ಕಂಗನಾ ರಣಾವತ್ ಅವರು ಜಾವೇದ್ ಅಖ್ತರ್ ಅವರ ವಿರುದ್ಧ ಮಾನಹಾನಿ ಮೊಕದ್ದಮೆ ದಾಖಲಿಸಿದ್ದಾರೆ. ಪದೇ ಪದೇ ಜಾವೇದ್ ಅಖ್ತರ್ ಅವರು ಹೂಡಿರುವ ಮಾನಹಾನಿ ಪ್ರಕರಣದಲ್ಲಿ ಪ್ರತಿ ವಿಚಾರಣೆಗೂ ಹಾಜರಾಗುವಂತೆ ಹೇಳುತ್ತಿರುವುದನ್ನು ಪ್ರಶ್ನಿಸಿರುವ ಕಂಗನಾ ಪರ ವಕೀಲರು ಈ ಮೊಕದ್ದಮೆ ವರ್ಗಾವಣೆ ಮಾಡಬೇಕು ಎಂದು ಕೇಳಿಕೊಂಡಿದ್ದಾರೆ.