ಪುತ್ತಿಗೆ ಶ್ರೀಗಳ ಸಂತಾಪ: ರತನ್ ಟಾಟಾ ಅವರ ನಿಧನಕ್ಕೆ ಪರ್ಯಾಯ ಶ್ರೀ ಪುತ್ತಿಗೆ ಮಠಾಧೀಶರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ದೇಶ ಮೊದಲು ಎಂಬ ತತ್ವ ರತನ್ ಟಾಟಾ ಅವರದ್ದಾಗಿತ್ತು, ಆದರ್ಶಮಯ ಜೀವನ ನಡೆಸಿದ ಅವರು ತಮ್ಮ ಮಠಕ್ಕೆ ಆಗಮಿಸಿದ್ದಾಗ, ಭಗವದ್ಗೀತೆ ಬಗ್ಗೆ ತಮಗಿರುವ ಗೌರವವನ್ನು ವ್ಯಕ್ತಪಡಿಸಿದ್ದರು. ಶ್ರೀ ಕೃಷ್ಣ ಮುಖ್ಯಪ್ರಾಣ ದೇವರು ಅವರ ಆತ್ಮಕ್ಕೆ ಸದ್ಗತಿ ಕೊಡಲಿ ಎಂದು ಶ್ರೀಗಳು ಪ್ರಾರ್ಥಿಸಿದ್ದಾರೆ.