ಇನ್ಮುಂದೆ ತೆಲಂಗಾಣದಲ್ಲಿ ಬೆನಿಫಿಟ್ ಶೋಗಳಿಗೆ, ಟಿಕೆಟ್ ದರ ಏರಿಕೆಗೆ ಅವಕಾಶ ಇಲ್ಲ ಅಂತ ಘೋಷಿಸುವ ಮೂಲಕ ಟಾಲಿವುಡ್ ಜೊತೆ ಸಿಎಂ ರೇವಂತ್ ರೆಡ್ಡಿ ಸಂದೇಶ ರವಾನಿಸಿದ್ದಾರೆ. ರೇವಂತ್ ರೆಡ್ಡಿ ಟೀಕೆ ಹಿನ್ನೆಲೆಯಲ್ಲಿ ಅಲ್ಲು ಅರ್ಜುನ್ ಮಾಧ್ಯಮಗಳ ಮುಂದೆ ಬಂದಿದ್ದಾರೆ. ಸಿಎಂ ರೇವಂತ್ ರೆಡ್ಡಿ ಹೆಸರು ಹೇಳದೆ, ತಿರುಗೇಟು ಕೊಟ್ಟಿದ್ದಾರೆ. ಬೇಕಂತಲೇ ಮಾಡಿದ್ದಲ್ಲ. ಇದು ಅನಿರೀಕ್ಷಿತ ದುರ್ಘಟನೆ. ಸುಳ್ಳು ಪ್ರಚಾರದಿಂದ ನನ್ನ ವ್ಯಕ್ತಿತ್ವಕ್ಕೆ ಧಕ್ಕೆ ತರ್ತಿದ್ದಾರೆ. ಶ್ರೀತೇಜ್ ಆರೋಗ್ಯ, ಭವಿಷ್ಯದ ಬಗ್ಗೆ ನನಗೆ ಪೂರ್ಣ ಜವಾಬ್ದಾರಿ ಇದೆ ಅಂತ ಹೇಳಿದ್ದಾರೆ.