:22 PM IST

ಮೂರನೇ ಹಂತದ ಲಾಕ್‌ಡೌನ್‌ನಲ್ಲಿ ಕೊಂಚ ಸಡಿಲಿಕೆ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಈಗ ಮತ್ತೆ ಆರ್ಥಿಕ ಚಟುವಟಿಕೆಗಳು ಪ್ರಾರಂಭವಾಗುತ್ತಿದ್ದು, ತೆರಿಗೆ ಸೋರಿಕೆ ತಡೆಗಟ್ಟಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಹಾಗಾದ್ರೆ ಏನೆಲ್ಲಾ ಸೂಚನೆಗಳನ್ನು ನೀಡಿದ್ದಾರೆ ಎನ್ನುವ ಮಾಹಿತಿ ಈ ಕೆಳಗಿನಂತಿವೆ.

ಇಂದು (ಗುರುವಾರ) ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಸಭೆಯಲ್ಲಿ, ಸಿಎಂ ಬಿಎಸ್ ​ಯಡಿಯೂರಪ್ಪ ಅವರುವಾಣಿಜ್ಯ ತೆರಿಗೆ ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಿದರು.
undefined
ರಾಜ್ಯದಲ್ಲಿ ಈಗ ಮತ್ತೆ ಆರ್ಥಿಕ ಚಟುವಟಿಕೆಗಳು ಪ್ರಾರಂಭವಾಗುತ್ತಿದ್ದು, ತೆರಿಗೆ ಸೋರಿಕೆ ತಡೆಗಟ್ಟಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
undefined
ನಕಲಿ ಇ-ವೇ ಬಿಲ್​ಗಳ ಬಳಕೆ, ಸರಕು ಸಾಗಾಣಿಕೆಗೆ ನೀಡುವ ಸಮಯಾವಕಾಶದ ದುರ್ಬಳಕೆ ಮುಂತಾದ ಪ್ರಕರಣಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.
undefined
ಕೋವಿಡ್ 19ರ ಹಿನ್ನೆಲೆಯಲ್ಲಿ ಲಾಕ್ ಡೌನ್ ಘೋಷಣೆಯಿಂದಾಗಿ ಸಹಜವಾಗಿ ತೆರಿಗೆ ಸಂಗ್ರಹ ಕುಂಠಿತವಾಗಿದೆ. ಮುಂದಿನ ದಿನಗಳಲ್ಲಿ ಇದನ್ನು ಸರಿದೂಗಿಸಲು ಕ್ರಮ ವಹಿಸುವಂತೆ ನಿರ್ದೇಶನ ನೀಡಿದರು.
undefined
ವ್ಯಾಪಾರಿಗಳಿಗೆ ಕಿರುಕುಳ ನೀಡದಂತೆ ಸಲಹೆಯನ್ನು ಸಹ ಕೊಟ್ಟಿದ್ದಾರೆ.
undefined
ಸಭೆಯಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್, ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಐಎಸ್ ಎನ್ ಪ್ರಸಾದ್, ವಾಣಿಜ್ಯ ತೆರಿಗೆ ಇಲಾಖೆ ಆಯುಕ್ತ ಎಂ.ಎಸ್. ಶ್ರೀಕರ್ ಮೊದಲಾದವರು ಉಪಸ್ಥಿತರಿದ್ದರು.
undefined
click me!