ಇನ್ಮೇಲೆ ತೆಲಂಗಾಣದಲ್ಲಿ ಬೆನಿಫಿಟ್ ಶೋ, ಟಿಕೆಟ್ ದರ ಏರಿಕೆಗೆ ಅವಕಾಶವಿಲ್ಲ ಎಂದು ಸಿಎಂ ರೇವಂತ್ ರೆಡ್ಡಿ ಘೋಷಿಸಿ ಟಾಲಿವುಡ್ಗೆ ಸವಾಲು ಹಾಕಿದ್ದಾರೆ. ರೇವಂತ್ ರೆಡ್ಡಿ ಟೀಕೆಗೆ ಪ್ರತಿಯಾಗಿ ಅಲ್ಲು ಅರ್ಜುನ್ ಮಾಧ್ಯಮಗಳ ಮುಂದೆ ಬಂದು, ಸಿಎಂ ಹೆಸರು ಹೇಳದೆ ತಿರುಗೇಟು ನೀಡಿದ್ದಾರೆ. ಇದು ಆಕಸ್ಮಿಕ ದುರ್ಘಟನೆ, ಉದ್ದೇಶಪೂರ್ವಕವಲ್ಲ. ತಪ್ಪು ಪ್ರಚಾರದಿಂದ ನನ್ನ ವ್ಯಕ್ತಿತ್ವಕ್ಕೆ ಧಕ್ಕೆ ತರುತ್ತಿದ್ದಾರೆ. ಶ್ರೀತೇಜ್ ಆರೋಗ್ಯ, ಭವಿಷ್ಯದ ಬಗ್ಗೆ ನನಗೆ ಕಾಳಜಿ ಇದೆ ಎಂದಿದ್ದಾರೆ.