ತಮ್ಮ ಫೋಟೋ ಕ್ಲಿಕ್ಕಿಸಿದ ಹಿರಿಯ ಛಾಯಾಗ್ರಾಹಕನ ಶ್ರದ್ಧಾಂಜಲಿ ಸಭೆಗೆ ಸೇರಿದ ಬಾಲಿವುಡ್‌

Published : Aug 24, 2024, 11:21 AM ISTUpdated : Aug 24, 2024, 11:24 AM IST

ಹಿರಿಯ ಛಾಯಾಗ್ರಾಹಕ ಪ್ರದೀಪ್ ಬಾಂದೇಕರ್ ಅವರ ಪ್ರಾರ್ಥನಾ ಸಭೆಯನ್ನು ಶುಕ್ರವಾರ ಸಂಜೆ ಮುಂಬೈನಲ್ಲಿ ಆಯೋಜಿಸಲಾಗಿತ್ತು. ಬಾಲಿವುಡ್‌ನಿಂದ ಶಾರುಖ್ ಖಾನ್, ಆಮಿರ್ ಖಾನ್, ಜಾಕಿ ಶ್ರಾಫ್, ವರುಣ್ ಧವನ್ ಮತ್ತು ವಿದ್ಯಾ ಬಾಲನ್ ಸೇರಿದಂತೆ ಹಲವಾರು ಸೆಲೆಬ್ರಿಟಿಗಳು ಪ್ರದೀಪ್ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಲು ಆಗಮಿಸಿದ್ದರು. 

PREV
114
ತಮ್ಮ ಫೋಟೋ ಕ್ಲಿಕ್ಕಿಸಿದ ಹಿರಿಯ ಛಾಯಾಗ್ರಾಹಕನ ಶ್ರದ್ಧಾಂಜಲಿ ಸಭೆಗೆ ಸೇರಿದ ಬಾಲಿವುಡ್‌

ಪ್ರದೀಪ್ ಬಾಂದೇಕರ್ ಈ ತಿಂಗಳ ಆರಂಭದಲ್ಲಿ ನಿಧನರಾದರು. ಅವರ ಅಕಾಲಿಕ ನಿಧನದ ಸುದ್ದಿಯನ್ನು ಅವರ ಪುತ್ರ ಪ್ರಥಮೇಶ್ ಬಾಂದೇಕರ್ ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದರು. ಪ್ರದೀಪ್ ಬಾಂದೇಕರ್ ಅವರ ಆತ್ಮಕ್ಕೆ ಶಾಂತಿ ಕೋರಿ ಶುಕ್ರವಾರ ಮುಂಬೈನಲ್ಲಿ ಶ್ರದ್ಧಾಂಜಲಿ ಸಭೆ ನಡೆಯಿತು.

214

ಶಾರುಖ್ ಖಾನ್ ತಮ್ಮ ಮ್ಯಾನೇಜರ್ ಪೂಜಾ ದದ್ಲಾನಿ ಅವರೊಂದಿಗೆ ಪ್ರದೀಪ್ ಬಾಂದೇಕರ್ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಲು ಆಗಮಿಸಿದ್ದರು.

314

ಹಿರಿಯ ಛಾಯಾಗ್ರಾಹಕ ಪ್ರದೀಪ್ ಬಾಂದೇಕರ್ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಲು ಬಾಲಿವುಡ್‌ ನಟ ಆಮಿರ್ ಖಾನ್ ಕೂಡ ಆಗಮಿಸಿದ್ದರು.

414

ಹಿರಿಯ ನಟ ಅನಿಲ್ ಕಪೂರ್ ಕೂಡ ಶೃದ್ದಾಂಜಲಿ ಸಭೆಯಲ್ಲಿ ಭಾಗವಹಿಸಿ  ಫೋಟೋಗ್ರಾಫರ್ ಪ್ರದೀಪ್ ಬಾಂದೇಕರ್ ಅವರಿಗೆ  ನಮನ ಸಲ್ಲಿಸಿದರು.

514

ಬಾಲಿವುಡ್‌  ಹಿರಿಯ  ನಟಿ ವಿದ್ಯಾ ಬಾಲನ್ ಅವರು ಕೂಡ ಛಾಯಾಗ್ರಾಹಕ ಪ್ರದೀಪ್ ಬಾಂದೇಕರ್ ಅವರ ಪ್ರಾರ್ಥನಾ ಸಭೆಯಲ್ಲಿ ಭಾಗವಹಿಸಿದ್ದರು.

614

ನಟ ವಿಕ್ಕಿ ಕೌಶಲ್ ಕೂಡ ಪ್ರದೀಪ್ ಬಾಂದೇಕರ್ ಅವರ ಪ್ರಾರ್ಥನಾ ಸಭೆಯಲ್ಲಿ ಭಾಗವಹಿಸಿ ಅವರ ಕುಟುಂಬಕ್ಕೆ ಸಾಂತ್ವನ ಹೇಳಿದರು.

714

ಪ್ರದೀಪ್ ಬಾಂದೇಕರ್ ಅವರ ಕುಟುಂಬಕ್ಕೆ ಸಾಂತ್ವನ ಹೇಳಲು ಮತ್ತು ಅಗಲಿದವರಿಗೆ ಶ್ರದ್ಧಾಂಜಲಿ ಸಲ್ಲಿಸಲು ವರುಣ್ ಧವನ್ ಪ್ರಾರ್ಥನಾ ಸಭೆಯಲ್ಲಿ ಭಾಗವಹಿಸಿದ್ದರು.

814

ಹಿರಿಯ ನಟ ಜಾಕಿ ಶ್ರಾಫ್ ಪ್ರದೀಪ್ ಬಾಂದೇಕರ್ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಲು ಅವರ ಪ್ರಾರ್ಥನಾ ಸಭೆಯಲ್ಲಿ ಭಾಗವಹಿಸಿದ್ದರು.

914

ಹಿರಿಯ ಛಾಯಾಗ್ರಾಹಕ ಪ್ರದೀಪ್ ಬಾಂದೇಕರ್ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಲು ನಟ ಗುಲ್ಶನ್ ಗ್ರೋವರ್ ಕೂಡ ಆಗಮಿಸಿ, ಅವರ ಕುಟುಂಬಕ್ಕೆ ಸಾಂತ್ವಾನ ಹೇಳಿದರು.

1014

ಹಿರಿಯ  ನಟಿ ಪೂನಂ ಧಿಲ್ಲೋನ್ ಪ್ರದೀಪ್ ಬಾಂದೇಕರ್ ಅವರ ಪ್ರಾರ್ಥನಾ ಸಭೆಯಲ್ಲಿ ಭಾಗವಹಿಸಿ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದರು.

1114

ಪ್ರದೀಪ್ ಬಾಂದೇಕರ್ ಅವರ ಪ್ರಾರ್ಥನಾ ಸಭೆಯಲ್ಲಿ ಹಿರಿಯ ನಟ ದಲೀಪ್ ತಾಹಿಲ್ ಕೂಡ ಭಾಗವಹಿಸಿ, ಕುಟುಂಬಕ್ಕೆ ಸಾಂತ್ವಾನ ಹೇಳಿದರು.

1214

ನಟಿ ಸೋನಾಲಿ ಕುಲಕರ್ಣಿ ಛಾಯಾಗ್ರಾಹಕ ಪ್ರದೀಪ್ ಬಾಂದೇಕರ್ ಅವರ ಪ್ರಾರ್ಥನಾ ಸಭೆಗೆ ಆಗಮಿಸಿ, ಆಪ್ತರಿಗೆ , ಕುಟುಂಬಕ್ಕೆ ಸಾಂತ್ವಾನ ಹೇಳಿದರು.

1314

ಫೋಟೋಗ್ರಾಫರ್ ಪ್ರದೀಪ್ ಬಾಂದೇಕರ್ ಅವರ ಪ್ರಾರ್ಥನಾ ಸಭೆಯಲ್ಲಿ ನಟ ನಿರ್ಮಾಪಕ ನಿಖಿಲ್ ದ್ವಿವೇದಿ ಕೂಡ ಭಾಗವಹಿಸಿ, ಸಂತಾಪ ಸೂಚಿಸಿದರು.

1414

ಚಲನಚಿತ್ರ ನಿರ್ಮಾಪಕ ಅಶೋಕ್ ಪಂಡಿತ್ ಪ್ರಾರ್ಥನಾ ಸಭೆಯಲ್ಲಿ ಭಾಗವಹಿಸಿ ಛಾಯಾಗ್ರಾಹಕ ಪ್ರದೀಪ್ ಬಾಂದೇಕರ್ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದರು.

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

Read more Photos on
click me!

Recommended Stories