ಅಲ್ಲು ಅರ್ಜುನ್ ಬಂಧನದ ಕುರಿತು ಅಚ್ಚರಿ ಹೇಳಿಕೆ ನೀಡಿದ ನಟ ಸುಮನ್

Published : Dec 16, 2024, 02:24 PM ISTUpdated : Dec 16, 2024, 02:25 PM IST

ಪುಷ್ಪಾ 2 ಸಿನಿಮಾ ಬಿಡುಗಡೆಯಾದ ದಿನದಂದು ನಟ ಅಲ್ಲು ಅರ್ಜುನ್ ಸಂಧ್ಯಾ ಥಿಯೇಟರ್‌ಗೆ ಹೋಗಿದ್ದರಿಂದ ಕಾಲ್ತುಳಿತ ಉಂಟಾಗಿತ್ತು, ಈ ಕಾಲ್ತುಳಿತದಲ್ಲಿ ಮಹಿಳೆ ಸಾವನ್ನಪ್ಪಿದ್ದರೆ ಆಕೆ ಮಗ ಗಂಭೀರವಾಗಿ ಗಾಯಗೊಂಡಿದ್ದನು.

PREV
15
ಅಲ್ಲು ಅರ್ಜುನ್ ಬಂಧನದ ಕುರಿತು ಅಚ್ಚರಿ ಹೇಳಿಕೆ ನೀಡಿದ ನಟ ಸುಮನ್

ಮೃತ  ಮಹಿಳೆಯನ್ನು ರೇವತಿ ಎಂದು  ಗುರುತಿಸಲಾಗಿದೆ. ರೇವತಿ ಕುಟುಂಬಕ್ಕೆ ಅಲ್ಲು ಅರ್ಜುನ್ ವೈಯಕ್ತಕವಾಗಿ 25 ಲಕ್ಷ ರೂಪಾಯಿ ಧನ ಸಹಾಯ ಸಹ ಮಾಡಿದ್ದಾರೆ.

25
ಅಲ್ಲು ಅರ್ಜುನ್

ಇದೇ  ವಿಷಯಕ್ಕೆ  ಸಂಬಂಧಿಸಿದಂತೆ ಅಲ್ಲು ಅರ್ಜುನ್ ಒಂದು ದಿನ ಜೈಲುಪಾಲಾಗಿದ್ದರು. ಇದೀಗ ಜಾಮೀನಿನ ಮೇಲೆ ಅಲ್ಲು ಅರ್ಜುನ್ ಹೊರ ಬಂದಿದ್ದಾರೆ.

35
ನಟ ಸುಮನ್

ಅಲ್ಲು ಅರ್ಜುನ್ ಬಂಧನ ರಾಜಕೀಯ ಪ್ರೇರಿತ ಎಂಬ ಮಾತುಗಳು ಕೇಳಿ ಬಂದಿವೆ. ಸಿನಿಮಾ ಕಲಾವಿದರು ಸಹ  ಅಲ್ಲು ಅರ್ಜುನ್ ಬಂಧನವನ್ನು  ಖಂಡಿಸಿದ್ದಾರೆ.

45

ಇದೀಗ ನಟ ಸುಮನ್ ಸಹ ಅಲ್ಲು ಅರ್ಜುನ್ ಬಂಧನದ  ಕುರಿತು ಪ್ರತಿಕ್ರಿಯಿಸಿದ್ದಾರೆ. ಥಿಯೇಟರ್ ಘಟನೆಯಲ್ಲಿ ಅಲ್ಲು ಅರ್ಜುನ್ ಪಾತ್ರವಿಲ್ಲ ಎಂದು ಹೇಳಿದ್ದಾರೆ.

55

ಥಿಯೇಟರ್ ಮಾಲೀಕರೇ ಹೊಣೆ ಹೊರಬೇಕು. ಮುಂದೆ ಇಂತಹ ಘಟನೆಗಳು ನಡೆಯದಂತೆ ಎಚ್ಚರಿಕೆ ಎಂದು ತೆಗೆದುಕೊಳ್ಳಬೇಕು ಎಂದು ನಟ ಸುಮನ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಈ ಮೂಲಕ ಎಲ್ಲಾ ಹೊಣೆಗಾರಿಕೆಯನ್ನು ಚಿತ್ರಮಂದಿರದ ಮೇಲೆ ಹಾಕಿದ್ದಾರೆ.

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

Read more Photos on
click me!

Recommended Stories