Published : Jun 23, 2025, 11:05 AM ISTUpdated : Jun 23, 2025, 11:07 AM IST
ಹಾಲಿವುಡ್ ನಿರ್ಮಾಪಕನ ಸಾಥ್ನಿಂದ ನಿತೀಶ್ ತಿವಾರಿ ನಿರ್ದೇಶನದ ಬಹುನಿರೀಕ್ಷಿತ ಚಿತ್ರ ‘ರಾಮಾಯಣ’ಕ್ಕೆ ಹೆಚ್ಚಿನ ಬಲ ಬಂದಿದ್ದು ಈ ಸಿನಿಮಾ ಕಲ್ಪನೆಯನ್ನೂ ಮೀರಿ ಅದ್ದೂರಿತನದಿಂದ ತೆರೆಗೆ ಬರುವ ಸಾಧ್ಯತೆ ಇದೆ.
ಆಸ್ಕರ್ ವಿಜೇತ ಹಾಲಿವುಡ್ ನಿರ್ಮಾಪಕ ಚಾರ್ಲ್ಸ್ ರೋವನ್ ಯಶ್ ನಿರ್ಮಾಣ ಹಾಗೂ ನಟನೆಯಲ್ಲಿ ಮೂಡಿ ಬರುತ್ತಿರುವ ‘ರಾಮಾಯಣ’ ಸಿನಿಮಾ ನಿರ್ಮಾಣದಲ್ಲಿ ಕೈಜೋಡಿಸಿದ್ದಾರೆ.
25
ತನ್ನ ಅಟ್ಲಾಸ್ ಎಂಟರ್ಟೇನ್ಮೆಂಟ್ ಬ್ಯಾನರ್ನಡಿ ಈ ಹಿಂದೆ ‘ಬ್ಯಾಟ್ಸ್ಮ್ಯಾನ್ ವರ್ಸಸ್ ಸೂಪರ್ಮ್ಯಾನ್ : ಡೌನ್ ಆಫ್ ಜಸ್ಟೀಸ್’, ‘ಸುಸೈಡ್ ಸ್ಕ್ವಾಡ್’, ‘ದಿ ಡಾರ್ಕ್ ನೈಟ್ ಟ್ರಯಾಲಜಿ’ಯಂಥಾ ಸಿನಿಮಾಗಳನ್ನು ರೋವನ್ ನಿರ್ಮಿಸಿದ್ದರು.
35
ಇದೀಗ ಈ ದೈತ್ಯ ಹಾಲಿವುಡ್ ನಿರ್ಮಾಪಕನ ಸಾಥ್ನಿಂದ ನಿತೀಶ್ ತಿವಾರಿ ನಿರ್ದೇಶನದ ಬಹುನಿರೀಕ್ಷಿತ ಚಿತ್ರ ‘ರಾಮಾಯಣ’ಕ್ಕೆ ಹೆಚ್ಚಿನ ಬಲ ಬಂದಿದ್ದು ಈ ಸಿನಿಮಾ ಕಲ್ಪನೆಯನ್ನೂ ಮೀರಿ ಅದ್ದೂರಿತನದಿಂದ ತೆರೆಗೆ ಬರುವ ಸಾಧ್ಯತೆ ಇದೆ.
ರಣ್ಬೀರ್ ಕಪೂರ್, ಸಾಯಿ ಪಲ್ಲವಿ ರಾಮ, ಸೀತೆಯಾಗಿ ನಟಿಸುತ್ತಿರುವ ಈ ಸಿನಿಮಾದಲ್ಲಿ ಯಶ್ ರಾವಣನಾಗಿ ಅಬ್ಬರಿಸಲಿದ್ದಾರೆ. ನಮಿತ್ ಮಲ್ಹೋತ್ರಾ, ಯಶ್ ಜೊತೆಗೆ ರೋವನ್ ನಿರ್ಮಾಣ ಮಾಡುತ್ತಿದ್ದಾರೆ.
55
ಹಲವು ಹಾಲಿವುಡ್ ತಂತ್ರಜ್ಞರು, ಕಲಾವಿದರು ಈ ಸಿನಿಮಾಕ್ಕೆ ಕೆಲಸ ಮಾಡುತ್ತಿದ್ದು ಎರಡು ಭಾಗಗಳಲ್ಲಿ ಸಿನಿಮಾ ಮೂಡಿಬರಲಿದೆ. 2026ರ ದೀಪಾವಳಿ ಹಬ್ಬಕ್ಕೆ ಮೊದಲ ಭಾಗ ತೆರೆಗೆ ಅಪ್ಪಳಿಸಲಿದೆ.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.