Published : Aug 04, 2020, 06:20 PM ISTUpdated : Aug 04, 2020, 06:25 PM IST
ಮುಂಬೈ (ಆ. 05) ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವು ಪ್ರಕರಣ ದಿನಕ್ಕೊಂದು ಕುತೂಹಲಕಾರಿ ತಿರುವು ಪಡೆದುಕೊಳ್ಳುತ್ತಿದ್ದು, ಹೊಸ ಬೆಳವಣಿಗೆ ಕಂಡುಬರುತ್ತಲೇ ಇವೆ. ಮಾಹಿತಿ ಕಲೆ ಹಾಕಲು ಮುಂಬೈಗೆ ಬಂದಿದ್ದ ಪೊಲೀಸ್ ಅಧಿಕಾರಿಯನ್ನು ಒತ್ತಾಯಪೂರ್ವಕವಾಗಿ ಕ್ವಾರಂಟೈನ್ ಮಾಡಲಾಗಿತ್ತು. ಹಾಗಾದರೆ ಅಸಲಿಗೆ ಏನು ನಡೆಯುತ್ತಿದೆ.
ಬಿಹಾರ ಪೊಲೀಸರು ಇದೀಗ ಮುಂಬೈ ಅಧಿಕಾರಿ ವರ್ಗದೊಂದಿಗೆ ಅನಿವಾರ್ಯವಾಗಿ ಪೈಟ್ ಗೆ ನಿಂತಿದ್ದಾರೆ.
ಬಿಹಾರ ಪೊಲೀಸರು ಇದೀಗ ಮುಂಬೈ ಅಧಿಕಾರಿ ವರ್ಗದೊಂದಿಗೆ ಅನಿವಾರ್ಯವಾಗಿ ಪೈಟ್ ಗೆ ನಿಂತಿದ್ದಾರೆ.
29
ಈ ಬಗ್ಗೆ ಮಾತನಾಡಿರುವ ಬಿಹಾರ ಡಿಜಿಪಿ ಜಿ ಪಾಂಡೆ, ಮಹಾರಾಷ್ಟ್ರ ಸರ್ಕಾರ ಅವರ ಪೊಲೀಸ್ ವ್ಯವಸ್ಥೆ ಬಗ್ಗೆ ಹೆಮ್ಮೆ ಪಡಬೇಕು! ಸುಶಾಂತ್ ಸಾವನ್ನಪ್ಪಿ ಐವತ್ತು ದಿನ ಕಳೆದರೂ ಒಂದೇ ಒಂದು ಮಾಹಿತಿ ಕಲೆ ಹಾಕಿಲ್ಲ. ಮಾಹಿತಿ ಮೂಲಗಳನ್ನು ಉದ್ದೇಶಪೂರ್ವಕವಾಗಿ ಮುಚ್ಚಿ ಹಾಕಿದೆ ಎಂದು ಆರೋಪಿಸಿದ್ದಾರೆ.
ಈ ಬಗ್ಗೆ ಮಾತನಾಡಿರುವ ಬಿಹಾರ ಡಿಜಿಪಿ ಜಿ ಪಾಂಡೆ, ಮಹಾರಾಷ್ಟ್ರ ಸರ್ಕಾರ ಅವರ ಪೊಲೀಸ್ ವ್ಯವಸ್ಥೆ ಬಗ್ಗೆ ಹೆಮ್ಮೆ ಪಡಬೇಕು! ಸುಶಾಂತ್ ಸಾವನ್ನಪ್ಪಿ ಐವತ್ತು ದಿನ ಕಳೆದರೂ ಒಂದೇ ಒಂದು ಮಾಹಿತಿ ಕಲೆ ಹಾಕಿಲ್ಲ. ಮಾಹಿತಿ ಮೂಲಗಳನ್ನು ಉದ್ದೇಶಪೂರ್ವಕವಾಗಿ ಮುಚ್ಚಿ ಹಾಕಿದೆ ಎಂದು ಆರೋಪಿಸಿದ್ದಾರೆ.
39
ಸುಶಾಂತ್ ಸಿಂಗ್ ಸಾವಿನ ಪ್ರಕರಣ ಇದೀಗ ಎರಡು ರಾಜ್ಯಗಳ ಅಂದರೆ ಮಹಾರಾಷ್ಟ್ರ ಮತ್ತು ಬಿಹಾರದ ನಡುವಿನ ಪೈಟ್ ಆಗಿ ಬದಲಾಗಿದೆ.
ಸುಶಾಂತ್ ಸಿಂಗ್ ಸಾವಿನ ಪ್ರಕರಣ ಇದೀಗ ಎರಡು ರಾಜ್ಯಗಳ ಅಂದರೆ ಮಹಾರಾಷ್ಟ್ರ ಮತ್ತು ಬಿಹಾರದ ನಡುವಿನ ಪೈಟ್ ಆಗಿ ಬದಲಾಗಿದೆ.
49
ತನಿಖೆಗೆ ತೆರಳಿದ್ದ ವಿನಯ್ ತಿವಾರಿ ಅವರನ್ನು ಕ್ವಾರಂಟೈನ್ ಮಾಡಿದ್ದನ್ನು ಬಿಹಾರ ಸಿಎಂ ನಿತೀಶ್ ಕುಮಾರ್ 'ಇದು ಸೂಕ್ತ ಅಲ್ಲ' ಎಂದು ಹೇಳಿದ್ದಾರೆ.
ತನಿಖೆಗೆ ತೆರಳಿದ್ದ ವಿನಯ್ ತಿವಾರಿ ಅವರನ್ನು ಕ್ವಾರಂಟೈನ್ ಮಾಡಿದ್ದನ್ನು ಬಿಹಾರ ಸಿಎಂ ನಿತೀಶ್ ಕುಮಾರ್ 'ಇದು ಸೂಕ್ತ ಅಲ್ಲ' ಎಂದು ಹೇಳಿದ್ದಾರೆ.
59
ಪಾಟ್ನಾ ಐಜಿಪಿ ಸಂಜಯ್ ಸಿಂಗ್ ಮುಂಬೈ ಮುನ್ಸಿಪಲ್ ಕಾರ್ಪೋರೇಶನ್ ಗೆ ಪತ್ರ ಬರೆದಿದ್ದು ವಿನಯ್ ತಿವಾರಿ ಅವರನ್ನು ಕ್ವಾರಂಟೈನ್ ನಿಂದ ಬಿಡಗಡೆ ಮಾಡಿ ತನಿಖೆಗೆ ಅನುವು ಮಾಡಿಕೊಡಬೇಕು ಎಂದು ಕೇಳಿಕೊಂಡಿದ್ದಾರೆ.
ಪಾಟ್ನಾ ಐಜಿಪಿ ಸಂಜಯ್ ಸಿಂಗ್ ಮುಂಬೈ ಮುನ್ಸಿಪಲ್ ಕಾರ್ಪೋರೇಶನ್ ಗೆ ಪತ್ರ ಬರೆದಿದ್ದು ವಿನಯ್ ತಿವಾರಿ ಅವರನ್ನು ಕ್ವಾರಂಟೈನ್ ನಿಂದ ಬಿಡಗಡೆ ಮಾಡಿ ತನಿಖೆಗೆ ಅನುವು ಮಾಡಿಕೊಡಬೇಕು ಎಂದು ಕೇಳಿಕೊಂಡಿದ್ದಾರೆ.
69
ಸುಶಾಂತ್ ಸಿಂಗ್ ತಂದೆ ನೀಡಿದ ದೂರಿನ ಆಧಾರದಲ್ಲಿ ಬಿಹಾರ ಪೊಲೀಸರು ಎಫ್ ಐಆರ್ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಸುಶಾಂತ್ ಸಿಂಗ್ ತಂದೆ ನೀಡಿದ ದೂರಿನ ಆಧಾರದಲ್ಲಿ ಬಿಹಾರ ಪೊಲೀಸರು ಎಫ್ ಐಆರ್ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
79
ತನಿಖೆಯನ್ನು ಮುಂಬೈ ಪೊಲೀಸರಿಂದ ಸಿಬಿಐಗೆ ನೀಡಬೇಕು ಎಂಬ ಸಾರ್ವಜನಿಕ ಹಿತಾಸಕ್ತಿ ಅರ್ಜಿನ ಸಹ ಮುಂಬೈ ಹೈಕೋರ್ಟ್ ನಲ್ಲಿ ವಿಚಾರಣೆಗೆ ಬರಲಿದೆ.
ತನಿಖೆಯನ್ನು ಮುಂಬೈ ಪೊಲೀಸರಿಂದ ಸಿಬಿಐಗೆ ನೀಡಬೇಕು ಎಂಬ ಸಾರ್ವಜನಿಕ ಹಿತಾಸಕ್ತಿ ಅರ್ಜಿನ ಸಹ ಮುಂಬೈ ಹೈಕೋರ್ಟ್ ನಲ್ಲಿ ವಿಚಾರಣೆಗೆ ಬರಲಿದೆ.
89
ಇಲ್ಲಿ ಬಂದು ತನಿಖೆ ಮಾಡಲು ಬಿಹಾರ ಪೊಲೀಸರುಯಾವುದೇ ಹಕ್ಕು ಹೊಂದಿಲ್ಲ ಎಂದು ಮುಂಬೈ ಪೊಲೀಸರು ಹೇಳಿದ್ದಾರೆ.
ಇಲ್ಲಿ ಬಂದು ತನಿಖೆ ಮಾಡಲು ಬಿಹಾರ ಪೊಲೀಸರುಯಾವುದೇ ಹಕ್ಕು ಹೊಂದಿಲ್ಲ ಎಂದು ಮುಂಬೈ ಪೊಲೀಸರು ಹೇಳಿದ್ದಾರೆ.
99
ನಟಿ ರಿಯಾ ಚಕ್ರವರ್ತಿ ಸೇರಿ ಅನೇಕರ ಮೇಲೆ ಪ್ರಕರಣ ದಾಖಲಾಗಿದೆ.
ನಟಿ ರಿಯಾ ಚಕ್ರವರ್ತಿ ಸೇರಿ ಅನೇಕರ ಮೇಲೆ ಪ್ರಕರಣ ದಾಖಲಾಗಿದೆ.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.